ETV Bharat / city

ಅಕ್ರಮಕ್ಕೆ ಕುಮ್ಮಕ್ಕು, ಅನುಚಿತ ವರ್ತನೆ: ವಿಜಯನಗರ ಪೊಲೀಸ್ ಕಾನ್ಸ್​​ಟೇಬಲ್ ಸಸ್ಪೆಂಡ್‌

author img

By

Published : May 18, 2022, 11:45 AM IST

ಕರ್ತವ್ಯಲೋಪ ಆರೋಪದ ಮೇರೆಗೆ ಕೊಟ್ಟೂರು ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್​​ ಕೊಟ್ರಗೌಡ ಅವರನ್ನು ಅಮಾನತು ಮಾಡಲಾಗಿದೆ.

Police Constable  suspended
ಕೊಟ್ರಗೌಡ-ಅಮಾನತುಗೊಂಡ ಕಾನ್ಸ್​​ಟೇಬಲ್

ವಿಜಯನಗರ: ಅಕ್ರಮಕ್ಕೆ ಕುಮ್ಮಕ್ಕು, ಮೇಲಧಿಕಾರಿಗಳ ಜೊತೆ ಅನುಚಿತ ವರ್ತನೆ ಆರೋಪದ ಮೇರೆಗೆ ಪೊಲೀಸ್ ಕಾನ್ಸ್​​ಟೇಬಲ್ ಕೊಟ್ರಗೌಡ ಎಂಬುವವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ ಆದೇಶ ಹೊರಡಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕೊಟ್ರಗೌಡ ಕಾರ್ಯನಿರ್ವಹಿಸುತ್ತಿದ್ದರು.

SP Dr. Arun K
ವಿಜಯನಗರ ಎಸ್​​ಪಿ ಡಾ. ಅರುಣ್. ಕೆ

ಅಕ್ರಮ ಮರಳು ಸಾಗಾಟ ಮಾಡುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದರೂ ಪಾಲನೆ ಮಾಡಿಲ್ಲ ಹಾಗೂ ವರ್ಗಾವಣೆ ಮಾಡಿಸುತ್ತೇನೆ ಎಂದು ಪಿಎಸ್​ಐಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವಿಜಯನಗರ ಎಸ್​​ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.

ವಿಜಯನಗರ: ಅಕ್ರಮಕ್ಕೆ ಕುಮ್ಮಕ್ಕು, ಮೇಲಧಿಕಾರಿಗಳ ಜೊತೆ ಅನುಚಿತ ವರ್ತನೆ ಆರೋಪದ ಮೇರೆಗೆ ಪೊಲೀಸ್ ಕಾನ್ಸ್​​ಟೇಬಲ್ ಕೊಟ್ರಗೌಡ ಎಂಬುವವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ ಆದೇಶ ಹೊರಡಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕೊಟ್ರಗೌಡ ಕಾರ್ಯನಿರ್ವಹಿಸುತ್ತಿದ್ದರು.

SP Dr. Arun K
ವಿಜಯನಗರ ಎಸ್​​ಪಿ ಡಾ. ಅರುಣ್. ಕೆ

ಅಕ್ರಮ ಮರಳು ಸಾಗಾಟ ಮಾಡುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದರೂ ಪಾಲನೆ ಮಾಡಿಲ್ಲ ಹಾಗೂ ವರ್ಗಾವಣೆ ಮಾಡಿಸುತ್ತೇನೆ ಎಂದು ಪಿಎಸ್​ಐಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವಿಜಯನಗರ ಎಸ್​​ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.