ETV Bharat / city

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ

author img

By

Published : Dec 19, 2019, 6:53 PM IST

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮತ್ತು 144 ಸೆಕ್ಷನ್ ಜಾರಿ ಮಾಡಿದ್ದನ್ನು ಖಂಡಿಸಿ ಸಿಪಿಐ ಮತ್ತು ಸಿಪಿಎಂ ಪ್ರತಿಭಟನೆ ಮಾಡಿತು.

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರವು 144 ಸೆಕ್ಷನ್ ಜಾರಿ ಮಾಡಿದೆ ಎಂದು ಸಿಪಿಐ ಮತ್ತು ಸಿಪಿಎಂ ಪಕ್ಷದಿಂದ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಎಂ ಮತ್ತು ಸಿಪಿಐ ಸದಸ್ಯ ಸತ್ಯಬಾಬಾ, ದೇಶಾದ್ಯಂತ ಬಿಜೆಪಿ ಸರ್ಕಾರ ಮತ್ತು ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ. ಈ ದೇಶವಿರೋಧಿ ಕೆಲಸವನ್ನು ನಾವು ಖಂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಸಿಪಿಎಂ ಮತ್ತು ಸಿಪಿಐ ಪಕ್ಷದ ಸದಸ್ಯರು ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೌರತ್ವ ಕಾಯಿದೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ರಾಯಲ್ ವೃತ್ತ, ಮೋತಿ, ಎಸ್.ಪಿ.ಸರ್ಕಲ್, ಸಂಗಮ್, ಕೌಲ್ ಬಜಾರ್ ಪದೇಶಗಳಲ್ಲಿ ಮತ್ತು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಭದ್ರತೆಯ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ. 144 ಸೆಕ್ಷನ್ ಮೂರು ದಿನಗಳವರೆಗೆ ಜಾರಿಯಲ್ಲಿದೆ. ವಿವಿಧ ತಾಲೂಕಿನಲ್ಲಿ ಒಟ್ಟು 1,500 ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿದೆ ಎಂದು ಎಸ್​ಪಿ ಸಿ.ಕೆ ಬಾಬಾ ತಿಳಿಸಿದರು.

ಇನ್ನು ಪ್ರತಿಭಟನೆ ವೇಳೆ ಸಾಕಷ್ಟು ಟ್ರಾಫಿಕ್ ಸಮಸ್ಯೆ ಉಂಟಾಯಿತು. ಇದರಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆ ಉಂಟಾಗಿದ್ದು ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾ ಸ್ಥಳಕ್ಕೆ ನಗರ ಡಿವೈಎಸ್​ಪಿ ಕೆ.ರಾಮರಾವ್, ಸಿಪಿಐ ನಾಗರಾಜ್, ಗಾಯತ್ರಿ, ರಘು ಕುಮಾರ್ ಮತ್ತು ಪಿ.ಎಸ್.ಐ ನಾಗರಾಜ್ ಮತ್ತು 70 ಪೊಲೀಸ್ ಸಿಬ್ಬಂದಿ ಹಾಜರಿದ್ದರು.

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರವು 144 ಸೆಕ್ಷನ್ ಜಾರಿ ಮಾಡಿದೆ ಎಂದು ಸಿಪಿಐ ಮತ್ತು ಸಿಪಿಎಂ ಪಕ್ಷದಿಂದ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಎಂ ಮತ್ತು ಸಿಪಿಐ ಸದಸ್ಯ ಸತ್ಯಬಾಬಾ, ದೇಶಾದ್ಯಂತ ಬಿಜೆಪಿ ಸರ್ಕಾರ ಮತ್ತು ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ. ಈ ದೇಶವಿರೋಧಿ ಕೆಲಸವನ್ನು ನಾವು ಖಂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಸಿಪಿಎಂ ಮತ್ತು ಸಿಪಿಐ ಪಕ್ಷದ ಸದಸ್ಯರು ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೌರತ್ವ ಕಾಯಿದೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ರಾಯಲ್ ವೃತ್ತ, ಮೋತಿ, ಎಸ್.ಪಿ.ಸರ್ಕಲ್, ಸಂಗಮ್, ಕೌಲ್ ಬಜಾರ್ ಪದೇಶಗಳಲ್ಲಿ ಮತ್ತು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಭದ್ರತೆಯ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ. 144 ಸೆಕ್ಷನ್ ಮೂರು ದಿನಗಳವರೆಗೆ ಜಾರಿಯಲ್ಲಿದೆ. ವಿವಿಧ ತಾಲೂಕಿನಲ್ಲಿ ಒಟ್ಟು 1,500 ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿದೆ ಎಂದು ಎಸ್​ಪಿ ಸಿ.ಕೆ ಬಾಬಾ ತಿಳಿಸಿದರು.

ಇನ್ನು ಪ್ರತಿಭಟನೆ ವೇಳೆ ಸಾಕಷ್ಟು ಟ್ರಾಫಿಕ್ ಸಮಸ್ಯೆ ಉಂಟಾಯಿತು. ಇದರಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆ ಉಂಟಾಗಿದ್ದು ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾ ಸ್ಥಳಕ್ಕೆ ನಗರ ಡಿವೈಎಸ್​ಪಿ ಕೆ.ರಾಮರಾವ್, ಸಿಪಿಐ ನಾಗರಾಜ್, ಗಾಯತ್ರಿ, ರಘು ಕುಮಾರ್ ಮತ್ತು ಪಿ.ಎಸ್.ಐ ನಾಗರಾಜ್ ಮತ್ತು 70 ಪೊಲೀಸ್ ಸಿಬ್ಬಂದಿ ಹಾಜರಿದ್ದರು.

Intro:kn_02_bly_191219_updataprotestnews_ka10007

ದೇಶ ವಿರೋಧಿ ಪೌರತ್ವ ಕಾಯಿದೆ ಜಾರಿಗೆ ಮಾಡಿದನ್ನು ಖಂಡಿಸುತ್ತವೆ : ಸತ್ಯಬಾಬಾ.
ಅಂಬ್ಯುಲೇನ್ಸ್ ಗಳಿಗೆ ದಾರಿ ಇಲ್ಲದೇ ಟ್ರಾಫಿಕ್ ಜಾಮ್ .


Body:

ನಗರದ ರಾಯಲ್ ವೃತ್ತದಲ್ಲಿ ಇಂದು ಪೌರತ್ವ ಕಾಯಿದೆ ವಿರೋಧಿಸಿ ಮತ್ತು ಇಂದು ನಡೆಯುವ ಪ್ರತಿಭಟನೆಗೆ 144 ಸೆಷನ್ ಜಾರಿ ಮಾಡಿ ಪ್ರತಿಭಟನೆ ಹತ್ತಿಕ್ಕುವ ಕೆಲಸವನ್ನು ಬಿಜೆಪಿ‌ ಸರ್ಕಾರ ಮಾಡುತ್ತಿದ್ದೆ ಎಂದು ಸಿಪಿಐ ಮತ್ತು ಸಿಪಿಎಂ ಪಕ್ಷದಿಂದ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಈ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಎಂ ಮತ್ತು ಸಿಪಿಐ ಸದಸ್ಯ ಸತ್ಯಬಾಬಾ ಅವರು ಮಾತನಾಡಿ ದೇಶದ್ಯಾಂತ ಈ ದಿನ ಎಡಪಕ್ಷಗಳು ಬಿಜೆಪಿ ಸರ್ಕಾರ ಮತ್ತು ಮತ್ತು ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ಮಾಡಿದ್ದೆವೆ. ದೇಶ ವಿರೋದಿ ಕೆಲಸವನ್ನು ಖಂಡಿಸುತ್ತಿದ್ದೆವೆ ಎಂದು ತಿಳಿಸಿದರು.

ಸಿಪಿಎಂ ಮತ್ತು ಸಿಪಿಐ ಪಕ್ಷದ ಸದಸ್ಯರು ಪ್ರತಿಭಟನೆಯಲ್ಲಿನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೌರತ್ವ ಕಾಯಿದೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದರು.

ಗಣಿನಾಡು ಬಳ್ಳಾರಿಯಲ್ಲಿ 144 ಸೆಷನ್ ಮೂರು ದಿನಗಳವರೆಗೆ ಜಾರಿ, ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಒಟ್ಟು 1500 ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಹೋಮ್ ಗಾರ್ಡ ಗಳನ್ನು ಭದ್ರತೆಯ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ ಎಂದು ಎಸ್.ಪಿ ಸಿಕೆ ಬಾಬಾ ತಿಳಿಸಿದರು.

ಬಳ್ಳಾರಿ ರಾಯಲ್, ಮೋತಿ, ಎಸ್.ಪಿ ಸರ್ಕಲ್, ಸಂಗಮ್, ಕೌಲ್ ಬಜಾರ್ ಪದೇಶಗಳಲ್ಲಿ ಮತ್ತು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಭದ್ರತೆಯ ದೃಷ್ಟಿಯಿಂದ ನಿಯೋಜನೆ ಎಸ್.ಪಿ‌ ಸಿ.ಕೆ ಬಾಬಾ ಮಾಡಿದರು.

ಪೊಲೀಸರು ರಾಯಲ್ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಐವತ್ತಕ್ಕಿಂತ ಹೆಚ್ಚಿನ ಪಕ್ಷದ ಸದಸ್ಯರನ್ನು ಬಂದಿಸಿದ ಪೊಲೀಸ್ ವಾನ್ ನಲ್ಲಿ ಡಿ.ಎ.ಆರ್ ಮೈದಾನಕ್ಕೆ ಕರೆದುಕೊಂಡು ಹೋದರು.

ಈ ಸಮಯದಲ್ಲಿ ಸಿಪಿಎಂ ಮತ್ತು ಸಿಪಿಐ ಪಕ್ಷದ ಸದಸ್ಯ ಮತ್ತು ಕೌಲ್ ಬಜಾರ್ ಠಾಣೆಯ ಸಿಪಿಐ ರಘು ಕುಮಾರ್ ಅವರೊಂದಿಗೆ ಪೊಲೀಸ್ ವಾನ್ ನಲ್ಲಿ ವಾದ ನಡೆಯಿತು.

ಅಂಬ್ಯುಲೇನ್ಸ್ ಗಳಿಗೆ ದಾರಿ ಇಲ್ಲದೇ ಟ್ರಾಫಿಕ್ ಜಾಮ್ :-

ಪ್ರತಿಭಟನೆ ಮಾಡುವ ಸಮಯದಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಉಂಟಾಯಿತು. ಈ ಸಮಯದಲ್ಲಿ 9 ಅಂಬುಲೇನ್ಸ್ ಗಳು ವಿಮ್ಸ್ ನಿಂದ ಜಿಲ್ಲಾ ಆಸ್ಪತ್ರೆ ಮಾರ್ಗವಾಗಿ, ದುರ್ಗಮ ಗುಡಿ ಹತ್ತಿರದಿಂದ ಜಿಲ್ಲಾ ಆಸ್ಪತ್ರೆಗೆ ಹೋಗುವ ಅಂಬುಲೇನ್ಸ್ ನಲ್ಲಿನ ರೋಗಿಗಳಿಗೆ ಬಹಳ ಸಮಸ್ಯೆ ಉಂಟಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.




Conclusion:ಪ್ರತಿಭಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ಕೆ.ರಾಮರಾವ್, ಸಿಪಿಐ ನಾಗರಾಜ್, ಗಾಯತ್ರಿ, ರಘು ಕುಮಾರ್ ಮತ್ತು ಪಿ.ಎಸ್.ಐ ನಾಗರಾಜ್ ಮತ್ತು 70 ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

ಒಟ್ಟಾರೆಯಾಗಿ 144 ಸೇಷನ್ ಜಾರಿಯಾಗಿದ್ದರು ಸಹ ಎರಡು ಪಕ್ಷಗಳು ಪ್ರತಿಭಟನೆ ಮಾಡಿದವು, ಈ ಪ್ರತಿಭಟನೆಯಿಂದ ಜನರಿಗೆ ಮತ್ತು ರೋಗಿಗಳಿಗೆ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.