ETV Bharat / city

ಬೆಳಗಾವಿ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಅತಿಥಿ ಉಪನ್ಯಾಸಕರ ಆಕ್ರೋಶ!

author img

By

Published : Dec 16, 2021, 8:00 PM IST

ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ತೆರಳಿದ ಅಶ್ವತ್ಥನಾರಾಯಣ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

guest lecturers protest
ಅತಿಥಿ ಉಪನ್ಯಾಸಕರ ಪ್ರತಿಭಟನೆ

ಬೆಳಗಾವಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಹೋರಾಟವನ್ನು ಕೂಡಲೇ ಹಿಂಪಡೆಯಿರಿ ಎಂದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸುವರ್ಣ ಗಾರ್ಡನ್​​​ನಲ್ಲಿ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಭೇಟಿ ನೀಡಿ ಹೋರಾಟಗಾರರ ಮನವಿ ಆಲಿಸಿದರು. ಈ ವೇಳೆ ಮಾತನಾಡಿ, ಉಪನ್ಯಾಸಕರ ಪರವಾಗಿ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳುತ್ತಿದ್ದೇವೆ. ಯಾರನ್ನು ಹೊರತು ಪಡಿಸಿ ಕೆಲಸ ಮಾಡಬಾರದೆಂಬ ಕಾರಣಕ್ಕೆ ವಿಪಕ್ಷದವರನ್ನೂ ಸೇರಿಸಿ ವಿಶ್ವಾಸಕ್ಕೆ ತಗೆದುಕೊಳ್ಳುವೆ. ಆದರೆ, ಇಂದು ನೀವು ಸೇರಿದ್ದು ನನಗೆ ಆಶ್ಚರ್ಯವಾಗಿದೆ ಎಂದರು.

ನ್ಯಾಯ ಒದಗಿಸಲು ಬದ್ಧರಿದ್ದೇವೆ:

ಈ ವೇಳೆ ಬೇಕೆ ಬೇಕು ನ್ಯಾಯ ಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ನಿಮಗೆ ಕೊಡಬೇಕಾದ ನ್ಯಾಯ ಕೊಡಲು ನಾವು ಸಂಪೂರ್ಣ ಬದ್ಧರಿದ್ದೇವೆ. ನೀವು ಯೋಚನೆ ಮಾಡುವ ಮುಂಚೆಯೇ ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಿದ್ದೇವೆ. ನಿಮ್ಮ ಐದು ತಿಂಗಳ ಬಾಕಿ ಸಂಬಳ ಕೊಡಲಿಲ್ವಾ ಎಂದು ಇದೇ ವೇಳೆ ಪ್ರಶ್ನಿಸಿದರು.

ಹಠ ಬಿಟ್ಟು ವಿಶ್ವಾಸವಿಟ್ಟು ಪ್ರತಿಭಟನೆ ಹಿಂಪಡೆಯಿರಿ:

ನಮ್ಮ ಸರ್ಕಾರ ನಿಮ್ಮ ಜೊತೆಗಿದ್ದು ಸಹಾನುಭೂತಿ ಇದೆ. ಕಾಲೇಜುಗಳು ನಡೆಯದ ಸಂದರ್ಭದಲ್ಲಿ ಸೇವೆ ಮುಂದುವರಿಸಿದ್ದೇವೆ. ಸೇವಾ ಭದ್ರತೆಗೆ ಸಂಬಂಧ ಪಟ್ಟ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚನೆ ಮಾಡಿದ್ದೇವೆ. ಒಂದು ತಿಂಗಳಲ್ಲಿ ವರದಿ ನೀಡಲು ತಿಳಿಸಿದ್ದೇವೆ. ಹಠ ಬಿಟ್ಟು ನಮ್ಮ ಮೇಲೆ ವಿಶ್ವಾಸವಿಟ್ಟು ಈ ಕೂಡಲೇ ಪ್ರತಿಭಟನೆ ಹಿಂಪಡೆಯಿರಿ ಎಂದು ಸಚಿವರು ಮನವಿ ಮಾಡಿದರು.‌

ಇದನ್ನೂ ಓದಿ: ಜಮೀನು ವಿವಾದದಲ್ಲಿ ವೃದ್ಧೆ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಆದ್ರೆ, ಸಚಿವರ ಮನವಿಗೆ ಕ್ಯಾರೇ ಎನ್ನದ ಪ್ರತಿಭಟನಾಕಾರರು ಅವರ ವಿರುದ್ಧ ಧಿಕ್ಕಾರ ಕೂಗಿದರು. ಹಾಗಾಗಿ ಸಚಿವರು ಭಾಷಣ ಅರ್ಧಕ್ಕೆ ನಿಲ್ಲಿಸಿ ಹೊರಡಲು ಮುಂದಾದರು. ಈ ವೇಳೆ ಸಚಿವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದೇ ವೇಳೆ ಮಹಿಳಾ ಅತಿಥಿ ಶಿಕ್ಷಕರು ನ್ಯಾಯ ಬೇಕು ಎಂದು ಕಣ್ಣೀರು ಹಾಕಿದರು.

ಬೆಳಗಾವಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಹೋರಾಟವನ್ನು ಕೂಡಲೇ ಹಿಂಪಡೆಯಿರಿ ಎಂದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸುವರ್ಣ ಗಾರ್ಡನ್​​​ನಲ್ಲಿ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಭೇಟಿ ನೀಡಿ ಹೋರಾಟಗಾರರ ಮನವಿ ಆಲಿಸಿದರು. ಈ ವೇಳೆ ಮಾತನಾಡಿ, ಉಪನ್ಯಾಸಕರ ಪರವಾಗಿ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳುತ್ತಿದ್ದೇವೆ. ಯಾರನ್ನು ಹೊರತು ಪಡಿಸಿ ಕೆಲಸ ಮಾಡಬಾರದೆಂಬ ಕಾರಣಕ್ಕೆ ವಿಪಕ್ಷದವರನ್ನೂ ಸೇರಿಸಿ ವಿಶ್ವಾಸಕ್ಕೆ ತಗೆದುಕೊಳ್ಳುವೆ. ಆದರೆ, ಇಂದು ನೀವು ಸೇರಿದ್ದು ನನಗೆ ಆಶ್ಚರ್ಯವಾಗಿದೆ ಎಂದರು.

ನ್ಯಾಯ ಒದಗಿಸಲು ಬದ್ಧರಿದ್ದೇವೆ:

ಈ ವೇಳೆ ಬೇಕೆ ಬೇಕು ನ್ಯಾಯ ಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ನಿಮಗೆ ಕೊಡಬೇಕಾದ ನ್ಯಾಯ ಕೊಡಲು ನಾವು ಸಂಪೂರ್ಣ ಬದ್ಧರಿದ್ದೇವೆ. ನೀವು ಯೋಚನೆ ಮಾಡುವ ಮುಂಚೆಯೇ ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಿದ್ದೇವೆ. ನಿಮ್ಮ ಐದು ತಿಂಗಳ ಬಾಕಿ ಸಂಬಳ ಕೊಡಲಿಲ್ವಾ ಎಂದು ಇದೇ ವೇಳೆ ಪ್ರಶ್ನಿಸಿದರು.

ಹಠ ಬಿಟ್ಟು ವಿಶ್ವಾಸವಿಟ್ಟು ಪ್ರತಿಭಟನೆ ಹಿಂಪಡೆಯಿರಿ:

ನಮ್ಮ ಸರ್ಕಾರ ನಿಮ್ಮ ಜೊತೆಗಿದ್ದು ಸಹಾನುಭೂತಿ ಇದೆ. ಕಾಲೇಜುಗಳು ನಡೆಯದ ಸಂದರ್ಭದಲ್ಲಿ ಸೇವೆ ಮುಂದುವರಿಸಿದ್ದೇವೆ. ಸೇವಾ ಭದ್ರತೆಗೆ ಸಂಬಂಧ ಪಟ್ಟ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚನೆ ಮಾಡಿದ್ದೇವೆ. ಒಂದು ತಿಂಗಳಲ್ಲಿ ವರದಿ ನೀಡಲು ತಿಳಿಸಿದ್ದೇವೆ. ಹಠ ಬಿಟ್ಟು ನಮ್ಮ ಮೇಲೆ ವಿಶ್ವಾಸವಿಟ್ಟು ಈ ಕೂಡಲೇ ಪ್ರತಿಭಟನೆ ಹಿಂಪಡೆಯಿರಿ ಎಂದು ಸಚಿವರು ಮನವಿ ಮಾಡಿದರು.‌

ಇದನ್ನೂ ಓದಿ: ಜಮೀನು ವಿವಾದದಲ್ಲಿ ವೃದ್ಧೆ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಆದ್ರೆ, ಸಚಿವರ ಮನವಿಗೆ ಕ್ಯಾರೇ ಎನ್ನದ ಪ್ರತಿಭಟನಾಕಾರರು ಅವರ ವಿರುದ್ಧ ಧಿಕ್ಕಾರ ಕೂಗಿದರು. ಹಾಗಾಗಿ ಸಚಿವರು ಭಾಷಣ ಅರ್ಧಕ್ಕೆ ನಿಲ್ಲಿಸಿ ಹೊರಡಲು ಮುಂದಾದರು. ಈ ವೇಳೆ ಸಚಿವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಇದೇ ವೇಳೆ ಮಹಿಳಾ ಅತಿಥಿ ಶಿಕ್ಷಕರು ನ್ಯಾಯ ಬೇಕು ಎಂದು ಕಣ್ಣೀರು ಹಾಕಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.