ETV Bharat / city

ಗಣಿನಾಡಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ - ಗಣಿನಾಡಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ಪೂರ್ವದಲ್ಲೂ ಕೂಡ ಗಣಿನಾಡು ಬಳ್ಳಾರಿ ಜಿಲ್ಲೆಯು ಸ್ಫೂರ್ತಿದಾಯಕ ಹಾಗೂ ಮಾದರಿ ಜಿಲ್ಲೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್​​ ಸಿಂಗ್ ಹೇಳಿದರು.

74th Independence Day Minister BS Anandasingh flag
ಗಣಿನಾಡಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಧ್ವಜವಂದನೆ
author img

By

Published : Aug 15, 2020, 11:55 AM IST

Updated : Aug 15, 2020, 12:57 PM IST

ಬಳ್ಳಾರಿ: 74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್​​ ಸಿಂಗ್ ಧ್ವಜಾರೋಹಣ ನೆರವೇರಿಸಿದರು.

ಗಣಿನಾಡಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸಾರ್ವಜನಿಕರು ಆಗಮಿಸಿದ್ದರು. ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಮಾತ್ರ ಭಾಗಿಯಾಗಿರೋದು ವಿಶೇಷವಾಗಿತ್ತು.

ಸ್ವಾತಂತ್ರ್ಯ ಪೂರ್ವದಲ್ಲಿ ಗಣಿನಾಡು ಸ್ಫೂರ್ತಿದಾಯಕ ಆಗಿತ್ತು:

ಸ್ವಾತಂತ್ರ್ಯ ಪೂರ್ವದಲ್ಲೂ ಕೂಡ ಗಣಿನಾಡು ಬಳ್ಳಾರಿ ಜಿಲ್ಲೆಯು ಸ್ಫೂರ್ತಿದಾಯಕ ಹಾಗೂ ಮಾದರಿ ಜಿಲ್ಲೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್​ ಸಿಂಗ್ ಹೇಳಿದರು. ಭಾಷಾ ಬಾಂಧವ್ಯವನ್ನ ಈ ಜಿಲ್ಲೆ ವಿಶೇಷವಾಗಿ ಹೊಂದಿದೆ.‌ ತೆಲುಗು-ಕನ್ನಡ ಭಾಷಿಕರ ನಡುವಿನ ಹೊಂದಾಣಿಕೆಯ ಜೀವನ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

ಬಳ್ಳಾರಿಯ ಡಿ.ಸಿ.ನಕುಲ್ ಅವರಿಂದ ಧ್ವಜಾರೋಹಣ:

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ 74ನೇ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿದರು. ಎಡಿಸಿ ಮಂಜುನಾಥ, ಎಸಿ ರಮೇಶ ಕೋನರೆಡ್ಡಿ, ತಹಸೀಲ್ದಾರ್ ಮೆಹತಾ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು‌‌ ಮತ್ತು ಸಿಬ್ಬಂದಿ ಹಾಜರಿದ್ದರು.

ಬಳ್ಳಾರಿ: 74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್​​ ಸಿಂಗ್ ಧ್ವಜಾರೋಹಣ ನೆರವೇರಿಸಿದರು.

ಗಣಿನಾಡಿನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸಾರ್ವಜನಿಕರು ಆಗಮಿಸಿದ್ದರು. ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಮಾತ್ರ ಭಾಗಿಯಾಗಿರೋದು ವಿಶೇಷವಾಗಿತ್ತು.

ಸ್ವಾತಂತ್ರ್ಯ ಪೂರ್ವದಲ್ಲಿ ಗಣಿನಾಡು ಸ್ಫೂರ್ತಿದಾಯಕ ಆಗಿತ್ತು:

ಸ್ವಾತಂತ್ರ್ಯ ಪೂರ್ವದಲ್ಲೂ ಕೂಡ ಗಣಿನಾಡು ಬಳ್ಳಾರಿ ಜಿಲ್ಲೆಯು ಸ್ಫೂರ್ತಿದಾಯಕ ಹಾಗೂ ಮಾದರಿ ಜಿಲ್ಲೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್​ ಸಿಂಗ್ ಹೇಳಿದರು. ಭಾಷಾ ಬಾಂಧವ್ಯವನ್ನ ಈ ಜಿಲ್ಲೆ ವಿಶೇಷವಾಗಿ ಹೊಂದಿದೆ.‌ ತೆಲುಗು-ಕನ್ನಡ ಭಾಷಿಕರ ನಡುವಿನ ಹೊಂದಾಣಿಕೆಯ ಜೀವನ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

ಬಳ್ಳಾರಿಯ ಡಿ.ಸಿ.ನಕುಲ್ ಅವರಿಂದ ಧ್ವಜಾರೋಹಣ:

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ 74ನೇ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿದರು. ಎಡಿಸಿ ಮಂಜುನಾಥ, ಎಸಿ ರಮೇಶ ಕೋನರೆಡ್ಡಿ, ತಹಸೀಲ್ದಾರ್ ಮೆಹತಾ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು‌‌ ಮತ್ತು ಸಿಬ್ಬಂದಿ ಹಾಜರಿದ್ದರು.

Last Updated : Aug 15, 2020, 12:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.