ETV Bharat / city

ಅಕ್ರಮ ಹಣ ಸಾಗಣಿಕೆ: ಓರ್ವನ ಬಂಧನ. 5 ಲಕ್ಷ ನಗದು, 1.5 ಕೆ.ಜಿ ಬೆಳ್ಳಿ ಆಭರಣ ವಶಕ್ಕೆ - ನಿಪ್ಪಾಣಿ ತಾಲೂಕಿನ ಕೊಗನೋಳಿ ರಾಷ್ಟ್ರೀಯ ಹೆದ್ದಾರಿ

ದಾಖಲೆಗಳಿಲ್ಲದೆ ನಗದು ಮತ್ತು ಬೆಳ್ಳಿಯ ಆಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ನಿಪ್ಪಾಣಿ ತಾಲೂಕಿನ ಕೊಗನೋಳಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್​ ನಾಕಾ ಬಳಿ ಚೆಕ್​ಪೋಸ್ಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಹಣ ಸಾಗಾಣಿಕೆ
author img

By

Published : Mar 31, 2019, 11:19 PM IST

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಗನೋಳಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್​ನಾಕಾ ಬಳಿಯ ಚೆಕ್​ಪೋಸ್ಟ್‌ನಲ್ಲಿ ದಾಖಲೆಯಿಲ್ಲದ ನಗದು ಹಾಗೂ ಬೆಳ್ಳಿಯ ಆಭರಣ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ನಿಪ್ಪಾಣಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. 5 ಲಕ್ಷ ನಗದು ಹಾಗೂ ಅಂದಾಜು 1.5 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ನಿಪ್ಪಾಣಿ ತಾಲೂಕಿನ ಕೊಗನೋಳಿ ಬಳಿ ನಿರ್ಮಿಸಿರುವ ಚೆಕ್​ಪೋಸ್ಟ್‌ನಲ್ಲಿ ಎಸ್‌.ಎಸ್‌. ಟಿ. ತಂಡವು ವಾಹನಗಳ ಪರಿಶೀಲನೆ ನಡೆಸುತ್ತಿದ್ದಾಗ, ನಗದು ಹಾಗೂ ಬೆಳ್ಳಿ ಸಾಗಿಸುತ್ತಿರುವುದು ಗೊತ್ತಾಗಿದೆ. ನಿಪ್ಪಾಣಿ ತಾಲೂಕಿನ ಸಂದಲಗಾ ಗ್ರಾಮದ ಶೈಲೇಂದ್ರ ಸಿಂಗ್‌ ಮೋಹನಸಿಂಗ್‌ ರಜಪೂತ ಹಣ ಹಾಗೂ ಆಭರಣಗಳನ್ನು ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ತೇಲಿ, ಅಬಕಾರಿ ಇಲಾಖೆ ಉಪನಿರೀಕ್ಷಕ ಬೆಳ್ಳುಬ್ಬಿ, ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ‌ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ‌ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಗನೋಳಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್​ನಾಕಾ ಬಳಿಯ ಚೆಕ್​ಪೋಸ್ಟ್‌ನಲ್ಲಿ ದಾಖಲೆಯಿಲ್ಲದ ನಗದು ಹಾಗೂ ಬೆಳ್ಳಿಯ ಆಭರಣ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ನಿಪ್ಪಾಣಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. 5 ಲಕ್ಷ ನಗದು ಹಾಗೂ ಅಂದಾಜು 1.5 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ನಿಪ್ಪಾಣಿ ತಾಲೂಕಿನ ಕೊಗನೋಳಿ ಬಳಿ ನಿರ್ಮಿಸಿರುವ ಚೆಕ್​ಪೋಸ್ಟ್‌ನಲ್ಲಿ ಎಸ್‌.ಎಸ್‌. ಟಿ. ತಂಡವು ವಾಹನಗಳ ಪರಿಶೀಲನೆ ನಡೆಸುತ್ತಿದ್ದಾಗ, ನಗದು ಹಾಗೂ ಬೆಳ್ಳಿ ಸಾಗಿಸುತ್ತಿರುವುದು ಗೊತ್ತಾಗಿದೆ. ನಿಪ್ಪಾಣಿ ತಾಲೂಕಿನ ಸಂದಲಗಾ ಗ್ರಾಮದ ಶೈಲೇಂದ್ರ ಸಿಂಗ್‌ ಮೋಹನಸಿಂಗ್‌ ರಜಪೂತ ಹಣ ಹಾಗೂ ಆಭರಣಗಳನ್ನು ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ತೇಲಿ, ಅಬಕಾರಿ ಇಲಾಖೆ ಉಪನಿರೀಕ್ಷಕ ಬೆಳ್ಳುಬ್ಬಿ, ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ‌ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ‌ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ಲಕ್ಷ ನಗದು ಹಾಗೂ ಅಂದಾಜು 1.5 ಕೆ.ಜಿ ಬೆಳ್ಳಿ ಆಭರಣ ವಶ ಚಿಕ್ಕೋಡಿ : ನಿಪ್ಪಾಣಿ ತಾಲೂಕಿನ ಕೊಗನೋಳಿ ರಾಷ್ಟ್ರೀಯ ಹೆದ್ದಾರಿ ೪ ಕರ ಟೋಲ ನಾಕಾ ಬಳಿ ಚೆಕ್‌ ಪೋಸ್ಟ್‌ನಲ್ಲಿ ತಪಾಸಣೆ ವೇಳೆ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 5 ಲಕ್ಷ ನಗದು ಹಾಗೂ ಅಂದಾಜು 1.5 ಕೆ.ಜಿ ಬೆಳ್ಳಿಯ ಆಭರಣಗಳನ್ನು ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ನಿಪ್ಪಾಣಿ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ನಿಪ್ಪಾಣಿ ತಾಲೂಕಿನ ಕೊಗನೋಳಿ ಬಳಿ ನಿರ್ಮಿಸಿರುವ ಚೆಕ್‌ ಪೋಸ್ಟ್‌ನಲ್ಲಿ ಎಸ್‌.ಎಸ್‌.ಟಿ. ತಂಡವು ವಾಹನಗಳ ಪರಿಶೀಲನೆ ನಡೆಸುತ್ತಿದ್ದಾಗ ನಗದು ಹಾಗೂ ಬೆಳ್ಳಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮದ ಶೈಲೇಂದ್ರಸಿಂಗ್‌ ಮೋಹನಸಿಂಗ್‌ ರಜಪೂತ ಅವರು ಹಣ ಹಾಗೂ ಆಭರಣಗಳನ್ನು ಸೌಂದಲಗಾಕ್ಕೆ ಸಾಗಿಸುತ್ತಿಸದ್ದಾಗ ಎಸ್‌.ಎಸ್‌.ಟಿ ತಂಡ ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ತೇಲಿ, ಅಬಕಾರಿ ಇಲಾಖೆ ಉಪನಿರೀಕ್ಷಕ ಬೆಳ್ಳುಬ್ಬಿ, ಪೊಲೀಸ್‌ ಸಿಬ್ಬಂದಿ ತೋರಗಲ್‌ ಕಾರ್ಯಾಚರಣೆ ನಡೆಸಿ‌ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ‌ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜಯ ಕೌಲಗಿ ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.