ETV Bharat / city

ದಾಸೋಹ ನೌಕರರ ಬೇಡಿಕೆಗಳು ಈಡೇರದಿದ್ದರೆ ಹೋರಾಟ: ಎಚ್ಚರಿಕೆ

author img

By

Published : Sep 30, 2019, 3:26 PM IST

ಬೇಡಿಕೆಗಳು ಈಡೇರದಿದ್ದರೆ ಅಕ್ಟೋಬರ್ 17 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಸಿಐಟಿಯು ಎಚ್ಚರಿಕೆ ನೀಡಿದೆ.

ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮಾಡುವುದಾಗಿ ಸಿಐಟಿಯು ಎಚ್ಚರಿಕೆ

ಬಳ್ಳಾರಿ: ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಳಿಕ ಈಟಿವಿ ಭಾರತ್​ನೊಂದಿಗೆ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಸತ್ಯಬಾಬು, ಬಿಸಿಯೂಟ ನೌಕರರ ಭವಿಷ್ಯ ನಿಧಿಯು (ಪಿಂಚಣಿ), ಕಳೆದ ಮೂರು ಬಾರಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಎಲ್.ಐ.ಸಿ ಪಿಂಚಣಿ ವಿಭಾಗದ ಅಧಿಕಾರಿಗಳು, ಸಂಘಟನಾ ಮುಖಂಡರ ಜೊತೆಗೆ ಚರ್ಚೆ ಮಾಡಿ ನೌಕರರಿಂದ 100 ರೂ. ಮತ್ತು ಸರ್ಕಾರ 100 ರೂಪಾಯಿ ಹಾಕಿ ಎಲ್.ಐ.ಸಿ ಮುಖಾಂತರ ವಿಶೇಷ ಪಿಂಚಣಿ ಯೋಜನೆ ನೀಡಲು ಒಪ್ಪಿಗೆ ನೀಡಲಾಗಿತ್ತು. ಆದರೆ ಇನ್ನೂ ಯಾವುದೇ ಬೇಡಿಕೆ ಈಡೇರಿಲ್ಲ ಎಂದು ಆರೋಪಿಸಿದರು.

ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮಾಡುವುದಾಗಿ ಸಿಐಟಿಯು ಎಚ್ಚರಿಕೆ

ಬಿಸಿಯೂಟ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗಮ್ಮ ಮಾತನಾಡಿ, ನೌಕರರಿಗೆ ಸೂಕ್ತ ವೇತನ, ಪಿಂಚಣಿ ಮತ್ತು ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ತಿಂಗಳಿಗೆ ರಾಜ್ಯ ಸರ್ಕಾರದಿಂದ 2600 ರಿಂದ 2700 ರೂಪಾಯಿ ಸಂಬಳ ಬರುತ್ತೆ. ಆದರೆ ಮಾರುಕಟ್ಟೆಯ ದರಗಳು ಹೆಚ್ಚಾಗಿರುವುದರಿಂದ ಈ ಸಂಬಳದಲ್ಲಿ ಬದುಕುವುದು ಕಷ್ಟ ಸಾಧ್ಯ ಎಂದರು.

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್- ಧನ್ ಪಿಂಚಣಿ ಯೋಜನೆಗೆ ಶಾಲಾ ಬಿಸಿಯೂಟ ನೌಕರರನ್ನು ಒಳಪಡಿಸುವ ಆದೇಶ ಹೊರಡಿಸಿದೆ. ಒಟ್ಟಾರೆಯಾಗಿ 1 ಲಕ್ಷ 18 ಸಾವಿರ ಸಿಬ್ಬಂದಿಗೆ ವಿಶೇಷ ಪಿಂಚಣಿ ಸೌಲಭ್ಯ ನೀಡಬೇಕು. ಹಾಗೂ ಬೇಡಿಕೆಗಳು ಈಡೇರದಿದ್ದರೆ ಅಕ್ಟೋಬರ್ 17 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಸಿಐಟಿಯು ಸದಸ್ಯರು ತಿಳಿಸಿದರು.

ಬಳ್ಳಾರಿ: ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಳಿಕ ಈಟಿವಿ ಭಾರತ್​ನೊಂದಿಗೆ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಸತ್ಯಬಾಬು, ಬಿಸಿಯೂಟ ನೌಕರರ ಭವಿಷ್ಯ ನಿಧಿಯು (ಪಿಂಚಣಿ), ಕಳೆದ ಮೂರು ಬಾರಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಎಲ್.ಐ.ಸಿ ಪಿಂಚಣಿ ವಿಭಾಗದ ಅಧಿಕಾರಿಗಳು, ಸಂಘಟನಾ ಮುಖಂಡರ ಜೊತೆಗೆ ಚರ್ಚೆ ಮಾಡಿ ನೌಕರರಿಂದ 100 ರೂ. ಮತ್ತು ಸರ್ಕಾರ 100 ರೂಪಾಯಿ ಹಾಕಿ ಎಲ್.ಐ.ಸಿ ಮುಖಾಂತರ ವಿಶೇಷ ಪಿಂಚಣಿ ಯೋಜನೆ ನೀಡಲು ಒಪ್ಪಿಗೆ ನೀಡಲಾಗಿತ್ತು. ಆದರೆ ಇನ್ನೂ ಯಾವುದೇ ಬೇಡಿಕೆ ಈಡೇರಿಲ್ಲ ಎಂದು ಆರೋಪಿಸಿದರು.

ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮಾಡುವುದಾಗಿ ಸಿಐಟಿಯು ಎಚ್ಚರಿಕೆ

ಬಿಸಿಯೂಟ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗಮ್ಮ ಮಾತನಾಡಿ, ನೌಕರರಿಗೆ ಸೂಕ್ತ ವೇತನ, ಪಿಂಚಣಿ ಮತ್ತು ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ತಿಂಗಳಿಗೆ ರಾಜ್ಯ ಸರ್ಕಾರದಿಂದ 2600 ರಿಂದ 2700 ರೂಪಾಯಿ ಸಂಬಳ ಬರುತ್ತೆ. ಆದರೆ ಮಾರುಕಟ್ಟೆಯ ದರಗಳು ಹೆಚ್ಚಾಗಿರುವುದರಿಂದ ಈ ಸಂಬಳದಲ್ಲಿ ಬದುಕುವುದು ಕಷ್ಟ ಸಾಧ್ಯ ಎಂದರು.

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್- ಧನ್ ಪಿಂಚಣಿ ಯೋಜನೆಗೆ ಶಾಲಾ ಬಿಸಿಯೂಟ ನೌಕರರನ್ನು ಒಳಪಡಿಸುವ ಆದೇಶ ಹೊರಡಿಸಿದೆ. ಒಟ್ಟಾರೆಯಾಗಿ 1 ಲಕ್ಷ 18 ಸಾವಿರ ಸಿಬ್ಬಂದಿಗೆ ವಿಶೇಷ ಪಿಂಚಣಿ ಸೌಲಭ್ಯ ನೀಡಬೇಕು. ಹಾಗೂ ಬೇಡಿಕೆಗಳು ಈಡೇರದಿದ್ದರೆ ಅಕ್ಟೋಬರ್ 17 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಸಿಐಟಿಯು ಸದಸ್ಯರು ತಿಳಿಸಿದರು.

Intro:ಬೇಡಿಕೆಗಳು ಇಡೆರದಿದ್ದರೇ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರಿಂದ ಮಾಹಿತಿ.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ( ಸಿ.ಐ.ಟಿ.ಯು) ಬಳ್ಳಾರಿ ಜಿಲ್ಲಾ ಸಮಿತಿಯಿಂದ ಇಂದು ಸುದ್ದಿಗೋಷ್ಟಿ ನೇರವೆರಿಸಿದರು.

ಬೈಟ್ :-

೧. ಜೆ.ಸತ್ಯಬಾಬು
ಸಿ.ಐ.ಟಿ.ಯು
ಜಿಲ್ಲಾ ಪ್ರಧಾನ ಕಾರ್ಯದರ್ಶಿ.

೨. ದುರ್ಗಮ್ಮ
ಬಿಸಿಯೂಟ ಯೋಜನೆ
ಜಿಲ್ಲಾ ಪ್ರಧಾನ ಕಾರ್ಯದರ್ಶಿ.



Body:.

ನಗರದಲ್ಲಿ ಈಟಿವಿ ಭಾರತ ನೊಂದಿಗೆ ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಸತ್ಯಬಾಬು ಅವರು ಮಾತನಾಡಿ
ಬಿಸಿಯೂಟ ನೌಕರರ ಭವಿಷ್ಯ ನಿಧಿ ( ಪಿಂಚಣಿ ) ಕಳೆದ ಮೂರು ಬಾರಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಎಲ್.ಐ.ಸಿ ಪಿಂಚಣಿ ವಿಭಾಗದ ಅಧಿಕಾರಿಗಳು, ಸಂಘಟನಾ ಮುಖಂಡರ ಜೊತೆಗೆ ಚರ್ಚೆ ಮಾಡಿ 100 ರೂ ನೌಕರರಿಂದ ಮತ್ತು ಸರ್ಕಾರ 100 ರೂಪಾಯಿ ಹಾಕಿ ಎಲ್.ಐ.ಸಿ ಮುಖಾಂತರ ವಿಶೇಷ ಪಿಂಚಣಿ ಯೋಜನೆ ನೀಡಲು ಒಪ್ಪಿಗೆ ನೀಡಲಾಗಿತ್ತು. ಆದ್ರೇ ಯಾವುದೇ ಬೇಡಿಕೆ ಇಡೆರಿಲ್ಲ ಎಂದರು.


ಬಿಸಿಯೂಟ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗಮ್ಮ ಮಾತನಾಡಿದ ಅವರು ನೌಕರರಿಗೆ ಸೂಕ್ತ ವೇತನ, ಪಿಂಚಣಿ ಮತ್ತು ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ ಎಂದರು. ತಿಂಗಳಿಗೆ ರಾಜ್ಯ ಸರ್ಕಾರದಿಂದ 2600 ರಿಂದ 2700 ರೂಪಾಯಿ ಸಂಬಳ ಬರುತ್ತೆ ಆದ್ರೇ ಮಾರುಕಟ್ಟೆಯ ಧರಗಳು ಹೆಚ್ಚಾಗಿರುವುದರಿಂದ ಈ ಸಂಬಳದಲ್ಲಿ ಬದುಕುವುದು ಕಷ್ಟ ಸಾಧ್ಯ ಎಂದರು‌.

ಪ್ರಧಾನಮಂತ್ರಿ ಶ್ರಮಯೋಗಿ ಮಾನ್- ಧನ್ ಪಿಂಚಣಿ ಯೋಜನೆಗೆ ಶಾಲಾ ಬಿಸಿಯೂಟ ನೌಕರರನ್ನು ಒಳಪಡಿಸುವ ಆದೇಶ ಹೊರಡಿಸಿದೆ. ಇದು 40 ವರ್ಷ ಮೆಲ್ಪಟ್ಟ ವಯಸ್ಕರಿಗೆಯಾಗಿದೆ. ಇದು ತಾತ್ಕಾಲಿಕ ವಾಗಿರುತ್ತದೆ ಎಂದು ದೂರಿದರು.




Conclusion:ಒಟ್ಟಾರೆಯಾಗಿ 1 ಲಕ್ಷ 18 ಸಾವಿರ ಸಿಬ್ಬಂದಿಗಳಿಗೆ ವಿಶೇಷ ಪಿಂಚಣಿ ಸೌಲಭ್ಯ ನೀಡಬೇಕೆಂದು ಬೇಡಿಕೆ ಇಟ್ಟರು. ಅಕ್ಟೋಬರ್ 17 ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.