ETV Bharat / city

ಪಿಎಸ್​ಐ ಅಕ್ರಮದಲ್ಲಿ ತಪ್ಪು ಮಾಡಿದವರಿಗೆ ಮಾತ್ರ ಶಿಕ್ಷಯಾಗಲಿ: ಹೆಚ್​.ಡಿ.ಕೆ ಅಭಿಪ್ರಾಯ

author img

By

Published : Apr 30, 2022, 1:24 PM IST

ಪಿಎಸ್​ಐ ಅಕ್ರಮ ನೇಮಕಾತಿ ಪರೀಕ್ಷೆಯಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರಿಗೆ ಮಾತ್ರ ತಕ್ಕ ಶಿಕ್ಷೆ ಕೊಡುವ ಬದಲು ಈಗ ನ್ಯಾಯವಾಗಿ ಪರೀಕ್ಷೆ ಬರೆದು ಪಾಸಾದವರೂ ಶಿಕ್ಷೆ ಅನುಭವಿಸುವ ಹಾಗಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕುಟುಕಿದ್ದಾರೆ.

Former CM H.D.Kumarswamy
ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

ವಿಜಯನಗರ: ಪಿಎಸ್​ಐ ಅಕ್ರಮದ ಕಿಂಗ್​ಪಿನ್​ಗಳು ಅರೆಸ್ಟ್ ಆಗಿದ್ದಾರೆ. ಅವರಿಂದ ಮಾಹಿತಿ ಪಡೆದು ಅಕ್ರಮವಾಗಿ ಪಾಸ್ ಆದವರ ಮೇಲೆ ಕ್ರಮ ಕೈಗೊಳ್ಳಲಿ. ನೇಮಕಾತಿಯನ್ನೇ ರದ್ದು ಮಾಡುವುದು ತಪ್ಪು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ಮಾಜಿ ಸಿಎಂ ಹೆಚ್​ಡಿಕೆ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​ಡಿಕೆ

ಸಂಕಷ್ಟದಲ್ಲಿಯೂ ಪರೀಕ್ಷೆ ಬರೆದು ಪಾಸ್ ಆದವರು ಬಹಳಷ್ಟು ಜನರಿದ್ದಾರೆ. ಅಂತವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಮಾಹಿತಿ ಪಡೆದು ವಿಚಾರಣೆ ನಡೆಸಿ ನಿರ್ಧಾರ ಮಾಡಬೇಕು. ಯಾರು ಅಕ್ರಮ ಎಸಗಿದ್ದಾರೆಯೋ ಅವರನ್ನು ಮುಂದೆ ಯಾವುದೇ ಸರ್ಕಾರಿ ನೌಕರಿಗೆ ಅರ್ಹರಲ್ಲ ಎನ್ನುವಂತದ್ದನ್ನು ತೀರ್ಮಾನ ಮಾಡಿಕೊಳ್ಳಲಿ. ಏಕಾಏಕಿ ನಿರ್ಧಾರ ಮಾಡಿರುವುದು ತಪ್ಪು ಎಂದು ಹೇಳಿದರು.

ಆ್ಯಸಿಡ್ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ: ಈ ಬಗೆಯ ಅಮಾನವೀಯ ಘಟನೆಗಳು ನಡೆಯಬಾರದು. ಮೈಸೂರಿನಲ್ಲಿಯೂ ಬೈಕ್ ಕೊಡಿಸಿಲ್ಲ ಅಂತ ಅಕ್ಕನ ಮಗುವನ್ನೇ ಗೋಡೆಗೆಸೆದು ಕೊಲೆ ಮಾಡಲಾಗಿದೆ. ಇನ್ನು ಆ್ಯಸಿಡ್ ದಾಳಿಯಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ದಾಳಿಗೊಳಗಾದ ಅಮಾಯಕ ಹೆಣ್ಮಗಳ ಮುಂದಿನ ಪರಿಸ್ಥಿತಿಯೇನು? ಇಂತಹ ಅಮಾನವೀಯ ಘಟನೆಗಳು ಸಮಾಜಕ್ಕೆ ಮಾರಕ ಎಂದರು.

ಇದನ್ನೂ ಓದಿ: PSI ಅಕ್ರಮ ನೇಮಕಾತಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನ ಸಿಐಡಿಗೆ ಒದಗಿಸಲು ನಾನೇ ಪ್ರಿಯಾಂಕ್‌ ಖರ್ಗೆ ಬಳಿ ವಿನಂತಿಸಿದ್ದೆ.. ಆರಗ

ವಿಜಯನಗರ: ಪಿಎಸ್​ಐ ಅಕ್ರಮದ ಕಿಂಗ್​ಪಿನ್​ಗಳು ಅರೆಸ್ಟ್ ಆಗಿದ್ದಾರೆ. ಅವರಿಂದ ಮಾಹಿತಿ ಪಡೆದು ಅಕ್ರಮವಾಗಿ ಪಾಸ್ ಆದವರ ಮೇಲೆ ಕ್ರಮ ಕೈಗೊಳ್ಳಲಿ. ನೇಮಕಾತಿಯನ್ನೇ ರದ್ದು ಮಾಡುವುದು ತಪ್ಪು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ಮಾಜಿ ಸಿಎಂ ಹೆಚ್​ಡಿಕೆ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​ಡಿಕೆ

ಸಂಕಷ್ಟದಲ್ಲಿಯೂ ಪರೀಕ್ಷೆ ಬರೆದು ಪಾಸ್ ಆದವರು ಬಹಳಷ್ಟು ಜನರಿದ್ದಾರೆ. ಅಂತವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಮಾಹಿತಿ ಪಡೆದು ವಿಚಾರಣೆ ನಡೆಸಿ ನಿರ್ಧಾರ ಮಾಡಬೇಕು. ಯಾರು ಅಕ್ರಮ ಎಸಗಿದ್ದಾರೆಯೋ ಅವರನ್ನು ಮುಂದೆ ಯಾವುದೇ ಸರ್ಕಾರಿ ನೌಕರಿಗೆ ಅರ್ಹರಲ್ಲ ಎನ್ನುವಂತದ್ದನ್ನು ತೀರ್ಮಾನ ಮಾಡಿಕೊಳ್ಳಲಿ. ಏಕಾಏಕಿ ನಿರ್ಧಾರ ಮಾಡಿರುವುದು ತಪ್ಪು ಎಂದು ಹೇಳಿದರು.

ಆ್ಯಸಿಡ್ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ: ಈ ಬಗೆಯ ಅಮಾನವೀಯ ಘಟನೆಗಳು ನಡೆಯಬಾರದು. ಮೈಸೂರಿನಲ್ಲಿಯೂ ಬೈಕ್ ಕೊಡಿಸಿಲ್ಲ ಅಂತ ಅಕ್ಕನ ಮಗುವನ್ನೇ ಗೋಡೆಗೆಸೆದು ಕೊಲೆ ಮಾಡಲಾಗಿದೆ. ಇನ್ನು ಆ್ಯಸಿಡ್ ದಾಳಿಯಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ದಾಳಿಗೊಳಗಾದ ಅಮಾಯಕ ಹೆಣ್ಮಗಳ ಮುಂದಿನ ಪರಿಸ್ಥಿತಿಯೇನು? ಇಂತಹ ಅಮಾನವೀಯ ಘಟನೆಗಳು ಸಮಾಜಕ್ಕೆ ಮಾರಕ ಎಂದರು.

ಇದನ್ನೂ ಓದಿ: PSI ಅಕ್ರಮ ನೇಮಕಾತಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನ ಸಿಐಡಿಗೆ ಒದಗಿಸಲು ನಾನೇ ಪ್ರಿಯಾಂಕ್‌ ಖರ್ಗೆ ಬಳಿ ವಿನಂತಿಸಿದ್ದೆ.. ಆರಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.