ETV Bharat / city

ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್​ ಪುಂಡ : ಬೆಳಗಾವಿಯಲ್ಲಿ ನಾಡದ್ರೋಹಿಯ ಉದ್ಧಟತನ - ಶಿವಸೇನೆ ಮುಖಂಡನ ಕಾರು ತಡೆದು ಮಹಾರಾಷ್ಟ್ರ ಬೋರ್ಡ್ ಕಿತ್ತಾಕಿದ ವಿಚಾರ

ಬೆಳಗಾವಿಯಲ್ಲಿ ಶಿವಸೇನೆ ಎಂಇಎಸ್ ಒಂದೇ ನಾಣ್ಯದ ಎರಡು ಮುಖಗಳು. ನಮ್ಮ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಸದ್ಯ ಬಂಧಿಸಿಲ್ಲ. ಇನ್ಮುಂದೆ ಈ ರೀತಿಯಾದರೆ ನಾವು ಸಹಿಸಲ್ಲ ಎಂದು ಎಂಇಎಸ್ ಮುಖಂಡನೊಬ್ಬ ‌ಧಮ್ಕಿ ಹಾಕಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

MES leader Shubham Salunke statement about kannadigas
ಬೆಳಗಾವಿಯಲ್ಲಿ ಎಂಇಎಸ್ ಪುಂಡನ ಉದ್ಧಟತನ
author img

By

Published : Mar 16, 2021, 11:29 AM IST

Updated : Mar 16, 2021, 12:09 PM IST

ಬೆಳಗಾವಿ: ಬೆಳಗಾವಿಯ ಎಂಇಎಸ್ ಮುಖಂಡನೊಬ್ಬ ಉದ್ಧಟತನದ ಹೇಳಿಕೆ ನೀಡಿದ್ದಾನೆ. ಶಿವಸೇನೆ ಮುಖಂಡನ ಕಾರು ತಡೆದು ಮಹಾರಾಷ್ಟ್ರ ಬೋರ್ಡ್ ಕಿತ್ತಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ‌ಮಾತನಾಡಿರುವ ಎಂಇಎಸ್ ಮುಖಂಡ ಶುಭಂ ಸಾಳುಂಕೆ, ಬೆಳಗಾವಿಯಲ್ಲಿ ಶಿವಸೇನೆ ಎಂಇಎಸ್ ಒಂದೇ ನಾಣ್ಯದ ಎರಡು ಮುಖಗಳು. ನಮ್ಮ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಸದ್ಯ ಬಂಧಿಸಿಲ್ಲ. ಇನ್ಮುಂದೆ ಈ ರೀತಿಯಾದರೆ ಸಹಿಸಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾನೆ. ಏನಾದರೂ ಅನಾಹುತ ಆದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತೆ. ನಾವು ನಮ್ಮ ಪದ್ಧತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ಬೆಳಗಾವಿ ನೆಲದಲ್ಲೇ ನಿಂತು ಎಂಇಎಸ್ ಮುಖಂಡ ‌ಧಮ್ಕಿ ಹಾಕಿದ್ದಾನೆ.

ಓದಿ: ಸಿದ್ದರಾಮಯ್ಯ V/s ರೂಪಾಲಿ: ಸದನದಲ್ಲಿ ಸದ್ದು ಮಾಡಿದ ಮಾತೃ ಪೂರ್ಣ ಯೋಜನೆ

ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಕನ್ನಡ ಹೋರಾಟಗಾರರ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ನಾವು ಬೇರೆ ಪದ್ಧತಿಯಿಂದ ಉತ್ತರ ಕೊಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಕಾನೂನು ಕೈಗೆ ತೆಗೆದುಕೊಳ್ಳುವುದಾಗಿ ಎಂಇಎಸ್ ಪುಂಡ ಬೆದರಿಕೆ ಹಾಕಿದ್ದಾನೆ.

ಬೆಳಗಾವಿ: ಬೆಳಗಾವಿಯ ಎಂಇಎಸ್ ಮುಖಂಡನೊಬ್ಬ ಉದ್ಧಟತನದ ಹೇಳಿಕೆ ನೀಡಿದ್ದಾನೆ. ಶಿವಸೇನೆ ಮುಖಂಡನ ಕಾರು ತಡೆದು ಮಹಾರಾಷ್ಟ್ರ ಬೋರ್ಡ್ ಕಿತ್ತಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ‌ಮಾತನಾಡಿರುವ ಎಂಇಎಸ್ ಮುಖಂಡ ಶುಭಂ ಸಾಳುಂಕೆ, ಬೆಳಗಾವಿಯಲ್ಲಿ ಶಿವಸೇನೆ ಎಂಇಎಸ್ ಒಂದೇ ನಾಣ್ಯದ ಎರಡು ಮುಖಗಳು. ನಮ್ಮ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಸದ್ಯ ಬಂಧಿಸಿಲ್ಲ. ಇನ್ಮುಂದೆ ಈ ರೀತಿಯಾದರೆ ಸಹಿಸಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾನೆ. ಏನಾದರೂ ಅನಾಹುತ ಆದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತೆ. ನಾವು ನಮ್ಮ ಪದ್ಧತಿಯಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ಬೆಳಗಾವಿ ನೆಲದಲ್ಲೇ ನಿಂತು ಎಂಇಎಸ್ ಮುಖಂಡ ‌ಧಮ್ಕಿ ಹಾಕಿದ್ದಾನೆ.

ಓದಿ: ಸಿದ್ದರಾಮಯ್ಯ V/s ರೂಪಾಲಿ: ಸದನದಲ್ಲಿ ಸದ್ದು ಮಾಡಿದ ಮಾತೃ ಪೂರ್ಣ ಯೋಜನೆ

ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಕನ್ನಡ ಹೋರಾಟಗಾರರ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ನಾವು ಬೇರೆ ಪದ್ಧತಿಯಿಂದ ಉತ್ತರ ಕೊಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಕಾನೂನು ಕೈಗೆ ತೆಗೆದುಕೊಳ್ಳುವುದಾಗಿ ಎಂಇಎಸ್ ಪುಂಡ ಬೆದರಿಕೆ ಹಾಕಿದ್ದಾನೆ.

Last Updated : Mar 16, 2021, 12:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.