ETV Bharat / city

RSS ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದೆ: ಮುರುಗೇಶ್​ ನಿರಾಣಿ

author img

By

Published : Jun 1, 2022, 12:55 PM IST

ಆರ್​ಎಸ್ಎಸ್​ನವರು ದೇಶಕ್ಕಾಗಿ ತಮ್ಮನ್ನೇ ತಾವು ಸಮರ್ಪಣೆ ಮಾಡಿಕೊಂಡಿದ್ದಾರೆ. RSS ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದ್ದು, ನಾನು ಒಬ್ಬ ಸ್ವಯಂಸೇವಕ. ಅವರ ಆಶೀರ್ವಾದದಿಂದ ನಾನು ಕೈಗಾರಿಕಾ ಸಚಿವನಾದೆ ಅಂತಾ ಹೇಳಿಕೊಳ್ಳಲು ಬಹಳ ಹೆಮ್ಮೆಯಾಗುತ್ತದೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಮುರುಗೇಶ್​ ನಿರಾಣಿ
ಮುರುಗೇಶ್​ ನಿರಾಣಿ

ಬೆಳಗಾವಿ: ಆರ್​ಎಸ್​ಎಸ್​ನವರು ತಮ್ಮ ಸ್ವಂತಕ್ಕೆ ಏನನ್ನು ಮಾಡಿಕೊಳ್ಳದೇ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ತಮ್ಮನ್ನೇ ತಾವು ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. ಅವರ ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದ್ದು, ನಾನು ಒಬ್ಬ ಸ್ವಯಂಸೇವಕ ಅಂತ ಹೇಳಿಕೊಳ್ಳಲು ಬಹಳ ಹೆಮ್ಮೆಯಾಗುತ್ತದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ದೊಡ್ಡವರು ಉತ್ತರ ಕೊಟ್ಟಿದ್ದಾರೆ. ಆದ್ರೆ, ಆರ್​ಎಸ್ಎಸ್​ನವರು ದೇಶಕ್ಕಾಗಿ ತಮ್ಮನ್ನೇ ತಾವು ಸಮರ್ಪಣೆ ಮಾಡಿಕೊಂಡಿದ್ದಾರೆ. ಅವರೇನು ಸ್ಟಾರ್ ಹೋಟೆಲ್‌ನಲ್ಲಿ ಇರಲ್ಲ, ವಿಮಾನದಲ್ಲಿ ಓಡಾಡುವುದಿಲ್ಲ. ಅತ್ಯಂತ ಕಟ್ಟ ಕಡೆಯ ಮನುಷ್ಯ ಯಾವ ರೀತಿ ಜೀವನ ಮಾಡ್ತಾನೆ, ಆ ರೀತಿ ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ದೇಶದ ಸಲುವಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಕುರಿತು ಬೇರೆಯವರು ಮಾತನಾಡುವ ನೈತಿಕತೆ ಇಲ್ಲ ಎಂದರು.

ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಕೊಡುಗೆ ಏನು ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಏನೋ ಮಾತನಾಡ್ತಾರೆ ಅಂದ್ರೆ ಎಲ್ಲಕ್ಕೂ ಉತ್ತರ ಕೊಡಲು ಹೋಗುವುದಿಲ್ಲ. ನಾವು ದೇಶಕ್ಕಾಗಿ ಏನು ಮಾಡುತ್ತಿದ್ದೇವೆ ಎಂಬುವುದು ಮುಖ್ಯವಾಗಿದೆ. ಒಬ್ಬ ಮುತ್ಸದ್ದಿ ನೇತಾರ ಯಾವ ರೀತಿ ಇರಬೇಕೆಂಬುದು ಮೋದಿಯವರಿಗೆ ಬರುತ್ತಿರುವ ಪರ್ಸೆಂಟೇಜ್ ಆಫ್ ವೋಟ್‌ನಿಂದ ಗೊತ್ತಾಗ್ತದೆ.

ಆರ್‌ಎಸ್ಎಸ್ ನವರ ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದೆ. ನಾನು ಒಬ್ಬ ಸ್ವಯಂಸೇವಕ, ಅವರ ಆಶೀರ್ವಾದದಿಂದ ನಾನು ಕೈಗಾರಿಕಾ ಸಚಿವನಾದೆ ಅಂತಾ ಹೇಳಿಕೊಳ್ಳಲು ಬಹಳ ಹೆಮ್ಮೆಯಾಗುತ್ತದೆ. ಅವರ ಬಗ್ಗೆ ಮಾತನಾಡೋದು ಸರಿಯಲ್ಲ, ಕಾಂಗ್ರೆಸ್​ನವರು ಆಳವಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ನಿರಾಣಿ ಹೇಳಿದರು.

ಮುಂಬರುವ ದಿನಗಳಲ್ಲಿ ವಿಜಯೇಂದ್ರನಿಗೆ ರಾಜಕೀಯ ಭವಿಷ್ಯವಿದೆ: ಹೈಕಮಾಂಡ್​ಗೆ ನಾವು ಕಳುಹಿಸಿದ ಹೆಸರುಗಳಲ್ಲಿ ಪರಿಷತ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದಾರೆ. ಕೋರ್ ಕಮಿಟಿ ಕಳುಹಿಸಿದ ಹೆಸರುಗಳನ್ನೇ ಹೈಕಮಾಂಡ್​ ಅಂತಿಮ‌ ಮಾಡಿದೆ. ರಾಜ್ಯದಿಂದ 20 ಜನರ ಹೆಸರು ಕಳುಹಿಸಿದ್ದೇವೆ. ಇದರಲ್ಲಿ ನಾಲ್ಕು ಜನರನ್ನ ಹೈಕಮಾಂಡ್ ಆಯ್ಕೆ ಮಾಡಿದೆ. ಎಲ್ಲಾ ರೀತಿಯ ವಿಭಾಗ, ಜಾತಿ ಆಧಾರದ ಲೆಕ್ಕಾಚಾರ ಮಾಡಿ ಆಯ್ಕೆ ಮಾಡಲಾಗಿದೆ.

ವಿಜಯೇಂದ್ರನಿಗೆ ಭವಿಷ್ಯ ಇದ್ದು, ಬರುವಂತಹ ದಿನಗಳಲ್ಲಿ ವಿಜಯೇಂದ್ರ ಒಳ್ಳೆಯ ನಾಯಕನಾಗಿ ಹೊರಬರುತ್ತಾನೆ. ವಿಜಯೇಂದ್ರನಿಗೆ ಯಡಿಯೂರಪ್ಪ, ಸಂಘ ಪರಿವಾರ ಸೇರಿ ಪಕ್ಷದ ಹಿರಿಯರ ಆಶೀರ್ವಾದವಿದೆ. ಸದ್ಯ ಅವನು ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಉತ್ತಮ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ರಾಜ್ಯದ ತುಂಬಾ ಪಕ್ಷ ಸಂಘಟನೆಯ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಅವನಿಗೆ ರಾಜಕೀಯ ಭವಿಷ್ಯವಿದೆ ಎಂದರು.

ಕುಟುಂಬ ರಾಜಕಾರಣ: ಕುಟುಂಬ ರಾಜಕಾರಣದ ಬಗ್ಗೆ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸಿದರೆ ಅವತ್ತೇ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ. ಮೊದಲಿಂದಲೂ ನಾವು ಇಬ್ಬರು ರಾಜಕಾರಣದಲ್ಲಿ ಇದ್ದೇವೆ. ನಿರಾಣಿ ಕುಟುಂಬದ ಮೂರನೇಯರು ರಾಜಕೀಯಕ್ಕೆ ಬರ್ತಿಲ್ಲ. ಇದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ನಿರಾಣಿ ಕುಟುಂಬದ ಮೂರನೇ ವ್ಯಕ್ತಿಯ ಸ್ಪರ್ಧೆ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು.

ಸಹೋದರ ಸಂಗಮೇಶ ನಿರಾಣಿ ಕಳೆದ ನಾಲ್ಕು ವರ್ಷದಿಂದ ಜಮಖಂಡಿಯಲ್ಲಿ ಸಭೆ ಸಮಾರಂಭ ಮಾಡಿಲ್ಲ. ನನ್ನನು ಈ ರೀತಿ ದೂಷಿಸಬಾರದು ಅಂತಾ ಜಮಖಂಡಿ ಮಾಜಿ ಶಾಸಕರ ಅನುಮತಿ ಪಡೆದು ಹೋಗುತ್ತಿರುವೆ. ನಾನು, ನನ್ನ ಸಹೋದರ ಹನುಮಂತ ನಿರಾಣಿ ಹೊರತುಪಡಿಸಿ ನಮ್ಮ ಮನೆಯಲ್ಲಿ ಯಾರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ನನ್ನ ಮಾತು ಕೇಳದೇ ನಮ್ಮ ಕುಟುಂಬದವರು ರಾಜಕೀಯಕ್ಕೆ ಎಂಟ್ರಿಯಾದ್ರೆ ಅವತ್ತೇ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರ್ತೇನಿ ಎಂದರು.

ಪ್ರಧಾನಮಂತ್ರಿಗಳು ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ಇಬ್ಬರಿಗೆ ಟಿಕೆಟ್ ಕೊಟ್ಟಿದ್ದಾರೆ. ನೂರಕ್ಕೆ ನೂರರಷ್ಟು ಮೂರನೆಯವರು ರಾಜಕೀಯಕ್ಕೆ ಬರುವುದಿಲ್ಲ.ಇದರಲ್ಲಿ ಯಾವುದೇ ಸಂಶಯ ಬೇಡ. ನಾವು ಸ್ಪರ್ಧೆ ಮಾಡುವುದಿಲ್ಲ ಅಂದ್ಮೇಲೆ ಮತ್ತೊಬ್ಬರ ಬಗ್ಗೆ ಮಾತನಾಡುವುದಿಲ್ಲ ಎಂದು ಸಚಿವ ಮುರಗೇಶ್ ನಿರಾಣಿ ಹೇಳಿದರು.

ಇದನ್ನೂ ಓದಿ: ವಿಚಾರವಾದಿ ನರೇಂದ್ರ ನಾಯಕ್ ಸವಾಲು ಸ್ವೀಕರಿಸಿದ ನಾಲ್ವರು ಜ್ಯೋತಿಷಿಗಳು ವಿಫಲ!

ಬೆಳಗಾವಿ: ಆರ್​ಎಸ್​ಎಸ್​ನವರು ತಮ್ಮ ಸ್ವಂತಕ್ಕೆ ಏನನ್ನು ಮಾಡಿಕೊಳ್ಳದೇ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ತಮ್ಮನ್ನೇ ತಾವು ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. ಅವರ ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದ್ದು, ನಾನು ಒಬ್ಬ ಸ್ವಯಂಸೇವಕ ಅಂತ ಹೇಳಿಕೊಳ್ಳಲು ಬಹಳ ಹೆಮ್ಮೆಯಾಗುತ್ತದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ದೊಡ್ಡವರು ಉತ್ತರ ಕೊಟ್ಟಿದ್ದಾರೆ. ಆದ್ರೆ, ಆರ್​ಎಸ್ಎಸ್​ನವರು ದೇಶಕ್ಕಾಗಿ ತಮ್ಮನ್ನೇ ತಾವು ಸಮರ್ಪಣೆ ಮಾಡಿಕೊಂಡಿದ್ದಾರೆ. ಅವರೇನು ಸ್ಟಾರ್ ಹೋಟೆಲ್‌ನಲ್ಲಿ ಇರಲ್ಲ, ವಿಮಾನದಲ್ಲಿ ಓಡಾಡುವುದಿಲ್ಲ. ಅತ್ಯಂತ ಕಟ್ಟ ಕಡೆಯ ಮನುಷ್ಯ ಯಾವ ರೀತಿ ಜೀವನ ಮಾಡ್ತಾನೆ, ಆ ರೀತಿ ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ದೇಶದ ಸಲುವಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಕುರಿತು ಬೇರೆಯವರು ಮಾತನಾಡುವ ನೈತಿಕತೆ ಇಲ್ಲ ಎಂದರು.

ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಕೊಡುಗೆ ಏನು ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಏನೋ ಮಾತನಾಡ್ತಾರೆ ಅಂದ್ರೆ ಎಲ್ಲಕ್ಕೂ ಉತ್ತರ ಕೊಡಲು ಹೋಗುವುದಿಲ್ಲ. ನಾವು ದೇಶಕ್ಕಾಗಿ ಏನು ಮಾಡುತ್ತಿದ್ದೇವೆ ಎಂಬುವುದು ಮುಖ್ಯವಾಗಿದೆ. ಒಬ್ಬ ಮುತ್ಸದ್ದಿ ನೇತಾರ ಯಾವ ರೀತಿ ಇರಬೇಕೆಂಬುದು ಮೋದಿಯವರಿಗೆ ಬರುತ್ತಿರುವ ಪರ್ಸೆಂಟೇಜ್ ಆಫ್ ವೋಟ್‌ನಿಂದ ಗೊತ್ತಾಗ್ತದೆ.

ಆರ್‌ಎಸ್ಎಸ್ ನವರ ಆಶೀರ್ವಾದದಿಂದ ಬಿಜೆಪಿ ಪಕ್ಷ ನಡೆಯುತ್ತಿದೆ. ನಾನು ಒಬ್ಬ ಸ್ವಯಂಸೇವಕ, ಅವರ ಆಶೀರ್ವಾದದಿಂದ ನಾನು ಕೈಗಾರಿಕಾ ಸಚಿವನಾದೆ ಅಂತಾ ಹೇಳಿಕೊಳ್ಳಲು ಬಹಳ ಹೆಮ್ಮೆಯಾಗುತ್ತದೆ. ಅವರ ಬಗ್ಗೆ ಮಾತನಾಡೋದು ಸರಿಯಲ್ಲ, ಕಾಂಗ್ರೆಸ್​ನವರು ಆಳವಾಗಿ ತಿಳಿದುಕೊಂಡು ಮಾತನಾಡಬೇಕು ಎಂದು ನಿರಾಣಿ ಹೇಳಿದರು.

ಮುಂಬರುವ ದಿನಗಳಲ್ಲಿ ವಿಜಯೇಂದ್ರನಿಗೆ ರಾಜಕೀಯ ಭವಿಷ್ಯವಿದೆ: ಹೈಕಮಾಂಡ್​ಗೆ ನಾವು ಕಳುಹಿಸಿದ ಹೆಸರುಗಳಲ್ಲಿ ಪರಿಷತ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದಾರೆ. ಕೋರ್ ಕಮಿಟಿ ಕಳುಹಿಸಿದ ಹೆಸರುಗಳನ್ನೇ ಹೈಕಮಾಂಡ್​ ಅಂತಿಮ‌ ಮಾಡಿದೆ. ರಾಜ್ಯದಿಂದ 20 ಜನರ ಹೆಸರು ಕಳುಹಿಸಿದ್ದೇವೆ. ಇದರಲ್ಲಿ ನಾಲ್ಕು ಜನರನ್ನ ಹೈಕಮಾಂಡ್ ಆಯ್ಕೆ ಮಾಡಿದೆ. ಎಲ್ಲಾ ರೀತಿಯ ವಿಭಾಗ, ಜಾತಿ ಆಧಾರದ ಲೆಕ್ಕಾಚಾರ ಮಾಡಿ ಆಯ್ಕೆ ಮಾಡಲಾಗಿದೆ.

ವಿಜಯೇಂದ್ರನಿಗೆ ಭವಿಷ್ಯ ಇದ್ದು, ಬರುವಂತಹ ದಿನಗಳಲ್ಲಿ ವಿಜಯೇಂದ್ರ ಒಳ್ಳೆಯ ನಾಯಕನಾಗಿ ಹೊರಬರುತ್ತಾನೆ. ವಿಜಯೇಂದ್ರನಿಗೆ ಯಡಿಯೂರಪ್ಪ, ಸಂಘ ಪರಿವಾರ ಸೇರಿ ಪಕ್ಷದ ಹಿರಿಯರ ಆಶೀರ್ವಾದವಿದೆ. ಸದ್ಯ ಅವನು ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಉತ್ತಮ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ರಾಜ್ಯದ ತುಂಬಾ ಪಕ್ಷ ಸಂಘಟನೆಯ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಅವನಿಗೆ ರಾಜಕೀಯ ಭವಿಷ್ಯವಿದೆ ಎಂದರು.

ಕುಟುಂಬ ರಾಜಕಾರಣ: ಕುಟುಂಬ ರಾಜಕಾರಣದ ಬಗ್ಗೆ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸಿದರೆ ಅವತ್ತೇ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ. ಮೊದಲಿಂದಲೂ ನಾವು ಇಬ್ಬರು ರಾಜಕಾರಣದಲ್ಲಿ ಇದ್ದೇವೆ. ನಿರಾಣಿ ಕುಟುಂಬದ ಮೂರನೇಯರು ರಾಜಕೀಯಕ್ಕೆ ಬರ್ತಿಲ್ಲ. ಇದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ನಿರಾಣಿ ಕುಟುಂಬದ ಮೂರನೇ ವ್ಯಕ್ತಿಯ ಸ್ಪರ್ಧೆ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು.

ಸಹೋದರ ಸಂಗಮೇಶ ನಿರಾಣಿ ಕಳೆದ ನಾಲ್ಕು ವರ್ಷದಿಂದ ಜಮಖಂಡಿಯಲ್ಲಿ ಸಭೆ ಸಮಾರಂಭ ಮಾಡಿಲ್ಲ. ನನ್ನನು ಈ ರೀತಿ ದೂಷಿಸಬಾರದು ಅಂತಾ ಜಮಖಂಡಿ ಮಾಜಿ ಶಾಸಕರ ಅನುಮತಿ ಪಡೆದು ಹೋಗುತ್ತಿರುವೆ. ನಾನು, ನನ್ನ ಸಹೋದರ ಹನುಮಂತ ನಿರಾಣಿ ಹೊರತುಪಡಿಸಿ ನಮ್ಮ ಮನೆಯಲ್ಲಿ ಯಾರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ನನ್ನ ಮಾತು ಕೇಳದೇ ನಮ್ಮ ಕುಟುಂಬದವರು ರಾಜಕೀಯಕ್ಕೆ ಎಂಟ್ರಿಯಾದ್ರೆ ಅವತ್ತೇ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರ್ತೇನಿ ಎಂದರು.

ಪ್ರಧಾನಮಂತ್ರಿಗಳು ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ಇಬ್ಬರಿಗೆ ಟಿಕೆಟ್ ಕೊಟ್ಟಿದ್ದಾರೆ. ನೂರಕ್ಕೆ ನೂರರಷ್ಟು ಮೂರನೆಯವರು ರಾಜಕೀಯಕ್ಕೆ ಬರುವುದಿಲ್ಲ.ಇದರಲ್ಲಿ ಯಾವುದೇ ಸಂಶಯ ಬೇಡ. ನಾವು ಸ್ಪರ್ಧೆ ಮಾಡುವುದಿಲ್ಲ ಅಂದ್ಮೇಲೆ ಮತ್ತೊಬ್ಬರ ಬಗ್ಗೆ ಮಾತನಾಡುವುದಿಲ್ಲ ಎಂದು ಸಚಿವ ಮುರಗೇಶ್ ನಿರಾಣಿ ಹೇಳಿದರು.

ಇದನ್ನೂ ಓದಿ: ವಿಚಾರವಾದಿ ನರೇಂದ್ರ ನಾಯಕ್ ಸವಾಲು ಸ್ವೀಕರಿಸಿದ ನಾಲ್ವರು ಜ್ಯೋತಿಷಿಗಳು ವಿಫಲ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.