ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಬಸವಪುರ ಗ್ರಾಮದ ಬಳಿ ಹರಿಯುವ ತುಂಗಭದ್ರಾ ಜಲಾಶಯದ ಎಲ್ಎಲ್ಸಿ ಉಪಕಾಲುವೆಗೆ ಬಿದ್ದು, ಬಾಲಕನೋರ್ವ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ತನುಷ್ (9) ಕಾಲುವೆಯಲ್ಲಿ ಕೊಚ್ಚಿಹೋದ ಬಾಲಕ. ತನುಷ್ ತಮ್ಮ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ ಆಯತಪ್ಪಿ ಪಕ್ಕದಲ್ಲಿರುವ ಕಾಲುವೆಗೆ ಬಿದ್ದಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಬಾಲಕನ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಘಟನೆ ನಡೆದಿದೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಕುರುಗೋಡು ಗೃಹರಕ್ಷಕ ದಳದ ಸಿಬ್ಬಂದಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.