ETV Bharat / city

ಮಲಗಿದ್ದ ಯುವಕನ ಕೊಲೆ: ದುಷ್ಕರ್ಮಿಗಳು ನಗ ನಾಣ್ಯದ ಜೊತೆ ಮಾಂಗಲ್ಯವನ್ನೂ ಬಿಡಲಿಲ್ಲ!

author img

By

Published : Jun 9, 2019, 6:09 PM IST

ನಿದ್ರಿಸುತ್ತಿದ್ದ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು ಬಳಿಕ ಮನೆಯೊಳಗೆ ನುಗ್ಗಿ ಹಣ, ಆಭರಣಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ.

ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು

ಬಳ್ಳಾರಿ: ಮನೆಯ ಮುಂದೆ ಮಂಚದ ಮೇಲೆ ನಿದ್ರಿಸುತ್ತಿದ್ದ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು, ಮನೆಯೊಳಗೆ ನುಗ್ಗಿ ಹಣ,ಆಭರಣಗಳನ್ನು ದೋಚಿ ಪರಾರಿಯಾದ ಘಟನೆ ಬಳ್ಳಾರಿ ತಾಲೂಕಿನ ಹಂದ್ಯಾಳು ಗ್ರಾಮದಲ್ಲಿ ನಡೆದಿದೆ.

ಹಂದ್ಯಾಳು ಗ್ರಾಮದ ಹುಲಿಯಪ್ಪ (20) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.‌

ಮನೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಂಚದ ಮೇಲೆ‌ ಮಲಗಿದ್ದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೇಳೆ ಹುಲಿಯಪ್ಪ ಮುಖದ ಮೇಲೆ ತೀವ್ರ ಸ್ವರೂಪದ ಗಾಯಗಳಾಗಿದೆ.

ಹುಲಿಯಪ್ಪನ ಕೊಲೆಯ ಬಳಿಕ, ಮನೆಯ ಮಹಡಿ ಮೇಲೆ ಮಲಗಿದ್ದ ತಾಯಿ ಗಾದಿಲಿಂಗಮ್ಮನ ಕೊರಳಲ್ಲಿದ್ದ ಚಿನ್ನಾಭರಣ, ಮಾಂಗಲ್ಯ ಸರ, ಮನೆಯ ತಿಜೋರಿಯಲ್ಲಿದ್ದ 52,000 ರೂ. ನಗದು ಸೇರಿದಂತೆ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ಬಿ. ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ಮನೆಯ ಮುಂದೆ ಮಂಚದ ಮೇಲೆ ನಿದ್ರಿಸುತ್ತಿದ್ದ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು, ಮನೆಯೊಳಗೆ ನುಗ್ಗಿ ಹಣ,ಆಭರಣಗಳನ್ನು ದೋಚಿ ಪರಾರಿಯಾದ ಘಟನೆ ಬಳ್ಳಾರಿ ತಾಲೂಕಿನ ಹಂದ್ಯಾಳು ಗ್ರಾಮದಲ್ಲಿ ನಡೆದಿದೆ.

ಹಂದ್ಯಾಳು ಗ್ರಾಮದ ಹುಲಿಯಪ್ಪ (20) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.‌

ಮನೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಂಚದ ಮೇಲೆ‌ ಮಲಗಿದ್ದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೇಳೆ ಹುಲಿಯಪ್ಪ ಮುಖದ ಮೇಲೆ ತೀವ್ರ ಸ್ವರೂಪದ ಗಾಯಗಳಾಗಿದೆ.

ಹುಲಿಯಪ್ಪನ ಕೊಲೆಯ ಬಳಿಕ, ಮನೆಯ ಮಹಡಿ ಮೇಲೆ ಮಲಗಿದ್ದ ತಾಯಿ ಗಾದಿಲಿಂಗಮ್ಮನ ಕೊರಳಲ್ಲಿದ್ದ ಚಿನ್ನಾಭರಣ, ಮಾಂಗಲ್ಯ ಸರ, ಮನೆಯ ತಿಜೋರಿಯಲ್ಲಿದ್ದ 52,000 ರೂ. ನಗದು ಸೇರಿದಂತೆ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ಬಿ. ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮನೆಯ ಮುಂದೆ ಮಂಚ ಹಾಕಿಕೊಂಡು ಮಲಗಿದ್ದ ಯುವಕನ ಕಗ್ಗೊಲೆ: ನಗ, ನಾಣ್ಯ ದೋಚಿದ ದುಷ್ಕರ್ಮಿಗಳು!
ಬಳ್ಳಾರಿ: ಮನೆಯ ಮುಂದೆ ಮಂಚ ಹಾಕಿಕೊಂಡು ಮಲಗಿದ್ದ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ ನಗ, ನಾಣ್ಯ ದೋಚಿ ಪರಾರಿಯಾದ ಘಟನೆ ಬಳ್ಳಾರಿ ತಾಲೂಕಿನ ಹಂದ್ಯಾಳು ಗ್ರಾಮದಲ್ಲಿಂದು ಬೆಳಗಿನಜಾವ ಬೆಳಕಿಗೆ ಬಂದಿದೆ.
ತಾಲೂಕಿನ ಹಂದ್ಯಾಳು ಗ್ರಾಮದ ಹುಲಿಯಪ್ಪ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.‌ ಮನೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿ ಗಳು ಅಲ್ಲಿಯೇ ಮಂಚದ ಮೇಲೆ‌ ಮಲಗಿದ್ದ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ್ದಾರೆ. ಆತನ
ಮುಖದ ಮೇಲೆ ಎರಡ್ಮೂರು ಕಡೆಗಳಲ್ಲಿ ಚಾಕುವಿನಿಂದ ಇರಿದ ಗುರುತುಗಳಿವೆ.

Body:ಬಳಿಕ ಮೃತ ಯುವಕನ ತಾಯಿಯ ಗಾದಿಲಿಂಗಮ್ಮ ಅವರು ಮನೆಯ ಮಹಡಿ ಮೇಲೆ ಮಲಗಿದ್ದು, ಆಕೆಯ ಕೊರಳಲಿದ್ದ ಚಿನ್ನಾಭರಣ, ಮಾಂಗಲ್ಯದ ಸರ, ಮನೆಯ ತಿಜೋರಿಯಲ್ಲಿದ್ದ 52,000 ರೂ. ನಗದು ಸೇರಿದಂತೆ ಚಿನ್ನಾಭರಣ ದೋಚಿ ಪರಾರಿ ಯಾಗಿದ್ದಾರೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ: ತಾಲೂಕಿನ ಹಂದ್ಯಾಳು ಗ್ರಾಮಕ್ಕೆ ಎಸ್ಪಿ ಲಕ್ಷ್ಮಣ ಬ.ನಿಂಬರಗಿ, ಎಎಸ್ಪಿ ಲಾವಣ್ಯ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_03_09_HANDYAHALL_MURDER_THEFT_7203310

KN_BLY_03b_09_HANDYAHALL_MURDER_THEFT_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.