ETV Bharat / city

ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: 10 ಗ್ರಾಮಗಳು ಮುಳುಗಡೆ ಭೀತಿ

author img

By

Published : Aug 13, 2019, 3:01 AM IST

ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನಿರ್ಧರಿಸಿದ್ದು, 10 ಗ್ರಾಮಗಳು ಮುಳುಗಡೆ ಭೀತಿ‌ ಎದುರಿಸುತ್ತಿವೆ.  ಹಾಗಾಗಿ ಈ ಗ್ರಾಮಗಳಲ್ಲಿನ ಜನರನ್ನು ಸ್ಥಳಾಂತರಿಸಲು ಮತ್ತು ಅಗತ್ಯವಿರುವೆಡೆ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು‌ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಬಳ್ಳಾರಿ: ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನಿರ್ಧರಿಸಿದ್ದು, 10 ಗ್ರಾಮಗಳು ಮುಳುಗಡೆ ಭೀತಿ‌ ಎದುರಿಸುತ್ತಿವೆ. ಹಾಗಾಗಿ ಈ ಗ್ರಾಮಗಳಲ್ಲಿನ ಜನರನ್ನು ಸ್ಥಳಾಂತರಿಸಲು ಮತ್ತು ಅಗತ್ಯವಿರುವೆಡೆ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು‌ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಶನಿವಾರ ಸಂಜೆ 25 ಸಾವಿರ‌ ಕ್ಯೂಸೆಕ್ ನೀರನ್ನು ನದಿಗೆ ಜಲಾಶಯದಿಂದ ಹರಿಬಿಡಲಾಗಿತ್ತು. ಅದನ್ನು ಹಂತ ಹಂತವಾಗಿ ಈಗಾಗಲೇ 1.70 ಲಕ್ಷ ಕ್ಯೂಸೆಕ್ ನೀರನ್ನು ತುಂಗಾಭದ್ರಾ ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಕೆಲ ಪ್ರದೇಶಗಳು ಹಾಗೂ ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ-ಗಂಗಾವತಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಸಂಪರ್ಕ ಸ್ಥಗಿತಗೊಂಡಿದೆ.

ಜಿಲ್ಲೆಯ ಹೊಸಪೇಟೆ ತಾಲೂಕಿನ ಮತ್ತು ಕಂಪ್ಲಿ ತಾಲೂಕಿನ ಐದೈದು ಹಳ್ಳಿಗಳು ಮುಳುಗಡೆ ಭೀತಿ ಎದುರಿಸುತ್ತಿದ್ದು, ಈಗಾಗಲೇ ಜಿಲ್ಲಾಡಳಿತದಿಂದ ನಿಯೋಜಿಸಿದ ತಂಡವು ಗ್ರಾಮಗಳಲ್ಲಿ ಅಗತ್ಯ ಜನಜಾಗೃತಿ ಮೂಡಿಸಿ ಗ್ರಾಮದಲ್ಲಿನ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ಆರಂಭಿಸಲು‌ ಜಿಲ್ಲಾಡಳಿತ ನಿರ್ಧರಿಸಿದ್ದು, ಪಡಿತರ ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ‌ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೊಸಪೇಟೆ ಉಪವಿಭಾಗ ಅಧಿಕಾರಿ ಪಿ.ಎನ್.ಲೋಕೇಶ ತಿಳಿಸಿದರು.

ಅಧಿಕಾರಿಗಳ ತಂಡದೊಂದಿಗೆ ಕಂಪ್ಲಿ ಶಾಸಕ ಗಣೇಶ್​ ಜತೆಗೂಡಿ ಕಂಪ್ಲಿ ಸೇತುವೆಯ ನೀರಿನ ಸ್ಥಿತಿಗತಿ‌ ಪರಿಶೀಲಿಸಿ ಮಾತನಾಡಿ ಅವರು, ಜಲಾಶಯ ಈ ಬಾರಿ ತುಂಬುತ್ತದೆಯೋ‌ ಇಲ್ಲವೋ ಎಂಬ ಆತಂಕ ಇತ್ತು. ಅದನ್ನು ಆ ಭಗವಂತ ನಿವಾರಿಸಿ ತ್ರಿವಳಿ‌ ಜಿಲ್ಲೆಗಳ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಾಜ್ಯದ ಅರ್ಧ ಭಾಗವೇ ನೆರೆಹಾವಳಿಯಿಂದ ತತ್ತರಿಸುತ್ತಿರುವುದು ನೋವು ಉಂಟು ಮಾಡಿದೆ. ಕಂಪ್ಲಿ-ಗಂಗಾವತಿಗೆ ಸಂಪರ್ಕ‌ ಕಲ್ಪಿಸುವ ಸೇತುವೆ ಮುಳುಗಡೆಯಾಗುತ್ತಿದೆ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಇದನ್ನು ಹೊಸದಾಗಿ ನಿರ್ಮಿಸುವುದು ಅಗತ್ಯವಿದೆ. ಈಗಾಗಿ ಹೊಸದಾಗಿ ನಿರ್ಮಾಣಕ್ಕೆ‌ ಯೋಜನೆ ತಯಾರಿಸಿ ನೀಡುವಂತೆ‌ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹೊಸ ಸೇತುವೆ ನಿರ್ಮಿಸುವುದಕ್ಕೆ‌ ಪ್ರಯತ್ನಿಸಲಾಗುವುದು ಎಂದರು.

ಪರಿಹಾರ ಪದ್ಧತಿ ಬದಲಾವಣೆಗೆ ಆಗ್ರಹ:

ಮಳೆಯಿಂದ ಹಾಗೂ ಜಲಾಶಯದಿಂದ ನೀರು ಬಿಟ್ಟ ಸಂದರ್ಭದಲ್ಲಿ ಸರ್ಕಾರ ನೀಡುವ ಪರಿಹಾರ ಪದ್ಧತಿ ತುಂಬಾ ಹಳೆಯದಾಗಿದೆ. ತುಂಬಾ ಹಾನಿಯಾದರೂ ಕಡಿಮೆ ಪರಿಹಾರ ನೀಡಲಾಗುತ್ತಿದ್ದು, ಇದು ಬದಲಾವಣೆಯಾಗಬೇಕು. ಬೆಳೆಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿದ್ದು, ಅಗತ್ಯ ಪರಿಹಾರ ನೀಡಲಿದೆ ಎಂದು ಶಾಸಕ ಗಣೇಶ್​ ತಿಳಿಸಿದರು.

ಇನ್ನು 3 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಕಂಪ್ಲಿ ಸೇತುವೆ ಬಳಿಯ 500 ಕುಟುಂಬಗಳ ಸ್ಥಳಾಂತರಕ್ಕೆ ಮನವೊಲಿಸಿ ಅವರನ್ನು ಬೇರೆಡೆ ಸ್ಥಳಾಂತರಿಸಲಾಗುವುದು. ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು. ಈ ವೇಳೆ ತಹಶೀಲ್ದಾರ್ ರೇಣುಕಾ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ‌ಮತ್ತು ಸಿಬ್ಬಂದಿ ಇದ್ದರು.

ಬಳ್ಳಾರಿ: ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನಿರ್ಧರಿಸಿದ್ದು, 10 ಗ್ರಾಮಗಳು ಮುಳುಗಡೆ ಭೀತಿ‌ ಎದುರಿಸುತ್ತಿವೆ. ಹಾಗಾಗಿ ಈ ಗ್ರಾಮಗಳಲ್ಲಿನ ಜನರನ್ನು ಸ್ಥಳಾಂತರಿಸಲು ಮತ್ತು ಅಗತ್ಯವಿರುವೆಡೆ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು‌ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ತುಂಗಾಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಶನಿವಾರ ಸಂಜೆ 25 ಸಾವಿರ‌ ಕ್ಯೂಸೆಕ್ ನೀರನ್ನು ನದಿಗೆ ಜಲಾಶಯದಿಂದ ಹರಿಬಿಡಲಾಗಿತ್ತು. ಅದನ್ನು ಹಂತ ಹಂತವಾಗಿ ಈಗಾಗಲೇ 1.70 ಲಕ್ಷ ಕ್ಯೂಸೆಕ್ ನೀರನ್ನು ತುಂಗಾಭದ್ರಾ ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಕೆಲ ಪ್ರದೇಶಗಳು ಹಾಗೂ ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ-ಗಂಗಾವತಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಸಂಪರ್ಕ ಸ್ಥಗಿತಗೊಂಡಿದೆ.

ಜಿಲ್ಲೆಯ ಹೊಸಪೇಟೆ ತಾಲೂಕಿನ ಮತ್ತು ಕಂಪ್ಲಿ ತಾಲೂಕಿನ ಐದೈದು ಹಳ್ಳಿಗಳು ಮುಳುಗಡೆ ಭೀತಿ ಎದುರಿಸುತ್ತಿದ್ದು, ಈಗಾಗಲೇ ಜಿಲ್ಲಾಡಳಿತದಿಂದ ನಿಯೋಜಿಸಿದ ತಂಡವು ಗ್ರಾಮಗಳಲ್ಲಿ ಅಗತ್ಯ ಜನಜಾಗೃತಿ ಮೂಡಿಸಿ ಗ್ರಾಮದಲ್ಲಿನ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ಆರಂಭಿಸಲು‌ ಜಿಲ್ಲಾಡಳಿತ ನಿರ್ಧರಿಸಿದ್ದು, ಪಡಿತರ ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ‌ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೊಸಪೇಟೆ ಉಪವಿಭಾಗ ಅಧಿಕಾರಿ ಪಿ.ಎನ್.ಲೋಕೇಶ ತಿಳಿಸಿದರು.

ಅಧಿಕಾರಿಗಳ ತಂಡದೊಂದಿಗೆ ಕಂಪ್ಲಿ ಶಾಸಕ ಗಣೇಶ್​ ಜತೆಗೂಡಿ ಕಂಪ್ಲಿ ಸೇತುವೆಯ ನೀರಿನ ಸ್ಥಿತಿಗತಿ‌ ಪರಿಶೀಲಿಸಿ ಮಾತನಾಡಿ ಅವರು, ಜಲಾಶಯ ಈ ಬಾರಿ ತುಂಬುತ್ತದೆಯೋ‌ ಇಲ್ಲವೋ ಎಂಬ ಆತಂಕ ಇತ್ತು. ಅದನ್ನು ಆ ಭಗವಂತ ನಿವಾರಿಸಿ ತ್ರಿವಳಿ‌ ಜಿಲ್ಲೆಗಳ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಾಜ್ಯದ ಅರ್ಧ ಭಾಗವೇ ನೆರೆಹಾವಳಿಯಿಂದ ತತ್ತರಿಸುತ್ತಿರುವುದು ನೋವು ಉಂಟು ಮಾಡಿದೆ. ಕಂಪ್ಲಿ-ಗಂಗಾವತಿಗೆ ಸಂಪರ್ಕ‌ ಕಲ್ಪಿಸುವ ಸೇತುವೆ ಮುಳುಗಡೆಯಾಗುತ್ತಿದೆ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಇದನ್ನು ಹೊಸದಾಗಿ ನಿರ್ಮಿಸುವುದು ಅಗತ್ಯವಿದೆ. ಈಗಾಗಿ ಹೊಸದಾಗಿ ನಿರ್ಮಾಣಕ್ಕೆ‌ ಯೋಜನೆ ತಯಾರಿಸಿ ನೀಡುವಂತೆ‌ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹೊಸ ಸೇತುವೆ ನಿರ್ಮಿಸುವುದಕ್ಕೆ‌ ಪ್ರಯತ್ನಿಸಲಾಗುವುದು ಎಂದರು.

ಪರಿಹಾರ ಪದ್ಧತಿ ಬದಲಾವಣೆಗೆ ಆಗ್ರಹ:

ಮಳೆಯಿಂದ ಹಾಗೂ ಜಲಾಶಯದಿಂದ ನೀರು ಬಿಟ್ಟ ಸಂದರ್ಭದಲ್ಲಿ ಸರ್ಕಾರ ನೀಡುವ ಪರಿಹಾರ ಪದ್ಧತಿ ತುಂಬಾ ಹಳೆಯದಾಗಿದೆ. ತುಂಬಾ ಹಾನಿಯಾದರೂ ಕಡಿಮೆ ಪರಿಹಾರ ನೀಡಲಾಗುತ್ತಿದ್ದು, ಇದು ಬದಲಾವಣೆಯಾಗಬೇಕು. ಬೆಳೆಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿದ್ದು, ಅಗತ್ಯ ಪರಿಹಾರ ನೀಡಲಿದೆ ಎಂದು ಶಾಸಕ ಗಣೇಶ್​ ತಿಳಿಸಿದರು.

ಇನ್ನು 3 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಕಂಪ್ಲಿ ಸೇತುವೆ ಬಳಿಯ 500 ಕುಟುಂಬಗಳ ಸ್ಥಳಾಂತರಕ್ಕೆ ಮನವೊಲಿಸಿ ಅವರನ್ನು ಬೇರೆಡೆ ಸ್ಥಳಾಂತರಿಸಲಾಗುವುದು. ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು. ಈ ವೇಳೆ ತಹಶೀಲ್ದಾರ್ ರೇಣುಕಾ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ‌ಮತ್ತು ಸಿಬ್ಬಂದಿ ಇದ್ದರು.

Intro:10 ಗ್ರಾಮಗಳ ಮುಳುಗಡೆ ಭೀತಿ, ಸ್ಥಳಾಂತರಕ್ಕೆ ಸಿದ್ಧತೆ, ಅಗತ್ಯವಿರುವಡೆ ಗಂಜಿ ಕೇಂದ್ರಗಳ ಆರಂಭ
ಬಳ್ಳಾರಿ: ತುಂಗಾಭದ್ರಾ ಜಲಾಶಯದಿಂದ ಇಂದು ಸಂಜೆ ವೇಳೆಗೆ 3ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ 10ಗ್ರಾಮಗಳು ಮುಳುಗಡೆ ಭೀತಿ‌ ಎದುರಿಸುತ್ತಿವೆ.
ಈ ಗ್ರಾಮಗಳಲ್ಲಿನ ಜನರನ್ನು ಸ್ಥಳಾಂತರಿಸಲು ಮತ್ತು ಅಗತ್ಯವಿರುವಡೆ ಗಂಜಿಕೇಂದ್ರಗಳನ್ನು ಸ್ಥಾಪಿಸಲು‌ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ಶನಿವಾರ ಸಂಜೆ 25 ಸಾವಿರ‌ ಕ್ಯೂಸೆಕ್ ನೀರು ನದಿಗೆ ಜಲಾಶಯ ದಿಂದ ಹರಿಬಿಡಲಾಗಿತ್ತು. ಅದನ್ನು ಹಂತ ಹಂತವಾಗಿ ಈಗಾಗಲೇ 1.70 ಲಕ್ಷ ಕ್ಯೂಸೆಕ್ ನೀರನ್ನು ತುಂಗಾಭದ್ರಾ ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿಪಾತ್ರದ ಕೆಲ ಪ್ರದೇಶಗಳು ಹಾಗೂ ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ-ಗಂಗಾವತಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು ಸಂಪರ್ಕ ಸ್ಥಗಿತಗೊಂಡಿದೆ.
ಜಿಲ್ಲೆಯ ಹೊಸಪೇಟೆ ತಾಲೂಕಿನ 5 ಮತ್ತು ಕಂಪ್ಲಿ ತಾಲೂಕಿನ
5 ಹಳ್ಳಿಗಳು ಮುಳುಗಡೆ ಭೀತಿ ಎದುರಿಸುತ್ತಿದ್ದು, ಈಗಾಗಲೇ ಜಿಲ್ಲಾಡಳಿತದಿಂದ ನಿಯೋಜಿಸಿದ ತಂಡವು ಗ್ರಾಮಗಳಲ್ಲಿ ಅಗತ್ಯ ಜನಜಾಗೃತಿ ಮೂಡಿಸಿ ಗ್ರಾಮದಲ್ಲಿನ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ಆರಂಭಿಸಲು‌ ಜಿಲ್ಲಾಡಳಿತ ನಿರ್ಧರಿಸಿದ್ದು, ಪಡಿತರ ಸಂಗ್ರಹಿಸಿಟ್ಟುಕೊಳ್ಳಲಾಗಿದೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ‌ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೊಸಪೇಟೆ ಉಪವಿಭಾಗ ಅಧಿಕಾರಿ ಪಿ.ಎನ್.ಲೋಕೇಶ ತಿಳಿಸಿದರು.
ಕಂಪ್ಲಿ ಶಾಸಕ ಗಣೇಶ ಜತೆಗೂಡಿ ಅಧಿಕಾರಿಗಳ ತಂಡದೊಂದಿಗೆ ಮುಳುಗಡೆಯಾಗಿರುವ ಕಂಪ್ಲಿ ಸೇತುವೆಯ ನೀರಿನ ಸ್ಥಿತಿಗತಿ‌ ಪರಿಶೀಲಿಸಿ ಅವರು ಮಾತನಾಡಿದರು.
ಸ್ಥಳದಲ್ಲಿದ್ದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಗಣೇಶ ಅವರು ಜಲಾಶಯ ಈ ಬಾರಿ ತುಂಬುತ್ತದೆಯೋ‌ ಇಲ್ಲವೋ ಎಂಬ ಆತಂಕ ಇತ್ತು. ಅದನ್ನು ಆ ಭಗವಂತ ನಿವಾರಿಸಿ ತ್ರಿವಳಿ‌ ಜಿಲ್ಲೆಗಳ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಾಜ್ಯದ ಅರ್ಧ ಭಾಗವೇ ನೆರೆಹಾವಳಿಯಿಂದ ತತ್ತರಿಸುತ್ತಿರುವುದು ನೋವು ಉಂಟು ಮಾಡಿದೆ ಎಂದರು.
Body:ಅಂದಾಜು 1.76 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಮತ್ತು ಸಂಜೆ ವೇಳೆಗೆ
3 ಲಕ್ಷ ಕ್ಯೂಸೆಕ್ ನೀರು ಬಿಡಲು ತೀರ್ಮಾನಿಸ ಲಾಗಿದೆ ಎಂದು ತಿಳಿಸಿದ ಅವರು ಜಲಾಶಯದಿಂದ ನೀರು‌ ಹರಿಸಿದಾಗಲೊಮ್ಮೆ ಕಂಪ್ಲಿ-ಗಂಗಾವತಿಗೆ ಸಂಪರ್ಕ‌ ಕಲ್ಪಿಸುವ ಸೇತುವೆ ಮುಳುಗಡೆಯಾಗುತ್ತಿದೆ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಇದನ್ನು ಹೊಸದಾಗಿ ನಿರ್ಮಿಸುವುದು ಅಗತ್ಯವಿದೆ. ಈಗಾಗಿ ಹೊಸದಾಗಿ ನಿರ್ಮಾಣಕ್ಕೆ‌ ಎಸ್ಟಿಮೆಟ್ ತಯಾರಿಸಿ ನೀಡುವಂತೆ‌ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹೊಸ ಸೇತುವೆ ನಿರ್ಮಿಸುವುದಕ್ಕೆ‌ ಪ್ರಯತ್ನಿಸಲಾಗುವುದು.
ಪರಿಹಾರ ಪದ್ಧತಿ ಬದಲಾವಣೆಗೆ ಅಗ್ರಹ: ಮಳೆಯಿಂದ ಹಾಗೂ ಜಲಾಶಯದಿಂದ ನೀರು ಬಿಟ್ಟ ಸಂದರ್ಭದಲ್ಲಿ ಸರಕಾರ ನೀಡುವ ಪರಿಹಾರ ಪದ್ಧತಿ ತುಂಬಾ ಹಳೆಯದಾಗಿದೆ. ತುಂಬಾ ಹಾನಿಯಾದರೂ ಕಡಿಮೆ ಪರಿಹಾರ ನೀಡಲಾಗುತ್ತಿದ್ದು, ಇದು ಬದಲಾವಣೆಯಾಗಬೇಕು ಎಂದು ಶಾಸಕ ಗಣೇಶ ಅವರು ಒತ್ತಾಯಿಸಿದರು.
ಬೆಳೆಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿದ್ದು, ಅಗತ್ಯ ಪರಿಹಾರ ನೀಡಲಿದೆ ಎಂದು ಅವರು ತಿಳಿಸಿದರು.
3 ಲಕ್ಷ ಕ್ಯೂಸೆಕ್ ಬಿಟ್ಟರೇ ಕಂಪ್ಲಿ ಸೇತುವೆ ಬಳಿಯ 500 ಕುಟುಂಬಗಳ ಸ್ಥಳಾಂತರಕ್ಕೆ ಮನವೊಲಿಸಿ ಅವರನ್ನು ಬೇರೆಡೆ ಸ್ಥಳಾಂತರಿಸಲಾಗುವುದು. ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.
ತಹಸೀಲ್ದಾರ್ ರೇಣುಕಾ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ‌ಮತ್ತು ಸಿಬ್ಬಂದಿ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.



ಬೈಟ್ : ಮೀನುಗಾರೆ ಜ್ಯೋತಿ

ಬೈಟ್: ಮೀನುಗಾರ ಶಂಕರಪ್ಪ

ಬೈಟ್ : ಹೊಸಪೇಟೆ ಎಸಿ ಲೋಕೇಶ

ಬೈಟ್ : ಕಂಪ್ಲಿ ಶಾಸಕ ಗಣೇಶ

Conclusion:KN_BLY_2_KAMPLI_BRIDGE_VISIT_MLA_GANESH_VISUALS_7203310

KN_BLY_2d_KAMPLI_BRIDGE_VISIT_MLA_GANESH_VISUALS_7203310

KN_BLY_2e_KAMPLI_BRIDGE_VISIT_MLA_GANESH_VISUALS_7203310

KN_BLY_2f_KAMPLI_BRIDGE_VISIT_MLA_GANESH_VISUALS_7203310

KN_BLY_2g_KAMPLI_BRIDGE_VISIT_MLA_GANESH_VISUALS_7203310

KN_BLY_2h_KAMPLI_BRIDGE_VISIT_MLA_GANESH_VISUALS_7203310

KN_BLY_2i_KAMPLI_BRIDGE_VISIT_MLA_GANESH_VISUALS_7203310

KN_BLY_2j_KAMPLI_BRIDGE_VISIT_MLA_GANESH_VISUALS_7203310

KN_BLY_2k_KAMPLI_BRIDGE_VISIT_MLA_GANESH_VISUALS_7203310

KN_BLY_2l_KAMPLI_BRIDGE_VISIT_MLA_GANESH_VISUALS_7203310

KN_BLY_2m_KAMPLI_BRIDGE_VISIT_MLA_GANESH_VISUALS_7203310

KN_BLY_2n_KAMPLI_BRIDGE_VISIT_MLA_GANESH_VISUALS_7203310

KN_BLY_2o_KAMPLI_BRIDGE_VISIT_MLA_GANESH_VISUALS_7203310

ETV Bharat Logo

Copyright © 2024 Ushodaya Enterprises Pvt. Ltd., All Rights Reserved.