ETV Bharat / city

ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವುದನ್ನು ವಿರೋಧಿಸಿ ಕರವೇ ಪ್ರತಿಭಟನೆ - undefined

ಕೋಟೆ ಕೆರೆಯ ಆವರಣದಲ್ಲಿ ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವ ಜಿಲ್ಲಾಧಿಕಾರಿಗಳ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ
author img

By

Published : May 26, 2019, 10:58 PM IST

ಬೆಳಗಾವಿ: ನಗರದ ಕೋಟೆ ಕೆರೆಯ ಆವರಣದಲ್ಲಿ ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವ ಜಿಲ್ಲಾಧಿಕಾರಿಗಳ ಕ್ರಮ ವಿರೋಧಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಕೋಟೆ ಕೆರೆಯ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕೋಟೆ ಕೆರೆಗೆ ಜಿಲ್ಲಾಧಿಕಾರಿಗಳು ವಿಧಿಸಿರುವ ಶುಲ್ಕ ಹಿಂಪಡೆಯಬೇಕು, ಇದರಿಂದ ಜನಸಮಾನ್ಯರಿಗೆ ತೀವ್ರ ಹೊರೆಯಾಗುತ್ತದೆ. ಹಣ ಕೊಟ್ಟು ವಾಯು ವಿಹಾರ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕೈಬಿಡಬೇಕೆಂದು ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಶಿವಾನಂದ ತಂಬಾಕಿ ಆಗ್ರಹಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ

ಬೆಳಗ್ಗೆ ಮತ್ತು ಸಾಯಂಕಾಲ ನೂರಾರು ಜನರು ವಾಯು ವಿಹಾರಕ್ಕೆಂದು ಕೋಟೆ ಕೆರೆಗೆ ಆಗಮಿಸುತ್ತಾರೆ. ಆದರೆ ಜಿಲ್ಲಾಧಿಕಾರಿಗಳು ಪ್ರತಿಯೊಬ್ಬರಿಗೆ 10 ರೂಪಾಯಿಯಂತೆ ಶುಲ್ಕ ವಿಧಿಸಿದ್ದಾರೆ. ಅದೇ ರೀತಿ ತಿಂಗಳಿಗೆ 100 ರೂಪಾಯಿಗೆ ಪಾಸ್ ನೀಡುವ ಕುರಿತು ಆದೇಶಿಸಿದ್ದಾರೆ. ಇದರಿಂದ ವಯೋವೃದ್ದರಿಗೆ ಮತ್ತು ಚಿಕ್ಕಮಕ್ಕಳಿಗೆ ತೀವ್ರ ತೊಂದರೆಯಾಗುತ್ತದೆ, ಬಡವರಿಗೆ ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ತಕ್ಷಣವೇ ಜಿಲ್ಲಾಧಿಕಾರಿಗಳು ಈ ಆದೇಶ ಹಿಂಪಡೆಯಬೇಕು ಹಾಗೂ ಈ ಸಂಬಂಧ ನಾಳೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಬೆಳಗಾವಿ: ನಗರದ ಕೋಟೆ ಕೆರೆಯ ಆವರಣದಲ್ಲಿ ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವ ಜಿಲ್ಲಾಧಿಕಾರಿಗಳ ಕ್ರಮ ವಿರೋಧಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಕೋಟೆ ಕೆರೆಯ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕೋಟೆ ಕೆರೆಗೆ ಜಿಲ್ಲಾಧಿಕಾರಿಗಳು ವಿಧಿಸಿರುವ ಶುಲ್ಕ ಹಿಂಪಡೆಯಬೇಕು, ಇದರಿಂದ ಜನಸಮಾನ್ಯರಿಗೆ ತೀವ್ರ ಹೊರೆಯಾಗುತ್ತದೆ. ಹಣ ಕೊಟ್ಟು ವಾಯು ವಿಹಾರ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕೈಬಿಡಬೇಕೆಂದು ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಶಿವಾನಂದ ತಂಬಾಕಿ ಆಗ್ರಹಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ

ಬೆಳಗ್ಗೆ ಮತ್ತು ಸಾಯಂಕಾಲ ನೂರಾರು ಜನರು ವಾಯು ವಿಹಾರಕ್ಕೆಂದು ಕೋಟೆ ಕೆರೆಗೆ ಆಗಮಿಸುತ್ತಾರೆ. ಆದರೆ ಜಿಲ್ಲಾಧಿಕಾರಿಗಳು ಪ್ರತಿಯೊಬ್ಬರಿಗೆ 10 ರೂಪಾಯಿಯಂತೆ ಶುಲ್ಕ ವಿಧಿಸಿದ್ದಾರೆ. ಅದೇ ರೀತಿ ತಿಂಗಳಿಗೆ 100 ರೂಪಾಯಿಗೆ ಪಾಸ್ ನೀಡುವ ಕುರಿತು ಆದೇಶಿಸಿದ್ದಾರೆ. ಇದರಿಂದ ವಯೋವೃದ್ದರಿಗೆ ಮತ್ತು ಚಿಕ್ಕಮಕ್ಕಳಿಗೆ ತೀವ್ರ ತೊಂದರೆಯಾಗುತ್ತದೆ, ಬಡವರಿಗೆ ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ತಕ್ಷಣವೇ ಜಿಲ್ಲಾಧಿಕಾರಿಗಳು ಈ ಆದೇಶ ಹಿಂಪಡೆಯಬೇಕು ಹಾಗೂ ಈ ಸಂಬಂಧ ನಾಳೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವುದನ್ನು ವಿರೋಧಿಸಿ ಕರವೆ ಪ್ರತಿಭಟನೆ ಬೆಳಗಾವಿ : ಕೋಟೆ ಕೆರೆಯ ಆವರಣದಲ್ಲಿ ವಾಯು ವಿಹಾರಕ್ಕೆ ಶುಲ್ಕ ವಿಧಿಸಿರುವ ಜಿಲ್ಲಾಧಿಕಾರಿಗಳ ಕ್ರಮ ವಿರೋಧಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಕೋಟೆ ಕೆರೆಯ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ. ಕೋಟೆ ಕೆರೆಗೆ ಜಿಲ್ಲಾಧಿಕಾರಿಗಳು ವಿಧಿಸಿರುವ ಶುಲ್ಕ ಹಿಂಪಡೆಯಬೇಕು. ಇದರಿಂದ ಜನಸಮಾನ್ಯರಿಗೆ ತೀವ್ರ ಹೊರೆಯಾಗುತ್ತದೆ. ಹಣ ಕೊಟ್ಟು ವಾಯು ವಿಹಾರ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ತಕ್ಷಣ ಕೈಬಿಡಬೇಕೆಂದು ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಶಿವಾನಂದ ತಂಬಾಕಿ ಆಗ್ರಹಿಸಿದ್ದಾರೆ. ಬೆಳಿಗ್ಗೆ ಮತ್ತು ಸಾಯಂಕಾಲ ನೂರಾರು ಜನರು ವಾಯು ವಿಹಾರಕ್ಕೆಂದು ಕೋಟೆ ಕೆರೆಗೆ ಆಗಮಿಸುತ್ತಾರೆ ಆದರೆ ಜಿಲ್ಲಾಧಿಕಾರಿಗಳು ಪ್ರತಿಯೊಬ್ಬರಿಗೆ ಹತ್ತು ರೂಪಾಯಿಯಂತೆ ಶುಲ್ಕ ವಿಧಿಸಿದ್ದಾರೆ. ಅದೇ ರೀತಿ ತಿಂಗಳಿಗೆ ನೂರು ರೂಪಾಯಿಗೆ ಪಾಸ್ ನೀಡುವ ಕುರಿತು ಆದೇಶಿಸಿದ್ದಾರೆ. ಇದರಿಂದ ವಯೋವೃದ್ದರಿಗೆ ಮತ್ತು ಚಿಕ್ಕಮಕ್ಕಳಿಗೆ ತೀವ್ರ ತೊಂದರೆ ಯಾಗುತ್ತದೆ. ಬಡವರಿಗೆ ಆರ್ಥಿಕ ಹೊರೆಯಾಗುತ್ತದೆ ಆದ್ದರಿಂದ ತಕ್ಷಣವೇ ಜಿಲ್ಲಾಧಿಕಾರಿಗಳು ಈ ಆದೇಶ ಹಿಂಪಡೆಯಬೇಕು. ಈ ಸಂಬಂಧ ನಾಳೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಬೈಟ್ : ಶಿವಾನಂದ ತಂಬಾಕಿ ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.