ETV Bharat / city

ಲಕ್ಷ್ಮಣ ಸವದಿ, ಆನಂದ ಸಿಂಗ್​ಗೆ ಘೇರಾವ್: ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರ ಬಂಧನ

author img

By

Published : Nov 29, 2020, 12:09 PM IST

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಮುಖಂಡರು ಸಚಿವ ಆನಂದ ಸಿಂಗ್ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಹೋರಾಟ ಸಮಿತಿ ಕಾರ್ಯಕರ್ತರ ಬಂಧನ
ಬಳ್ಳಾರಿ ಹೋರಾಟ ಸಮಿತಿ ಕಾರ್ಯಕರ್ತರ ಬಂಧನ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್​ ವಿರುದ್ಧ ಘೇರಾವ್ ಹಾಕಿದ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರ ಬಂಧನ

ನಗರದಲ್ಲಿಂದು ಆಯೋಜಿಸಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮದ ನಿಮಿತ್ತ ನಗರಕ್ಕಾಗಮಿಸಿದ ಸಚಿವ ಆನಂದ ಸಿಂಗ್ ಅವರು ಅಧಿದೇವತೆ ಕನಕದುರ್ಗಮ್ಮ ದೇಗುಲಕ್ಕಿಂದು ಭೇಟಿ ನೀಡಿದ ಸಂದರ್ಭದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಮುಖಂಡರು ಉಭಯ ನಾಯಕರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದರು.

ವೈಯಕ್ತಿಕ ಹಿತಾಸಕ್ತಿಗಾಗಿ ಆನಂದ ಸಿಂಗ್ ಅವರು ಜಿಲ್ಲೆಯನ್ನು ವಿಭಜಿಸಿದ್ದಾರೆ ಎಂದು ಆರೋಪಿದ ಹೋರಾಟಗಾರರು, ಕಪ್ಪು ಬಾವುಟ ಪ್ರದರ್ಶಿಸಿದರು. ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿದವರನ್ನು ಪ್ರಶ್ನೆ ಮಾಡಲು ಸರ್ಕಾರ ಬಿಡುತ್ತಿಲ್ಲ ಎಂದು ಕಿಡಿಕಾರಿದರು.

ಸಚಿವ ಆನಂದ ಸಿಂಗ್ ಮತ್ತು ಲಕ್ಷ್ಮಣ ಸವದಿಗೆ ಮುತ್ತಿಗೆ ಹಾಕಲು ಹೋರಾಟಗಾರರು ಯತ್ನಿಸಿದರು. ಈ ವೇಳೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನದ ಬಳಿ ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್​ ವಿರುದ್ಧ ಘೇರಾವ್ ಹಾಕಿದ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರ ಬಂಧನ

ನಗರದಲ್ಲಿಂದು ಆಯೋಜಿಸಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮದ ನಿಮಿತ್ತ ನಗರಕ್ಕಾಗಮಿಸಿದ ಸಚಿವ ಆನಂದ ಸಿಂಗ್ ಅವರು ಅಧಿದೇವತೆ ಕನಕದುರ್ಗಮ್ಮ ದೇಗುಲಕ್ಕಿಂದು ಭೇಟಿ ನೀಡಿದ ಸಂದರ್ಭದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಮುಖಂಡರು ಉಭಯ ನಾಯಕರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದರು.

ವೈಯಕ್ತಿಕ ಹಿತಾಸಕ್ತಿಗಾಗಿ ಆನಂದ ಸಿಂಗ್ ಅವರು ಜಿಲ್ಲೆಯನ್ನು ವಿಭಜಿಸಿದ್ದಾರೆ ಎಂದು ಆರೋಪಿದ ಹೋರಾಟಗಾರರು, ಕಪ್ಪು ಬಾವುಟ ಪ್ರದರ್ಶಿಸಿದರು. ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿದವರನ್ನು ಪ್ರಶ್ನೆ ಮಾಡಲು ಸರ್ಕಾರ ಬಿಡುತ್ತಿಲ್ಲ ಎಂದು ಕಿಡಿಕಾರಿದರು.

ಸಚಿವ ಆನಂದ ಸಿಂಗ್ ಮತ್ತು ಲಕ್ಷ್ಮಣ ಸವದಿಗೆ ಮುತ್ತಿಗೆ ಹಾಕಲು ಹೋರಾಟಗಾರರು ಯತ್ನಿಸಿದರು. ಈ ವೇಳೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನದ ಬಳಿ ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.