ETV Bharat / city

ರಾಯಣ್ಣ ಪ್ರತಿಮೆ ಸ್ಥಾಪನೆ: ರಮೇಶ್​ ಜಾರಕಿಹೊಳಿಗೆ ಕೃತಜ್ಞತೆ ಸಲ್ಲಿಸಿದ ಕುರುಬರ ಸಂಘ

author img

By

Published : Sep 6, 2020, 8:21 PM IST

ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಶ್ರಮಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪೀರನವಾಡಿ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.

kuruba Association thanked Minister Ramesh Zarakiholi
ರಾಯಣ್ಣ ಪ್ರತಿಮೆ ಸ್ಥಾಪನೆ: ರಮೇಶ್​ ಜಾರಕಿಹೊಳಿಗೆ ಕೃತಜ್ಞತೆ ಸಲ್ಲಿಸಿದ ಕುರುಬರ ಸಂಘ

ಬೆಳಗಾವಿ: ತಾಲೂಕಿನ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಶ್ರಮಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪೀರನವಾಡಿ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.

ರಾಯಣ್ಣ ಪ್ರತಿಮೆ ಸ್ಥಾಪನೆ: ರಮೇಶ್​ ಜಾರಕಿಹೊಳಿಗೆ ಕೃತಜ್ಞತೆ ಸಲ್ಲಿಸಿದ ಕುರುಬರ ಸಂಘ

ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಕಗ್ಗಂಟಾಗಿತ್ತು. ಈ ವಿವಾದವನ್ನು ಸುಲಭ ಹಾಗೂ ಸರಳವಾಗಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಸಹಕಾರ ನೀಡಿದ್ದಕ್ಕಾಗಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ. ರಾಜೇಂದ್ರ, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ ಸರಳವಾಗಿ ಬಗೆಹರಿದಿದೆ. ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ರಮೇಶ್​ ಜಾರಕಿಹೊಳಿ, ಪ್ರತಿಮೆ ಎಲ್ಲಿ ಸ್ಥಾಪಿಸಬೇಕೆಂಬುದನ್ನು ಶೀಘ್ರವೇ ಮಾಡಿ ತೋರಿಸುತ್ತೇವೆ ಎಂದಿದ್ದರು. ಅದರಂತೆ ದಿಟ್ಟ ನಿರ್ಧಾರ ಕೈಗೊಂಡು ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಇದಕ್ಕೆ ಕಾರಣರಾದ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಬೆಳಗಾವಿ: ತಾಲೂಕಿನ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಶ್ರಮಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಪೀರನವಾಡಿ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.

ರಾಯಣ್ಣ ಪ್ರತಿಮೆ ಸ್ಥಾಪನೆ: ರಮೇಶ್​ ಜಾರಕಿಹೊಳಿಗೆ ಕೃತಜ್ಞತೆ ಸಲ್ಲಿಸಿದ ಕುರುಬರ ಸಂಘ

ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಕಗ್ಗಂಟಾಗಿತ್ತು. ಈ ವಿವಾದವನ್ನು ಸುಲಭ ಹಾಗೂ ಸರಳವಾಗಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಸಹಕಾರ ನೀಡಿದ್ದಕ್ಕಾಗಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ. ರಾಜೇಂದ್ರ, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ ಸರಳವಾಗಿ ಬಗೆಹರಿದಿದೆ. ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ರಮೇಶ್​ ಜಾರಕಿಹೊಳಿ, ಪ್ರತಿಮೆ ಎಲ್ಲಿ ಸ್ಥಾಪಿಸಬೇಕೆಂಬುದನ್ನು ಶೀಘ್ರವೇ ಮಾಡಿ ತೋರಿಸುತ್ತೇವೆ ಎಂದಿದ್ದರು. ಅದರಂತೆ ದಿಟ್ಟ ನಿರ್ಧಾರ ಕೈಗೊಂಡು ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಇದಕ್ಕೆ ಕಾರಣರಾದ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.