ETV Bharat / city

ಮೋಳವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : ಸಮರ್ಪಕ ಪುನರ್ವಸತಿ ಕಲ್ಪಿಸಲು ಗ್ರಾಮಸ್ಥರ ಮನವಿ

ಗ್ರಾಮದ ಮಹಾದೇವ ಮಂದಿರದ ಬಳಿ ಎತ್ತಿನ ಬಂಡಿಯಿಂದ ಕೆಳಗಿಳಿದ ಜಿಲ್ಲಾಧಿಕಾರಿಗಳು ಸ್ವತಃ ಡೊಳ್ಳು ಬಾರಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸಾಥ್ ನೀಡಿದರು.ಇದೇ ವೇಳೆ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಕ್ಕದ ಬೀರದೇವರ ದರ್ಶನ ಪಡೆದುಕೊಂಡರು. ಇದಾದ ಬಳಿಕ ಜೈನ ಬಸದಿಗೆ ಕೂಡ ತೆರಳಿದರು. ಮೋಳವಾಡದ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಗ್ರಾಮ ಸಂಚಾರವನ್ನು ಆರಂಭಿಸಿದರು..

author img

By

Published : Mar 19, 2022, 6:44 PM IST

Grand welcome to Belagavi DC
ಜಿಲ್ಲಾಧಿಕಾರಿಯನ್ನು ಎತ್ತಿನಬಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು.

ಬೆಳಗಾವಿ : ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು.

ಜಿಲ್ಲಾಧಿಕಾರಿಯನ್ನು ಎತ್ತಿನಬಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿರುವುದು..

ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮದ ಹಿರಿಯರು ಅಲಂಕೃತ ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು. ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಜಿಲ್ಲಾಧಿಕಾರಿಯನ್ನು ಕರೆದೊಯ್ದರು.

ಗ್ರಾಮದ ಮಹಾದೇವ ಮಂದಿರದ ಬಳಿ ಎತ್ತಿನ ಬಂಡಿಯಿಂದ ಕೆಳಗಿಳಿದ ಜಿಲ್ಲಾಧಿಕಾರಿಗಳು ಸ್ವತಃ ಡೊಳ್ಳು ಬಾರಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸಾಥ್ ನೀಡಿದರು.

ಇದೇ ವೇಳೆ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಕ್ಕದ ಬೀರದೇವರ ದರ್ಶನ ಪಡೆದುಕೊಂಡರು. ಇದಾದ ಬಳಿಕ ಜೈನ ಬಸದಿಗೆ ಕೂಡ ತೆರಳಿದರು. ಮೋಳವಾಡದ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಗ್ರಾಮ ಸಂಚಾರವನ್ನು ಆರಂಭಿಸಿದರು. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಬಳಿಕ ಗ್ರಾಮಸ್ಥರ ಅಹವಾಲುಗಳನ್ನು ಕೇಳಿದರು.

2019ರ ಪ್ರವಾಹ ಸಂದರ್ಭದಲ್ಲಿ ಮುಳುಗಡೆಯಾಗಿದ್ದ ಪ್ರದೇಶಗಳ ಕುರಿತು ಜನರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಕಲಚೇತನ ಬಾಲಕ ಪ್ರಜ್ವಲ್ ರಾಮು ಬಾಳಿಕಾಯಿ ಅವರ ಪಾಲಕರೊಂದಿಗೆ ಮಾತನಾಡಿದರು. ಮಗ ಬುದ್ಧಿಮಾಂಧ್ಯನಾಗಿದ್ದು, ತಂದೆ ಕ್ಯಾನ್ಸರ್ ಪೀಡಿತರಾಗಿದ್ದಾರೆ. ಕೂಡಲೇ ಮನೆಯನ್ನು ಕಟ್ಟಿಸಿಕೊಡುವಂತೆ ಬಾಲಕನ ತಂದೆ ಮನವಿ ಮಾಡಿಕೊಂಡರು.

ಸಮೀಪ ಪುನರ್ವಸತಿ ಕಲ್ಪಿಸಲು ಮನವಿ : ಕೃಷ್ಣಾ ನದಿತೀರದಲ್ಲಿರುವ ಮೋಳವಾಡ ಗ್ರಾಮವನ್ನು ಮುಳುಗಡೆ ಗ್ರಾಮ ಎಂದು ಘೋಷಿಸಿ ಈಗಾಗಲೇ ಎಲ್ಲ ಕುಟುಂಬಗಳಿಗೂ ಪರಿಹಾರವನ್ನು ಸರ್ಕಾರ ಒದಗಿಸಿದೆ. ಆದರೆ, ಪುನರ್ವಸತಿ ಕೇಂದ್ರವು ಮುಳುಗಡೆ ಗ್ರಾಮದಿಂದ ಎಂಟತ್ತು ಕಿ.ಮೀ. ದೂರವಿದೆ.

ಇದರ ಬದಲಾಗಿ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸಮೀಪದಲ್ಲಿ ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒಕ್ಕೊರಲಿನ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ, ತಹಶೀಲ್ದಾರ್​ ಆರ್​.ಆರ್.ಬುರ್ಲಿ, ತಾಲೂಕು ಆರೋಗ್ಯಾಧಿಕಾರಿ ಬಸಗೌಡ ಕಾಗೆ ಸೇರಿದಂತೆ ಎಲ್ಲ ಇಲಾಖೆಗಳ‌ ತಾಲೂಕುಮಟ್ಟದ ಅಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಬೆಳಗಾವಿ : ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು.

ಜಿಲ್ಲಾಧಿಕಾರಿಯನ್ನು ಎತ್ತಿನಬಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿರುವುದು..

ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮದ ಹಿರಿಯರು ಅಲಂಕೃತ ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು. ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಜಿಲ್ಲಾಧಿಕಾರಿಯನ್ನು ಕರೆದೊಯ್ದರು.

ಗ್ರಾಮದ ಮಹಾದೇವ ಮಂದಿರದ ಬಳಿ ಎತ್ತಿನ ಬಂಡಿಯಿಂದ ಕೆಳಗಿಳಿದ ಜಿಲ್ಲಾಧಿಕಾರಿಗಳು ಸ್ವತಃ ಡೊಳ್ಳು ಬಾರಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸಾಥ್ ನೀಡಿದರು.

ಇದೇ ವೇಳೆ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಕ್ಕದ ಬೀರದೇವರ ದರ್ಶನ ಪಡೆದುಕೊಂಡರು. ಇದಾದ ಬಳಿಕ ಜೈನ ಬಸದಿಗೆ ಕೂಡ ತೆರಳಿದರು. ಮೋಳವಾಡದ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಗ್ರಾಮ ಸಂಚಾರವನ್ನು ಆರಂಭಿಸಿದರು. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಬಳಿಕ ಗ್ರಾಮಸ್ಥರ ಅಹವಾಲುಗಳನ್ನು ಕೇಳಿದರು.

2019ರ ಪ್ರವಾಹ ಸಂದರ್ಭದಲ್ಲಿ ಮುಳುಗಡೆಯಾಗಿದ್ದ ಪ್ರದೇಶಗಳ ಕುರಿತು ಜನರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಕಲಚೇತನ ಬಾಲಕ ಪ್ರಜ್ವಲ್ ರಾಮು ಬಾಳಿಕಾಯಿ ಅವರ ಪಾಲಕರೊಂದಿಗೆ ಮಾತನಾಡಿದರು. ಮಗ ಬುದ್ಧಿಮಾಂಧ್ಯನಾಗಿದ್ದು, ತಂದೆ ಕ್ಯಾನ್ಸರ್ ಪೀಡಿತರಾಗಿದ್ದಾರೆ. ಕೂಡಲೇ ಮನೆಯನ್ನು ಕಟ್ಟಿಸಿಕೊಡುವಂತೆ ಬಾಲಕನ ತಂದೆ ಮನವಿ ಮಾಡಿಕೊಂಡರು.

ಸಮೀಪ ಪುನರ್ವಸತಿ ಕಲ್ಪಿಸಲು ಮನವಿ : ಕೃಷ್ಣಾ ನದಿತೀರದಲ್ಲಿರುವ ಮೋಳವಾಡ ಗ್ರಾಮವನ್ನು ಮುಳುಗಡೆ ಗ್ರಾಮ ಎಂದು ಘೋಷಿಸಿ ಈಗಾಗಲೇ ಎಲ್ಲ ಕುಟುಂಬಗಳಿಗೂ ಪರಿಹಾರವನ್ನು ಸರ್ಕಾರ ಒದಗಿಸಿದೆ. ಆದರೆ, ಪುನರ್ವಸತಿ ಕೇಂದ್ರವು ಮುಳುಗಡೆ ಗ್ರಾಮದಿಂದ ಎಂಟತ್ತು ಕಿ.ಮೀ. ದೂರವಿದೆ.

ಇದರ ಬದಲಾಗಿ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸಮೀಪದಲ್ಲಿ ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒಕ್ಕೊರಲಿನ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ, ತಹಶೀಲ್ದಾರ್​ ಆರ್​.ಆರ್.ಬುರ್ಲಿ, ತಾಲೂಕು ಆರೋಗ್ಯಾಧಿಕಾರಿ ಬಸಗೌಡ ಕಾಗೆ ಸೇರಿದಂತೆ ಎಲ್ಲ ಇಲಾಖೆಗಳ‌ ತಾಲೂಕುಮಟ್ಟದ ಅಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.