ಬೆಳಗಾವಿ: ನಾನು ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಎಲ್ಲಿಯೂ ಅರ್ಜಿ ಹಾಕಿಲ್ಲ ಎಂದು ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್ ಸ್ಪಷ್ಟಪಡಿಸಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದಿಂದ ಜವಾಬ್ದಾರಿ ಕೊಟ್ಟಿದ್ದು, ಅದನ್ನು ನಿಭಾಯಿಸುತ್ತಿದ್ದೇನೆ.
ಜೊತೆಗೆ ನನ್ನದೇ ಆದ ನಿಯತಿ ಫೌಂಡೇಶನ್ ಇದ್ದು, ಇದರ ಮೂಲಕ ಸಾಕಷ್ಟು ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ. ಲೋಕಸಭೆ ಉಪಚುನಾವಣೆಗೆ ನನ್ನ ಹೆಸರನ್ನು ಯಾರು ಕಳುಹಿಸಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದ್ರೆ, ಸಾಮಾಜಿಕ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ, ನನ್ನ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಆಗಿರಬಹುದು ಎಂದರು.
ನಾನು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಲ್ಲ. ನಾನು ಎಲ್ಲಿಯೂ ಅರ್ಜಿ ಹಾಲಿಲ್ಲ. ನನಗೆ ಆರು ಹುದ್ದೆಗಳು ಎಲ್ಲಿದ್ದಾವೆ?. ದೀಪಾ ಕುಡಚಿ ನನ್ನ ಸ್ನೇಹಿತೆ, ಅವರು ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ನನಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.