ETV Bharat / city

ಗುತ್ತಿಗೆದಾರ ಸಂತೋಷ ಮನೆಗೆ ಸಚಿವ ನಿರಾಣಿ ಭೇಟಿ: ವೈಯಕ್ತಿಕ ‌₹5 ಲಕ್ಷ ‌ಪರಿಹಾರ ವಿತರಣೆ

author img

By

Published : Apr 14, 2022, 8:42 PM IST

ಆತ್ಮಹತ್ಯೆಗೆ ಶರಣಾದ ಸಂತೋಷ ಪಾಟೀಲ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿ, ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಿದರು.

ಗುತ್ತಿಗೆದಾರ ಸಂತೋಷ ಮನೆಗೆ ಸಚಿವ ನಿರಾಣಿ ಭೇಟಿ
ಗುತ್ತಿಗೆದಾರ ಸಂತೋಷ ಮನೆಗೆ ಸಚಿವ ನಿರಾಣಿ ಭೇಟಿ

ಬೆಳಗಾವಿ: ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ ಪಾಟೀಲ ಮನೆಗೆ ಸಚಿವ ಮುರುಗೇಶ ನಿರಾಣಿ ‌ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ‌ಹೇಳಿದರು. ಇದೇ ವೇಳೆ, ಪತ್ನಿ ಜಯಶ್ರೀ ಹಾಗೂ ತಾಯಿ ಪಾರ್ವತಿಗೆ ವೈಯಕ್ತಿಕವಾಗಿ 5 ಲಕ್ಷ ‌ಪರಿಹಾರ ನೀಡಿದರು. ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಇದ್ದರು.

ಇದೇ ವೇಳೆ ಸಂತೋಷ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಕುಟುಂಬಸ್ಥರು ಕೋರಿದರು. ಈ ಕುರಿತು ಮನವಿ ಮಾಡಿದ್ದೇವೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂತೋಷ ಪಾಟೀಲಗೆ ಬರಬೇಕಿದ್ದ ಕಾಮಗಾರಿಯ ಬಿಲ್ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಕ್ರಮವಹಿಸುವುದಾಗಿ ನಿರಾಣಿ‌ ಭರವಸೆ ನೀಡಿದರು.

ಗುತ್ತಿಗೆದಾರ ಸಂತೋಷ ಮನೆಗೆ ಸಚಿವ ನಿರಾಣಿ ಭೇಟಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗೋಷ್ಟಿ ನಡೆಸಿದ ಈಶ್ವರಪ್ಪ ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಇನ್ನೊಂದೆಡೆ, ಆರೋಪಿಗಳ ಬಂಧನವಾಗಬೇಕು ಎಂದು ಸಂತೋಷ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆಹೋರಾತ್ರಿ ಧರಣಿ ಮುಂದುವರಿಸಿದೆ.

ಇದನ್ನೂ ಓದಿ: ರಾಜೀನಾಮೆ ಕೇಳಿಲ್ಲ, ಈಶ್ವರಪ್ಪ ಬಂಧನ ಆಗ್ಬೇಕು: ಗುತ್ತಿಗೆದಾರ ಸಂತೋಷ ಸಹೋದರ

ಬೆಳಗಾವಿ: ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ ಪಾಟೀಲ ಮನೆಗೆ ಸಚಿವ ಮುರುಗೇಶ ನಿರಾಣಿ ‌ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ‌ಹೇಳಿದರು. ಇದೇ ವೇಳೆ, ಪತ್ನಿ ಜಯಶ್ರೀ ಹಾಗೂ ತಾಯಿ ಪಾರ್ವತಿಗೆ ವೈಯಕ್ತಿಕವಾಗಿ 5 ಲಕ್ಷ ‌ಪರಿಹಾರ ನೀಡಿದರು. ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಇದ್ದರು.

ಇದೇ ವೇಳೆ ಸಂತೋಷ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಕುಟುಂಬಸ್ಥರು ಕೋರಿದರು. ಈ ಕುರಿತು ಮನವಿ ಮಾಡಿದ್ದೇವೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂತೋಷ ಪಾಟೀಲಗೆ ಬರಬೇಕಿದ್ದ ಕಾಮಗಾರಿಯ ಬಿಲ್ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಕ್ರಮವಹಿಸುವುದಾಗಿ ನಿರಾಣಿ‌ ಭರವಸೆ ನೀಡಿದರು.

ಗುತ್ತಿಗೆದಾರ ಸಂತೋಷ ಮನೆಗೆ ಸಚಿವ ನಿರಾಣಿ ಭೇಟಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗೋಷ್ಟಿ ನಡೆಸಿದ ಈಶ್ವರಪ್ಪ ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಇನ್ನೊಂದೆಡೆ, ಆರೋಪಿಗಳ ಬಂಧನವಾಗಬೇಕು ಎಂದು ಸಂತೋಷ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆಹೋರಾತ್ರಿ ಧರಣಿ ಮುಂದುವರಿಸಿದೆ.

ಇದನ್ನೂ ಓದಿ: ರಾಜೀನಾಮೆ ಕೇಳಿಲ್ಲ, ಈಶ್ವರಪ್ಪ ಬಂಧನ ಆಗ್ಬೇಕು: ಗುತ್ತಿಗೆದಾರ ಸಂತೋಷ ಸಹೋದರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.