ETV Bharat / city

ಮತಾಂತರ ನಿಷೇಧ ಕಾಯ್ದೆಯನ್ನ ಕೆಲ ಕಾಂಗ್ರೆಸಿಗರೂ ಸ್ವಾಗತ ಮಾಡ್ತಿದ್ದಾರೆ:  ಯಡಿಯೂರಪ್ಪ

author img

By

Published : Dec 13, 2021, 2:30 PM IST

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿರುವುದು ಕಾಂಗ್ರೆಸ್‌ನ ಕೆಲವರಿಗೆ ಇಷ್ಟವಿದ್ದು, ಸ್ವಾಗತ ಮಾಡ್ತಾ ಇದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಬೆಳಗಾವಿಯಲ್ಲಿ ತಿಳಿಸಿದ್ದಾರೆ.

Some congressmen welcome the conversion ban Bill: Yediyurappa
ಮತಾಂತರ ನಿಷೇಧ ಕಾಯ್ದೆ ಜಾರಿ ನಿರ್ಧಾರಕ್ಕೆ ಕೆಲ ಕಾಂಗ್ರೆಸಿಗರಿಂದ ಸ್ವಾಗತ: ಮಾಜಿ ಸಿಎಂ ಯಡಿಯೂರಪ್ಪ

ಬೆಳಗಾವಿ: ಮತಾಂತರ ನಿಷೇಧ ವಿಧೇಯಕವನ್ನು ಈ ಅಧಿವೇಶನದಲ್ಲೇ ಮಂಡಿಸಲಿದ್ದೇವೆ. ಬಿಜೆಪಿ ತರುವ ಮಸೂದೆಗಳನ್ನು ವಿರೋಧ ಮಾಡೋದೇ ಸಿದ್ದರಾಮಯ್ಯ ಅವರ ಸ್ವಭಾವ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಇದೇ ವೇಳೆ ಕಿಡಿ ಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಯನ್ನ ಕೆಲ ಕಾಂಗ್ರೆಸಿಗರು ಸ್ವಾಗತ ಮಾಡ್ತಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ವಿರೋಧ ಮಾಡದೇ ಕಾಂಗ್ರೆಸ್ ಸಹಕಾರ ಕೊಡಬೇಕು. ಈ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಬೇರೆ ಬೇರೆ ರಾಜ್ಯಗಳಲ್ಲಿಯೂ ಈ ಕಾಯ್ದೆ ಇದೆ. ನಮ್ಮ ರಾಜ್ಯದಲ್ಲೂ ತರುತ್ತೇವೆ. ಇಂತಹ ಕಾಯ್ದೆಗಳಿಗೆ ಸಿದ್ದರಾಮಯ್ಯ ವಿರೋಧ ಮಾಡುತ್ತಲೇ ಇರ್ತಾರೆ. ಕಾಂಗ್ರೆಸ್‌ನ ಕೆಲವರಿಗೆ ಈ ಕಾಯ್ದೆ ತರುವುದು ಇಷ್ಟವಿದ್ದು, ಸ್ವಾಗತ ಮಾಡ್ತಾ ಇದ್ದಾರೆ ಎಂದರು.

ಇದೇ ವೇಳೆ, ಲವ್ ಜಿಹಾದ್ ನಿಷೇಧ ಕಾಯ್ದೆ ಬಗ್ಗೆ ಸಚಿವ ಸುನಿಲ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಅವರು ಹೇಳಿದ್ದು ಸರಿ ಇದೆ. ಇತರ ರಾಜ್ಯಗಳಲ್ಲೂ ಈ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಲ್ಲೂ ಕಾನೂನು ತರಲು ಯತ್ನಿಸುತ್ತೇವೆ ಎಂದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರಾಜಕೀಯ ದುರುದ್ದೇಶಪೂರಿತ.. ಅದಕ್ಕೆ ನಮ್ಮ ವಿರೋಧವಿದೆ - ಸಿದ್ದರಾಮಯ್ಯ

ಬೆಳಗಾವಿ: ಮತಾಂತರ ನಿಷೇಧ ವಿಧೇಯಕವನ್ನು ಈ ಅಧಿವೇಶನದಲ್ಲೇ ಮಂಡಿಸಲಿದ್ದೇವೆ. ಬಿಜೆಪಿ ತರುವ ಮಸೂದೆಗಳನ್ನು ವಿರೋಧ ಮಾಡೋದೇ ಸಿದ್ದರಾಮಯ್ಯ ಅವರ ಸ್ವಭಾವ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಇದೇ ವೇಳೆ ಕಿಡಿ ಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಯನ್ನ ಕೆಲ ಕಾಂಗ್ರೆಸಿಗರು ಸ್ವಾಗತ ಮಾಡ್ತಿದ್ದಾರೆ: ಮಾಜಿ ಸಿಎಂ ಯಡಿಯೂರಪ್ಪ

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ವಿರೋಧ ಮಾಡದೇ ಕಾಂಗ್ರೆಸ್ ಸಹಕಾರ ಕೊಡಬೇಕು. ಈ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಬೇರೆ ಬೇರೆ ರಾಜ್ಯಗಳಲ್ಲಿಯೂ ಈ ಕಾಯ್ದೆ ಇದೆ. ನಮ್ಮ ರಾಜ್ಯದಲ್ಲೂ ತರುತ್ತೇವೆ. ಇಂತಹ ಕಾಯ್ದೆಗಳಿಗೆ ಸಿದ್ದರಾಮಯ್ಯ ವಿರೋಧ ಮಾಡುತ್ತಲೇ ಇರ್ತಾರೆ. ಕಾಂಗ್ರೆಸ್‌ನ ಕೆಲವರಿಗೆ ಈ ಕಾಯ್ದೆ ತರುವುದು ಇಷ್ಟವಿದ್ದು, ಸ್ವಾಗತ ಮಾಡ್ತಾ ಇದ್ದಾರೆ ಎಂದರು.

ಇದೇ ವೇಳೆ, ಲವ್ ಜಿಹಾದ್ ನಿಷೇಧ ಕಾಯ್ದೆ ಬಗ್ಗೆ ಸಚಿವ ಸುನಿಲ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಅವರು ಹೇಳಿದ್ದು ಸರಿ ಇದೆ. ಇತರ ರಾಜ್ಯಗಳಲ್ಲೂ ಈ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಲ್ಲೂ ಕಾನೂನು ತರಲು ಯತ್ನಿಸುತ್ತೇವೆ ಎಂದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರಾಜಕೀಯ ದುರುದ್ದೇಶಪೂರಿತ.. ಅದಕ್ಕೆ ನಮ್ಮ ವಿರೋಧವಿದೆ - ಸಿದ್ದರಾಮಯ್ಯ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.