ಬಳ್ಳಾರಿ: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದಿದೆ.
ಪಿ.ಸಿ.ಬಸವನಗೌಡ (35) ಮೃತ ಪೊಲೀಸ್ ಕಾನ್ಸ್ಟೇಬಲ್. ಬಸವನಗೌಡ ನಿನ್ನೆಯಷ್ಟೇ ತಮ್ಮ ಸ್ವಗ್ರಾಮ ಚಿಕ್ಕ ಅಂತಾಪುರಕ್ಕೆ ಆಗಮಿಸಿದ್ದರು. ರಾತ್ರಿ ಮಲಗುವಾಗ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಓದಿ: 3 ದಿನಗಳಲ್ಲಿ ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ.ನಷ್ಟ: ಕೆಎಸ್ಆರ್ ಟಿಸಿ ಡಿಸಿ ಮಹದೇವಪ್ಪ ಮುಂಜಿ
ಸದ್ಯ, ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಬಸವನಗೌಡರ ಮೃತದೇಹವಿದ್ದು, ಬಳಿಕ ಜಿಲ್ಲಾ ಪೊಲೀಸ್ ಇಲಾಖೆಯ ವಿಧಿ - ವಿಧಾನಗಳಿಂದ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.