ಬೆಳಗಾವಿ: ಕಳೆದೆರಡು ವರ್ಷಗಳಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರಿಂದ ತೆರವಾದ ಸ್ಥಾನಕ್ಕೆ ಎಸ್.ವಿ.ದರ್ಶನ್ ನೇಮಕವಾಗಿದ್ದಾರೆ.
2013ನೇ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ದರ್ಶನ್ ಅವರು 2016ನೇ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿದ್ದು, ಈ ಮೊದಲು ಕೋಲಾರ ಜಿ.ಪಂ.ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.