ETV Bharat / city

ಗೌರಿಬಿದನೂರಿನ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ: ಶ್ರೀರಾಮುಲು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು

ಗೌರಿಬಿದನೂರಿನಲ್ಲಿ ನಿನ್ನೆ ಸಾವನ್ನಪ್ಪಿದ್ದ 75 ವರ್ಷದ ವೃದ್ಧ ಮಹಿಳೆಗೆ ಕೊರೊನಾ ಸೋಂಕು ಬಾಧಿಸಿತ್ತು. ಈ ಕಾರಣಕ್ಕಾಗಿಯೇ ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಶ್ರೀರಾಮುಲು
ಶ್ರೀರಾಮುಲು
author img

By

Published : Mar 26, 2020, 1:48 PM IST

ಬಳ್ಳಾರಿ: ಕೊರೊನಾ ವೈರಸ್‌ಗೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾದ ಬಳಿಕ ಇದೀಗ ಗೌರಿಬಿದನೂರಿನ ವೃದ್ಧ ಮಹಿಳೆ ಪ್ರಾಣ ತೆತ್ತಿದ್ದಾರೆ. ಈ ಮೂಲಕ ಮಾರಣಾಂತಿಕ ಕೊವಿಡ್-19 ರಾಜ್ಯದಲ್ಲಿ ಇಬ್ಬರನ್ನು ಆಹುತಿ ಪಡೆದಿದೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 52 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಕಲಬುರಗಿ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನ‌ಲ್ಲಿ ಇಬ್ಬರು‌ ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಗೌರಿಬಿದನೂರಿನ‌ ಸೋಂಕಿತ ಮಹಿಳೆ (75) ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇಂದು ವರದಿ ಬಂದಿದ್ದು, ಅವರು ಕೊರೊನಾ ವೈರಸ್​ನಿಂದಲೇ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಸರಿಸುಮಾರು 2,400 ಕ್ಕೂ ಅಧಿಕ ಮಂದಿಯ ರಕ್ತದ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ರು.

ಬಳ್ಳಾರಿ: ಕೊರೊನಾ ವೈರಸ್‌ಗೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾದ ಬಳಿಕ ಇದೀಗ ಗೌರಿಬಿದನೂರಿನ ವೃದ್ಧ ಮಹಿಳೆ ಪ್ರಾಣ ತೆತ್ತಿದ್ದಾರೆ. ಈ ಮೂಲಕ ಮಾರಣಾಂತಿಕ ಕೊವಿಡ್-19 ರಾಜ್ಯದಲ್ಲಿ ಇಬ್ಬರನ್ನು ಆಹುತಿ ಪಡೆದಿದೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 52 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಕಲಬುರಗಿ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನ‌ಲ್ಲಿ ಇಬ್ಬರು‌ ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಗೌರಿಬಿದನೂರಿನ‌ ಸೋಂಕಿತ ಮಹಿಳೆ (75) ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇಂದು ವರದಿ ಬಂದಿದ್ದು, ಅವರು ಕೊರೊನಾ ವೈರಸ್​ನಿಂದಲೇ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಸರಿಸುಮಾರು 2,400 ಕ್ಕೂ ಅಧಿಕ ಮಂದಿಯ ರಕ್ತದ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.