ETV Bharat / city

ಹೊರ ರಾಜ್ಯಗಳಿಂದ ಬಂದವ್ರಿಗೆ ಬೆಳಗಾವಿ ರೈಲು ನಿಲ್ದಾಣದಲ್ಲಿಲ್ಲ ತಪಾಸಣೆ

author img

By

Published : Apr 28, 2021, 11:35 AM IST

ಬೆಳಗಾವಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನೇಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ.

Belgaum Central Railway Station
ಹೊರ ರಾಜ್ಯಗಳಿಂದ ಬಂದವರು ತಪಾಸಣೆಯಿಲ್ಲದೇ ಬೆಳಗಾವಿಗೆ ಎಂಟ್ರಿ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿದ್ದರೂ ನಗರದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಹೊರರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಯಾವುದೇ ಆರೋಗ್ಯ ತಪಾಸಣೆ ನಡೆಸದೆ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ. ಇದು ಇಲ್ಲಿನ ಜನರನ್ನು ಆತಂಕಕ್ಕೀಡು ಮಾಡಿದೆ.

ಯಾವುದೇ ವೈದ್ಯಕೀಯ ತಪಾಸಣೆ ಇಲ್ಲದೆ ಹೊರರಾಜ್ಯಗಳಿಂದ ಜಿಲ್ಲೆಗೆ ಜನರ ಆಗಮನ

ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ 25ಕ್ಕೂ ಹೆಚ್ಚು ರೈಲುಗಳು ಬೆಂಗಳೂರು, ಗೋವಾ, ರಾಜಸ್ಥಾನ, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಮೂಲೆಗಳಿಂದ ಆಗಮಿಸುತ್ತವೆ. ಈ ರೈಲುಗಳಲ್ಲಿ ಸಾವಿರಾರು ಜನರು ಬೆಳಗಾವಿಗೆ ಬರುತ್ತಾರೆ. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ರಾಜ್ಯಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಆದರೆ, ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಪರಿಣಾಮ ತಪಾಸಣೆಯಿಲ್ಲದೇ ನೂರಾರು ಜನರು ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಕೊರೊನಾ ಆತಂಕ ಹೆಚ್ಚುತ್ತಿದೆ.

ಜಿಲ್ಲೆಯಲ್ಲಿ ಪ್ರತಿನಿತ್ಯ 300ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ತಪಾಸಣೆಯಿಲ್ಲದೇ ಹೊರ ರಾಜ್ಯಗಳಿಂದ ಜನರು ರಾಜಾರೋಷವಾಗಿ ಬೆಳಗಾವಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ: ಜನತಾ ಕರ್ಫ್ಯೂ ಎಫೆಕ್ಟ್: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಅಮಲಿನಲ್ಲಿ ತೇಲಿದ ಮದ್ಯಪ್ರಿಯರು!

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿದ್ದರೂ ನಗರದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಹೊರರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಯಾವುದೇ ಆರೋಗ್ಯ ತಪಾಸಣೆ ನಡೆಸದೆ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ. ಇದು ಇಲ್ಲಿನ ಜನರನ್ನು ಆತಂಕಕ್ಕೀಡು ಮಾಡಿದೆ.

ಯಾವುದೇ ವೈದ್ಯಕೀಯ ತಪಾಸಣೆ ಇಲ್ಲದೆ ಹೊರರಾಜ್ಯಗಳಿಂದ ಜಿಲ್ಲೆಗೆ ಜನರ ಆಗಮನ

ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಪ್ರತಿನಿತ್ಯ 25ಕ್ಕೂ ಹೆಚ್ಚು ರೈಲುಗಳು ಬೆಂಗಳೂರು, ಗೋವಾ, ರಾಜಸ್ಥಾನ, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಮೂಲೆಗಳಿಂದ ಆಗಮಿಸುತ್ತವೆ. ಈ ರೈಲುಗಳಲ್ಲಿ ಸಾವಿರಾರು ಜನರು ಬೆಳಗಾವಿಗೆ ಬರುತ್ತಾರೆ. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ರಾಜ್ಯಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಆದರೆ, ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಪರಿಣಾಮ ತಪಾಸಣೆಯಿಲ್ಲದೇ ನೂರಾರು ಜನರು ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಕೊರೊನಾ ಆತಂಕ ಹೆಚ್ಚುತ್ತಿದೆ.

ಜಿಲ್ಲೆಯಲ್ಲಿ ಪ್ರತಿನಿತ್ಯ 300ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ತಪಾಸಣೆಯಿಲ್ಲದೇ ಹೊರ ರಾಜ್ಯಗಳಿಂದ ಜನರು ರಾಜಾರೋಷವಾಗಿ ಬೆಳಗಾವಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ: ಜನತಾ ಕರ್ಫ್ಯೂ ಎಫೆಕ್ಟ್: ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಅಮಲಿನಲ್ಲಿ ತೇಲಿದ ಮದ್ಯಪ್ರಿಯರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.