ETV Bharat / city

ಕಮಲ ಬಿಟ್ಟು ಕೈ ಮೇಲೆ ಕುಳಿತ ಕಾಗೆ? ಬಿಜೆಪಿ ಬಿಡಲು ಕಾರಣವೇನು? - ಕಾಡಾ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಈಗ ಕಾಂಗ್ರೆಸ್

ನಾಲ್ಕು ಬಾರಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ ರಾಜು ಕಾಗೆ ದಿಢೀರನೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.

ಕಮಲ ಬಿಟ್ಟು ಕೈ ಹಿಡಿಯಲ್ಲಿದ್ದಾರಾ ರಾಜು ಕಾಗೆ: ಬಿಜೆಪಿ ಬಿಡಲು ಕಾರಣವೇನು..?
author img

By

Published : Nov 12, 2019, 10:53 AM IST

ಚಿಕ್ಕೋಡಿ: ನಾಲ್ಕು ಬಾರಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ ರಾಜು ಕಾಗೆ ದಿಢೀರನೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.

ಬಿಜೆಪಿ ನಾಯಕರಿಂದ ಬೇಸತ್ತಿರುವ ರಾಜು ಕಾಗೆ ಈಗಾಗಲೇ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರನ್ನು ಭೇಟಿಯಾಗಿ ಕಾಗವಾಡ ಇಲ್ಲವೇ ಅಥಣಿ ಕ್ಷೇತ್ರಕ್ಕೆ ತಮ್ಮ ಟಿಕೆಟ್ ಪಕ್ಕಾ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ ಎಂದು ಅವರ ಬೆಂಬಲಿಗರು ಕ್ಷೇತ್ರದ ತುಂಬೆಲ್ಲಾ ಮಾತನಾಡಿಕೊಳ್ಳುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದಿಂದ ಸೋಲು ಅನುಭವಿಸಿದ್ದ ರಾಜು ಕಾಗೆ, ಉಪ ಚುನಾವಣೆ ನಿಗದಿಯಾಗುತ್ತಿದ್ದಂತೆ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ಕಾಗೆ ಸರ್ಕಾರ ನೀಡಿದ ಕಾಡಾ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಚಿಕ್ಕೋಡಿ: ನಾಲ್ಕು ಬಾರಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ ರಾಜು ಕಾಗೆ ದಿಢೀರನೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.

ಬಿಜೆಪಿ ನಾಯಕರಿಂದ ಬೇಸತ್ತಿರುವ ರಾಜು ಕಾಗೆ ಈಗಾಗಲೇ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರನ್ನು ಭೇಟಿಯಾಗಿ ಕಾಗವಾಡ ಇಲ್ಲವೇ ಅಥಣಿ ಕ್ಷೇತ್ರಕ್ಕೆ ತಮ್ಮ ಟಿಕೆಟ್ ಪಕ್ಕಾ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ ಎಂದು ಅವರ ಬೆಂಬಲಿಗರು ಕ್ಷೇತ್ರದ ತುಂಬೆಲ್ಲಾ ಮಾತನಾಡಿಕೊಳ್ಳುತ್ತಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದಿಂದ ಸೋಲು ಅನುಭವಿಸಿದ್ದ ರಾಜು ಕಾಗೆ, ಉಪ ಚುನಾವಣೆ ನಿಗದಿಯಾಗುತ್ತಿದ್ದಂತೆ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ಕಾಗೆ ಸರ್ಕಾರ ನೀಡಿದ ಕಾಡಾ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

Intro:ಕಮಲ ಬಿಟ್ಟು ಕೈ ಹಿಡಿಯಲ್ಲಿದ್ದಾರೆ ರಾಜು ಕಾಗೆ ಬಿಜೆಪಿ ಬಿಡಲು ಕಾರಣವೇನು?
Body:
ಚಿಕ್ಕೋಡಿ :
ಸ್ಟೋರಿ

ಬಿಜೆಪಿ ಪಕ್ಷದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಹಿರಿಯ ಮತ್ಸದ್ದಿ ರಾಜಕಾರಣಿ ರಾಜು ಕಾಗೆ ದಿಡೀರನೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟ್ಟಿ ಮಾಡಿರೋದು ಕುತುಹಲಕ್ಕೆ ಕಾರಣವಾಗಿದೆ.
 
ನ.10 ರಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ ಅವರನ್ನು ಭೇಟ್ಟಿಯಾಗಿ ಕಾಗವಾಡ ಹಾಗೂ ಅಥಣಿ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಕುರಿತು ಮಾತನಾಡಿದ್ದು ಅವರು ಸೋಮವಾರ ನ.11 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ ಅವರನ್ನು ಭೆಟ್ಟಿಯಾಗಿ ಕಾಗವಾಡ ಇಲ್ಲವೇ ಅಥಣಿ ಎರಡರಲ್ಲಿ ಒಂದು ಕ್ಷೇತ್ರಕ್ಕೆ ತಮ್ಮ ಟಿಕೇಟ್ ಪಕ್ಕಾ ಮಾಡಿಕೊಂಡಿದ್ದು ಇನ್ನೇರಡು ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತವಾಗಿದೆ ಎನ್ನುವ ಮಾತುಗಳು ಈಗಾಗಲೇ ಕಾಗೆ ಬೆಂಬಲಿಗರು ಕ್ಷೇತ್ರದ ತುಂಬೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.

2018ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ರಾಜು ಕಾಗೆ ಉಪ ಚುನಾವಣೆ ನಿಗದಿಯಾಗುತ್ತಿದ್ದಂತೆಯೇ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರ ಪೈಕಿ ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ ಒಬ್ಬರು. ಇವರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೇಟ್ ಫಿಕ್ಸ್ ಆಗಿದ್ದು ಕಾಗೆ ಅವರಿಗೆ ಟಿಕೇಟ್ ಕೊಡಲು ಸಾಧ್ಯವಿಲ್ಲ ಎಂದು ಖಡಾ ಖ‌ಂಡಿತವಾಗಿ ಬಿಜೆಪಿ ವರಿಷ್ಟರು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡಿರುವ ಕಾಗೆ, ಸರ್ಕಾರ ನೀಡಿದ ಕಾಡಾ ಅಧ್ಯಕ್ಷ ಸ್ಥಾನ ತಿರಸ್ಕರಿಸಿ ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಬಿಜೆಪಿ ಬಿಡಲು ಕಾರಣ ಇವುಗಳೆನಾ?

* ಹುಬ್ಬಳ್ಳಿಯಲ್ಲಿ ಸಿಎಂ ಅಪಮಾನ

ಸಿಎಂ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಸಭೆಯಲ್ಲಿ 33 ಸಾವಿರ ಮತಗಳಿಂದ ಬಿದ್ದಿರುವ ರಾಜುಕಾಗೆಗೆ ಟಿಕೆಟ್ ನೀಡಬೇಕಾ ಎಂದು ಹೇಳಿದ್ದಾರೆ. ಇದಕ್ಕಿಂತ ಅವಮಾನ ಬೇಕಾ? ನಾನು ಅಲ್ಲಿ ಏಕೆ ಇರಬೇಕು? ಎಂದು ರಾಜು‌ ಕಾಗೆ ಅವರು ಕಿಡಿಕಾರಿದ್ದಾರೆ. ಸಣ್ಣ ಮಕ್ಕಳಿಗೆ ಕೊಟ್ಟಂತೆ ಕಾಡಾ ಅಧ್ಯಕ್ಷ ಸ್ಥಾನ ನೀಡಿದಕ್ಕೆ ಕಾಗೆ ಮುನಿಸಿಕೊಂಡರಾ? ಎಂಬ ಮಾತುಗಳು‌ ಕೇಳಿ‌ ಬರುತ್ತಿವೆ.

* ಕಾಗೆ ಬಿಜೆಪಿಯಲ್ಲಿ ಹಿರಿಯ

ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರನ್ನು ಹೊರತು ಪಡಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಹಿರಿಯರಾದವರೂ ರಾಜು ಕಾಗೆ ಅವರಿಗೆ ಯಾವುದೇ ಹುದ್ದೆ ನೀಡದೆ ಅವರನ್ನು ಕಡೆಗಣಿಸಿದ್ದಕ್ಕೆ ಕಾಗೆ ಬಿಜಿಪಿ ಬಿಟ್ಟರಾ?

* ಕಾಗವಾಡದಲ್ಲಿ ಬಿಜೆಪಿ ಕಟ್ಟಿದ್ದೇ ರಾಜು ಕಾಗೆ

ಕಳೆದ 20 ವರ್ಷಗಳ ಹಿಂದೆ ಕ್ಷೇತ್ರದಲ್ಲಿ 5 ರಿಂದ 6 ಸಾವಿರ ಮತಗಳನ್ನು ಪಡೆಯುತ್ತಿದ್ದ ಬಿಜೆಪಿ ಪಕ್ಷ. ಕಾಗೆ ಬಿಜೆಪಿ ಪಕ್ಷ ಸೇರಿದಾಗ ಪಕ್ಷವನ್ನು ಬೇರು ಮಟ್ಟದಲ್ಲಿ ಪಕ್ಷವನ್ನು ಕಟ್ಟಿ 60 ಸಾವಿರಕ್ಕೂ ಅಧಿಕ ಕಾರ್ಯಕರ್ತರ ಸೈನ್ಯವನ್ನು ಕಟ್ಟಿದ್ದಾರೆ. ಆದರೆ, ಈಗ ಅನರ್ಹ ಶಾಸಕರು ರಾಜ್ಯದಲ್ಲಿ ಸರಕಾರ ರಚಿಸಲು ಸಹಾಯ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ಪಕ್ಷವನ್ನು ಕಟ್ಟಿ ಬೆಳಸಿದವರನ್ನು ಕಡೆಗಣಿಸಿದ್ದಕ್ಕೆ ಪಕ್ಷ ತೊರದರಾ ರಾಜು ಕಾಗೆ.

* ಕಾರ್ಯಕರ್ತರ ಒತ್ತಾಯಕ್ಕೆ ಪಕ್ಷ ತೊರದರಾ ಕಾಗೆ?

ಕಾಂಗ್ರಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಟ್ಟು ನಮ್ಮಗೆ ಪಶ್ವಾತಾಪವಾಗಿದೆ ನೀವೇ ಈ ಬಾರಿ ಕಾಂಗ್ರಸ್‍ನಿಂದ ಟಿಕೇಟ್ ತೆಗೆದುಕೊಳ್ಳಿ ಎಂದು ಕಾಗವಾಡ ಮತಕ್ಷೇತ್ರದ ಹಲವಾರು ಮುಖಂಡರು ನನಗೆ ಹೇಳಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಕಾಗೆ ಅವರು ಕಾರ್ಯಕರ್ತರ ಒತ್ತಾಯಕ್ಕೆ ಪಕ್ಷ ತೊರೆದರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಾಗೆ ಪ್ರಾಬಲ್ಯ : ಒಮ್ಮೆ ಸಂಯುಕ್ತ ಜನತಾದಳ (ಜೆಡಿಯು) ಹಾಗೂ ಸತತ 3 ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕಾಗೆ, ಕಾಗವಾಡವನ್ನು ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದರು. ತಮ್ಮದೇ ಆದ ವೋಟ್‌ಬ್ಯಾಂಕ್‌ ಹೊಂದಿರುವ ವಿಶ್ವಾಸ ಅವರದಾಗಿದೆ. ಆದರೆ, ಅನರ್ಹ ಶಾಸಕರು ಬಿಜಿಪಿ ಸರ್ಕಾರ ರಚನೆ‌ ಮಾಡಲು ಸಹಾಯ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ರಾಜು ಕಾಗೆ ಅವರಿಗೆ ಬಿಜಿಪಿಯಿಂದ ಟಿಕೇಟ್ ನೀಡುತ್ತಿಲ್ಲ ಇದರಿಂದ ಪಕ್ಷ ತೋರೆಯುತ್ತಿದ್ದಾರೆ ಎನ್ನುವ ಮಾತುಗಳು ಕ್ಷೇತ್ರದ ತುಂಬೆಲ್ಲ ಕೇಳಿ ಬರುತ್ತಿವೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.