ETV Bharat / city

ಕುಂದಾನಗರಿಯಲ್ಲಿ ಧಾರಾಕಾರ ಮಳೆ: ಸಂಬಂಧಿಕರ ಮನೆಗಳತ್ತ ಮುಖಮಾಡಿದ ಸಂತ್ರಸ್ತರು​!

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಹಲವು ಸೇತುವೆಗಳು, ಮನೆಗಳು, ರಸ್ತೆಗಳು ಜಲಾವೃತವಾಗಿವೆ.

author img

By

Published : Jul 23, 2021, 11:01 AM IST

Updated : Jul 23, 2021, 11:18 AM IST

belgaum
ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಬೆಳಗಾವಿ/ಚಿಕ್ಕೋಡಿ: ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಮಾರ್ಕಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗ್ರಾಮದ ಬರ್ಮಾ ಪಾಟೀಲ್​ ಎಂಬಾತ ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಮಾರ್ಕಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ಬಳಿಕ ಸೇತುವೆಯೊಂದರ ಸಮೀಪದಲ್ಲಿ ಮರದ ಟೊಂಗೆ ಹಿಡಿದುಕೊಂಡು ರಕ್ಷಣೆಗಾಗಿ ಕೂಗುತ್ತಿದ್ದ. ಯುವಕನ ಚೀರಾಟ ಕೇಳಿದ ವಾಘವಾಡೆ ಗ್ರಾಮಸ್ಥರು, ಹಗ್ಗದ ಮೂಲಕ ರಕ್ಷಿಸಿದ್ದಾರೆ.

ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ


ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ, ವೇದಗಂಗಾ ನದಿ ತುಂಬಿ ಹರಿಯುತ್ತಿದೆ. ಈ ನೀರು ನಿಪ್ಪಾಣಿ ತಾಲೂಕಿನ‌‌ ಹುನ್ನರಗಿ ಗ್ರಾಮಕ್ಕೆ ನುಗ್ಗಿದ್ದು, ಹಲವು ಮನೆಗಳು ಹಾಗೂ ದೇವಸ್ಥಾನ ಜಲಾವೃತಗೊಂಡಿವೆ. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

ಕುಡಚಿ ಸೇತುವೆ ಜಲಾವೃತ
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದ್ದು, ರಾಯಬಾಗ ತಾಲೂಕಿನ ಕುಡಚಿ-ಉಗಾರ ಮಧ್ಯೆಯಿರುವ ಸೇತುವೆ ಜಲಾವೃತವಾಗಿದೆ.

ಎಂ.ಕೆ.ಹುಬ್ಬಳ್ಳಿಯ ಗಂಗಾಂಬಿಕಾ ದೇವಸ್ಥಾನ ಮುಳುಗಡೆ

ಇನ್ನು, ನಿರಂತರ ಮಳೆಗೆ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ‌. ಇದರ ಪರಿಣಾಮ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯಿರುವ ಗಂಗಾಂಬಿಕಾ ದೇವಸ್ಥಾನ ಮುಳುಗಡೆಯಾಗಿದೆ. ಮಲಪ್ರಭಾ ನದಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನದಿ ಪಾತ್ರದಲ್ಲಿನ ಬೆಳೆಗಳು ನಾಶವಾಗಿವೆ. ಇನ್ನು, ರಾಮದುರ್ಗ ತಾಲೂಕಿನ ‌ನದಿ ಪಾತ್ರದ ಗ್ರಾಮಗಳಲ್ಲೂ ಪ್ರವಾಹ ಭೀತಿ ಎದುರಾಗಿದೆ.

ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶ ಜಲಾವೃತ!

ಧಾರಾಕಾರ ಮಳೆಯಿಂದ ಕಳಸಾ ಹಳ್ಳ ಮೈದುಂಬಿ ಹರಿಯುತ್ತಿದೆ. ಕಣಕುಂಬಿ ಪಾರವಾಡ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಅಲ್ಲದೇ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಆಂಜನೇಯ ದೇಗುಲ ಜಲಾವೃತಗೊಂಡಿದೆ. ಮಲಪ್ರಭಾ ನದಿಯ ಪಕ್ಕದಲ್ಲಿ ‌ಆಂಜನೇಯನ ದೇವಸ್ಥಾನ ಇದ್ದು, ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ‌ಮಲಪ್ರಭಾ ನದಿ ಕೂಡ‌ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.‌ ಮಲಪ್ರಭಾ ನದಿ ನೀರು ಖಾನಾಪುರ ಪಟ್ಟಣಕ್ಕೆ ನುಗ್ಗುತ್ತಿದೆ. ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೀನು ಮಾರುಕಟ್ಟೆ ಕೂಡ ಜಲಾವೃತಗೊಂಡಿದೆ.

ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಖಾನಾಪುರ ಪಟ್ಟಣದ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಮೈದಾನಕ್ಕೆ ನೀರು‌ ನುಗ್ಗಿದ್ದು, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶವೂ ಜಲಾವೃತಗೊಂಡಿದೆ.

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಅಪಾರ ಪ್ರಮಾಣ ಮಳೆಯಾದ ಪರಿಣಾಮ ವೇದಗಂಗಾ ನದಿ ತುಂಬಿ ಹರಿಯುತ್ತಿದ್ದು, ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ.

belgaum
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರಣಿ ಗ್ರಾಮದ ಬಳಿ ಇರುವ ವೇದಗಂಗಾ ನದಿ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿದು ಬರುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ನಿತ್ಯ ಹತ್ತಾರು ಸಾವಿರ ವಾಹನಗಳು ಓಡಾಡುವ ರಾಷ್ಟ್ರೀಯ ಹೆದ್ದಾರಿ 4 ಇದ್ದಾಗಿದ್ದು, ಈಗ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಸಂಬಂಧಿಕರ ಗ್ರಾಮಗಳತ್ತ ಮುಖ ಮಾಡಿದ ಸಂತ್ರಸ್ತರು...

ಬೆಳಗಾವಿ ನಗರದ ಶಿವಾಜಿ ನಗರ, ವಡಗಾವಿ, ಮಹಾಂತೇಶ ನಗರ, ವೀರಭದ್ರ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ಬಳ್ಳಾರಿ ನಾಲಾ ನೀರು ನುಗ್ಗುತ್ತಿದ್ದು, ಜನರ ಜೀವನ‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಮನೆಯಲ್ಲಿ ವೃದ್ಧರು ಸೇರಿದಂತೆ ಸಣ್ಣಪುಟ್ಟ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗುತ್ತಿದೆ.

belgaum
ಸಂಬಂಧಿಕರ ಗ್ರಾಮಗಳತ್ತ ಮುಖ ಮಾಡಿದ ಸಂತ್ರಸ್ತರು

ಕಳೆದ ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇತ್ತ ಬೆಳಗಾವಿ ನಗರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರೆದಿದೆ. ಹೀಗಾಗಿ ಬಳ್ಳಾರಿ ನಾಲಾ ಸೇರಿದಂತೆ ಚರಂಡಿ ನೀರುಗಳು ಮನೆಯಲ್ಲಿ ನುಗ್ಗುತ್ತಿದೆ. ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಮಹಿಳೆಯರು, ಮಕ್ಕಳು ಹರಸಾಹಸಪಡುತ್ತಿದ್ದಾರೆ. ಇತ್ತ ಚರಂಡಿ ನೀರಿನಿಂದ ಜನರಿಗೆ ಅನಾರೋಗ್ಯ ಸಮಸ್ಯೆ ಕಾಡುವ ಆತಂಕ ಎದುರಾಗಿದೆ. ಆದಷ್ಟು ಬೇಗ ಬಳ್ಳಾರಿ ನಾಲಾ ಸ್ವಚ್ಛತಾ ಕಾರ್ಯದ ಜೊತೆಗೆ ಚರಂಡಿಗಳನ್ನು ದುರಸ್ತಿ ಮಾಡುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ ಅರೆಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ: ಯಲ್ಲಾಪುರ-ಅಂಕೋಲಾ ಸಂಚಾರಕ್ಕೆ ಅಡ್ಡಿ

ಬೆಳಗಾವಿ/ಚಿಕ್ಕೋಡಿ: ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಮಾರ್ಕಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗ್ರಾಮದ ಬರ್ಮಾ ಪಾಟೀಲ್​ ಎಂಬಾತ ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಮಾರ್ಕಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ಬಳಿಕ ಸೇತುವೆಯೊಂದರ ಸಮೀಪದಲ್ಲಿ ಮರದ ಟೊಂಗೆ ಹಿಡಿದುಕೊಂಡು ರಕ್ಷಣೆಗಾಗಿ ಕೂಗುತ್ತಿದ್ದ. ಯುವಕನ ಚೀರಾಟ ಕೇಳಿದ ವಾಘವಾಡೆ ಗ್ರಾಮಸ್ಥರು, ಹಗ್ಗದ ಮೂಲಕ ರಕ್ಷಿಸಿದ್ದಾರೆ.

ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ


ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ, ವೇದಗಂಗಾ ನದಿ ತುಂಬಿ ಹರಿಯುತ್ತಿದೆ. ಈ ನೀರು ನಿಪ್ಪಾಣಿ ತಾಲೂಕಿನ‌‌ ಹುನ್ನರಗಿ ಗ್ರಾಮಕ್ಕೆ ನುಗ್ಗಿದ್ದು, ಹಲವು ಮನೆಗಳು ಹಾಗೂ ದೇವಸ್ಥಾನ ಜಲಾವೃತಗೊಂಡಿವೆ. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

ಕುಡಚಿ ಸೇತುವೆ ಜಲಾವೃತ
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದ್ದು, ರಾಯಬಾಗ ತಾಲೂಕಿನ ಕುಡಚಿ-ಉಗಾರ ಮಧ್ಯೆಯಿರುವ ಸೇತುವೆ ಜಲಾವೃತವಾಗಿದೆ.

ಎಂ.ಕೆ.ಹುಬ್ಬಳ್ಳಿಯ ಗಂಗಾಂಬಿಕಾ ದೇವಸ್ಥಾನ ಮುಳುಗಡೆ

ಇನ್ನು, ನಿರಂತರ ಮಳೆಗೆ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ‌. ಇದರ ಪರಿಣಾಮ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯಿರುವ ಗಂಗಾಂಬಿಕಾ ದೇವಸ್ಥಾನ ಮುಳುಗಡೆಯಾಗಿದೆ. ಮಲಪ್ರಭಾ ನದಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನದಿ ಪಾತ್ರದಲ್ಲಿನ ಬೆಳೆಗಳು ನಾಶವಾಗಿವೆ. ಇನ್ನು, ರಾಮದುರ್ಗ ತಾಲೂಕಿನ ‌ನದಿ ಪಾತ್ರದ ಗ್ರಾಮಗಳಲ್ಲೂ ಪ್ರವಾಹ ಭೀತಿ ಎದುರಾಗಿದೆ.

ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶ ಜಲಾವೃತ!

ಧಾರಾಕಾರ ಮಳೆಯಿಂದ ಕಳಸಾ ಹಳ್ಳ ಮೈದುಂಬಿ ಹರಿಯುತ್ತಿದೆ. ಕಣಕುಂಬಿ ಪಾರವಾಡ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಅಲ್ಲದೇ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಆಂಜನೇಯ ದೇಗುಲ ಜಲಾವೃತಗೊಂಡಿದೆ. ಮಲಪ್ರಭಾ ನದಿಯ ಪಕ್ಕದಲ್ಲಿ ‌ಆಂಜನೇಯನ ದೇವಸ್ಥಾನ ಇದ್ದು, ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ‌ಮಲಪ್ರಭಾ ನದಿ ಕೂಡ‌ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.‌ ಮಲಪ್ರಭಾ ನದಿ ನೀರು ಖಾನಾಪುರ ಪಟ್ಟಣಕ್ಕೆ ನುಗ್ಗುತ್ತಿದೆ. ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೀನು ಮಾರುಕಟ್ಟೆ ಕೂಡ ಜಲಾವೃತಗೊಂಡಿದೆ.

ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಖಾನಾಪುರ ಪಟ್ಟಣದ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಮೈದಾನಕ್ಕೆ ನೀರು‌ ನುಗ್ಗಿದ್ದು, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶವೂ ಜಲಾವೃತಗೊಂಡಿದೆ.

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಅಪಾರ ಪ್ರಮಾಣ ಮಳೆಯಾದ ಪರಿಣಾಮ ವೇದಗಂಗಾ ನದಿ ತುಂಬಿ ಹರಿಯುತ್ತಿದ್ದು, ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ.

belgaum
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರಣಿ ಗ್ರಾಮದ ಬಳಿ ಇರುವ ವೇದಗಂಗಾ ನದಿ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿದು ಬರುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ನಿತ್ಯ ಹತ್ತಾರು ಸಾವಿರ ವಾಹನಗಳು ಓಡಾಡುವ ರಾಷ್ಟ್ರೀಯ ಹೆದ್ದಾರಿ 4 ಇದ್ದಾಗಿದ್ದು, ಈಗ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಸಂಬಂಧಿಕರ ಗ್ರಾಮಗಳತ್ತ ಮುಖ ಮಾಡಿದ ಸಂತ್ರಸ್ತರು...

ಬೆಳಗಾವಿ ನಗರದ ಶಿವಾಜಿ ನಗರ, ವಡಗಾವಿ, ಮಹಾಂತೇಶ ನಗರ, ವೀರಭದ್ರ ನಗರ ಸೇರಿದಂತೆ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ಬಳ್ಳಾರಿ ನಾಲಾ ನೀರು ನುಗ್ಗುತ್ತಿದ್ದು, ಜನರ ಜೀವನ‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಮನೆಯಲ್ಲಿ ವೃದ್ಧರು ಸೇರಿದಂತೆ ಸಣ್ಣಪುಟ್ಟ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗುತ್ತಿದೆ.

belgaum
ಸಂಬಂಧಿಕರ ಗ್ರಾಮಗಳತ್ತ ಮುಖ ಮಾಡಿದ ಸಂತ್ರಸ್ತರು

ಕಳೆದ ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇತ್ತ ಬೆಳಗಾವಿ ನಗರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರೆದಿದೆ. ಹೀಗಾಗಿ ಬಳ್ಳಾರಿ ನಾಲಾ ಸೇರಿದಂತೆ ಚರಂಡಿ ನೀರುಗಳು ಮನೆಯಲ್ಲಿ ನುಗ್ಗುತ್ತಿದೆ. ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಮಹಿಳೆಯರು, ಮಕ್ಕಳು ಹರಸಾಹಸಪಡುತ್ತಿದ್ದಾರೆ. ಇತ್ತ ಚರಂಡಿ ನೀರಿನಿಂದ ಜನರಿಗೆ ಅನಾರೋಗ್ಯ ಸಮಸ್ಯೆ ಕಾಡುವ ಆತಂಕ ಎದುರಾಗಿದೆ. ಆದಷ್ಟು ಬೇಗ ಬಳ್ಳಾರಿ ನಾಲಾ ಸ್ವಚ್ಛತಾ ಕಾರ್ಯದ ಜೊತೆಗೆ ಚರಂಡಿಗಳನ್ನು ದುರಸ್ತಿ ಮಾಡುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ ಅರೆಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ: ಯಲ್ಲಾಪುರ-ಅಂಕೋಲಾ ಸಂಚಾರಕ್ಕೆ ಅಡ್ಡಿ

Last Updated : Jul 23, 2021, 11:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.