ETV Bharat / city

ಬ್ಯಾರಿಕೇಡ್​​​​ ತಳ್ಳಿ ಜಿಂದಾಲ್ ಕಾರ್ಖಾನೆಗೆ ನುಗ್ಗಲು ಯತ್ನಿಸಿದ ವಾಟಾಳ್​!

author img

By

Published : Jun 15, 2019, 6:43 PM IST

ವಿವಿಧ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಂದಾಲ್ ಉಕ್ಕು ಕಾರ್ಖಾನೆ ಬಳಿ ಇಂದು ಜಮಾಯಿಸಿ ರಾಜ್ಯ ಸರ್ಕಾರ ಹಾಗೂ ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಾಟಾಳ್ ನಾಗರಾಜ್​

ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿ ನೀಡುತ್ತಿರುವುದನ್ನು ವಿರೋಧಿಸಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್​ ಅವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆ ಬಳಿ ಪ್ರತಿಭಟನೆ

ವಿವಿಧ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಂದಾಲ್ ಉಕ್ಕು ಕಾರ್ಖಾನೆ ಬಳಿ ಇಂದು ಜಮಾಯಿಸಿ ರಾಜ್ಯ ಸರ್ಕಾರ ಹಾಗೂ ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬ್ಯಾರಿಕೇಡ್ ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ವಾಟಾಳ್ ನಾಗರಾಜ್​ ಹಾಗೂ ಇತರರನ್ನು ತೋರಣಗಲ್​ನ ಪೊಲೀಸರು ಬಂಧಿಸಿ ವಾಹನದೊಳಗೆ ಕರೆದೊಯ್ದರು. ಇದಕ್ಕೂ‌ ಮುಂಚೆ ಕಾರಿನಿಂದ ಕೆಳಗಿಳಿದ ವಾಟಾಳ್ ನಾಗರಾಜ್​ ಅವರನ್ನು ತೋರಣಗಲ್ಲಿನ ಪಿಎಸ್ಐ ಮಹಮ್ಮದ್​ ರಫಿ, ಪರವಾನಗಿ ಹೊಂದಿರದ ಕಾರಣ ಬ್ಯಾರಿಕೇಡ್ ಒಳಗೆ ನಿಂತುಕೊಂಡೇ ಪ್ರತಿಭಟನೆ ನಡೆಸುವಂತೆ ಸೂಚಿಸಿದರು.

ನಂತರ ಮಾತನಾಡಿದ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್​, ಜಿಂದಾಲ್ ಉಕ್ಕು ಕಾರ್ಖಾನೆಗೆ ಸಾವಿರಾರು ಎಕರೆ ಭೂಮಿ ಪರಭಾರೆ ಕುರಿತು ತನಿಖೆ ನಡೆಸುವ ಸಲುವಾಗಿ ರಾಜ್ಯ ಸರ್ಕಾರ ರಚಿಸಿರುವ ಉಪ ಸಮಿತಿ ಮೋಸದ ಸಮಿತಿ. ಆ ಉಪ ಸಮಿತಿಯಲ್ಲಿ ಯಾರಿದ್ದಾರೆ ಹೇಳಿ?. ನಿಮ್ಮ ಸರ್ಕಾರದ ಸಚಿವರುಗಳೇ ಉಪ ಸಮಿತಿಯಲ್ಲಿದ್ದಾರೆ. ಹೀಗಾಗಿ, ಉಪ ಸಮಿತಿಯಲ್ಲಿ ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನೇ ನೇಮಕ ಮಾಡಬೇಕು. ಅವರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆಯು ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ. ಹಾಗಾಗಿ, ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧದ ಹೋರಾಟವನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲಾಗುವುದು ಎಂದರು.

ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿ ನೀಡುತ್ತಿರುವುದನ್ನು ವಿರೋಧಿಸಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್​ ಅವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆ ಬಳಿ ಪ್ರತಿಭಟನೆ

ವಿವಿಧ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಂದಾಲ್ ಉಕ್ಕು ಕಾರ್ಖಾನೆ ಬಳಿ ಇಂದು ಜಮಾಯಿಸಿ ರಾಜ್ಯ ಸರ್ಕಾರ ಹಾಗೂ ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬ್ಯಾರಿಕೇಡ್ ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ವಾಟಾಳ್ ನಾಗರಾಜ್​ ಹಾಗೂ ಇತರರನ್ನು ತೋರಣಗಲ್​ನ ಪೊಲೀಸರು ಬಂಧಿಸಿ ವಾಹನದೊಳಗೆ ಕರೆದೊಯ್ದರು. ಇದಕ್ಕೂ‌ ಮುಂಚೆ ಕಾರಿನಿಂದ ಕೆಳಗಿಳಿದ ವಾಟಾಳ್ ನಾಗರಾಜ್​ ಅವರನ್ನು ತೋರಣಗಲ್ಲಿನ ಪಿಎಸ್ಐ ಮಹಮ್ಮದ್​ ರಫಿ, ಪರವಾನಗಿ ಹೊಂದಿರದ ಕಾರಣ ಬ್ಯಾರಿಕೇಡ್ ಒಳಗೆ ನಿಂತುಕೊಂಡೇ ಪ್ರತಿಭಟನೆ ನಡೆಸುವಂತೆ ಸೂಚಿಸಿದರು.

ನಂತರ ಮಾತನಾಡಿದ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್​, ಜಿಂದಾಲ್ ಉಕ್ಕು ಕಾರ್ಖಾನೆಗೆ ಸಾವಿರಾರು ಎಕರೆ ಭೂಮಿ ಪರಭಾರೆ ಕುರಿತು ತನಿಖೆ ನಡೆಸುವ ಸಲುವಾಗಿ ರಾಜ್ಯ ಸರ್ಕಾರ ರಚಿಸಿರುವ ಉಪ ಸಮಿತಿ ಮೋಸದ ಸಮಿತಿ. ಆ ಉಪ ಸಮಿತಿಯಲ್ಲಿ ಯಾರಿದ್ದಾರೆ ಹೇಳಿ?. ನಿಮ್ಮ ಸರ್ಕಾರದ ಸಚಿವರುಗಳೇ ಉಪ ಸಮಿತಿಯಲ್ಲಿದ್ದಾರೆ. ಹೀಗಾಗಿ, ಉಪ ಸಮಿತಿಯಲ್ಲಿ ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನೇ ನೇಮಕ ಮಾಡಬೇಕು. ಅವರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆಯು ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ. ಹಾಗಾಗಿ, ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧದ ಹೋರಾಟವನ್ನು ಹಂತ ಹಂತವಾಗಿ ಹಮ್ಮಿಕೊಳ್ಳಲಾಗುವುದು ಎಂದರು.

Intro:ಜಿಂದಾಲ್ ಉಕ್ಕು ಕಾರ್ಖಾನೆಗೆ ಭೂಮಿ ಪರಭಾರೆ ವಿರೋಧ: ಬ್ಯಾರಿಕೇಡ್ ತಳ್ಳಿ ಜಿಂದಾಲ್ ಕಾರ್ಖಾನೆಗೆ ನುಗ್ಗಲು ಯತ್ನಿಸಿದ ವಾಟಾಳ್ ನಾಗರಾಜ ಬಂಧನ!
ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿ ಪರಭಾರೆ ವಿರೋಧಿಸಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆ ವಿದ್ಯಾನಗರ ಮುಖ್ಯದ್ವಾರದ ಬಳಿ ಬ್ಯಾರಿಕೇಡ್
ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.
ವಿವಿಧ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಂದಾಲ್ ಉಕ್ಕು ಕಾರ್ಖಾನೆ ಬಳಿಯಿಂದು ಜಮಾಯಿಸಿ ಕೆಲ ಕಾಲ ರಾಜ್ಯ ಸರ್ಕಾರ ಹಾಗೂ ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬ್ಯಾರಿ ಕೇಡ್ ತಳ್ಳಿ ಪ್ರವೇಶದ್ವಾರದೊಳಗೆ ನುಗ್ಗಲು ಯತ್ನಿಸಿದ ವಾಟಾಳ್ ನಾಗರಾಜ ಹಾಗೂ ಇತರೆ ಸಹಚರರನ್ನು ತೋರಣಗಲ್ಲು ಪೊಲೀಸರು ಬಂಧಿಸಿ ವಾಹನದೊಳಗೆ ಕರೆದೊಯ್ದುರು.
ಇದಕ್ಕೂ‌ ಮುಂಚೆ ಕಾರಿನಿಂದ ಕೆಳಗಿಳಿದ ವಾಟಾಳ್ ನಾಗರಾಜ ಅವರನ್ನು ತೋರಣಗಲ್ಲಿನ ಪಿಎಸ್ ಐ ಮಹಮ್ಮದ ರಫಿಯ ವರು ಪರವಾನಗಿ ಹೊಂದಿರದ ಕಾರಣ, ಬ್ಯಾರಿಕೇಡ್ ಒಳಗೆ ನಿಂತುಕೊಂಡೇ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಅದ್ಕೆ ವಾಟಾಳ್ ನಾಗರಾಜ, ನೀವೇನೂ ಗಾಬರಿಪಡಬೇಡಿ.‌ ನಾನು ಎಲ್ಲ ಮಾತನಾಡಿದ್ದೇನೆ. ನೀವು ಸುಮ್ಮನೆ ಇರಿ ಎಂದರು.










Body:ಉಪಸಮಿತಿನೇ ಮೋಸ: ಜಿಂದಾಲ್ ಉಕ್ಕು ಕಾರ್ಖಾನೆಗೆ ಸಾವಿರಾರು ಎಕರೆ ಭೂಮಿ ಪರಭಾರೆ ಕುರಿತು ತನಿಖೆ ನಡೆಸುವ ಸಲುವಾಗಿ ರಾಜ್ಯ ಸರ್ಕಾರ ರಚಿಸಿರುವ ಉಪಸಮಿತಿನೇ ಮೋಸದ ಸಮಿತಿ ಎಂದು ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆ ಉಪಸಮಿತಿಯಲ್ಲಿ ಯಾರಿದ್ದಾರೆ ಹೇಳಿ?. ನಿಮ್ಮ ಸರ್ಕಾರದ ಸಚಿವರುಗಳೇ ಉಪಸಮಿತಿಯಲ್ಲಿದ್ದಾರೆ. ಹೀಗಾಗಿ, ಉಪ ಸಮಿತಿಯಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರನ್ನೇ ನೇಮಕ ಮಾಡಬೇಕು. ಅವರಿಂದ ಜಿಂದಾಲ್ ಉಕ್ಕು ಕಾರ್ಖಾನೆಗೆ ಭೂಮಿ ಪರಭಾರೆಯಲ್ಲಾದ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಂದಾಲ್ ಉಕ್ಕು ಕಾರ್ಖಾನೆಯು ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ. ಆಗಾಗಿ, ಜಿಂದಾಲ್ ಸಮೂಹ ಸಂಸ್ಥೆಗಳ ಮಾಲೀಕರ ವಿರುದ್ಧದ ಹೋರಾಟವನ್ನು ಹಂತಹಂತವಾಗಿ ಹಮ್ಮಿಕೊಳ್ಳಲಾಗುವುದು ಎಂದರು.
ಜುಲೈ ತಿಂಗಳ ಮೊದಲ ವಾರದಲ್ಲಿ ಬಳ್ಳಾರಿ ಬಂದ್ ಮಾಡ ಲಾಗುವುದು. ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಕನ್ನಡ ಪರ ಸಂಘಟನೆಗಳ ಸಮ್ಮೇಳನ ಆಯೋಜಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದರು.
ನೂರಾರು ಕನ್ನಡಪರ ಸಂಘಟನೆಗಳ ಹೋರಾಟಗಾರರು
ಈ ಸಂಬಂಧ ಜೈಲು ಸೇರೋದಕ್ಕೂ ತಯಾರಿದ್ದೇವೆ ಎಂದರು.
ಬಿಗಿಯಾದ ಪೊಲೀಸ್ ಬಂದೋಬಸ್ತ್: ಜಿಲ್ಲೆಯ ಸಂಡೂರು ಮತ್ತು ತೋರಣಗಲ್ಲು ಠಾಣೆಯ ಹತ್ತಾರುಮಂದಿ ಪೊಲೀಸರು ಪ್ರತಿಭಟನೆ ವೇಳೆ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.




Conclusion:KN_BLY_02_15_KANADA_PARA_SANGHTANE_VISUALS_7203310

KN_BLY_02d_15_KANADA_PARA_SANGHTANE_VISUALS_7203310

KN_BLY_02e_15_KANADA_PARA_SANGHTANE_VISUALS_7203310

KN_BLY_02f_15_KANADA_PARA_SANGHTANE_VISUALS_7203310

KN_BLY_02g_15_KANADA_PARA_SANGHTANE_VISUALS_7203310

KN_BLY_02h_15_KANADA_PARA_SANGHTANE_VISUALS_7203310

KN_BLY_02i_15_KANADA_PARA_SANGHTANE_VISUALS_7203310

KN_BLY_02j_15_KANADA_PARA_SANGHTANE_VISUALS_7203310

KN_BLY_02k_15_KANADA_PARA_SANGHTANE_BYTE_7203310

KN_BLY_02l_15_KANADA_PARA_SANGHTANE_BYTE_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.