ಬೆಂಗಳೂರು: ಕುವೈತ್ ದೊರೆ ಶೇಖ್ ಸಬಾಹ್ ಅಲ್ ಅಹಮದ್ ಅಲ್ ಜಬೀರ್ ಅಲ್ ಸಬಾಹ್ ಅಮೀರ್ ನಿಧನದ ಹಿನ್ನೆಲೆಯಲ್ಲಿ ಅ.4ರಂದು ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಕುವೈತ್ ದೊರೆ ಸೆ.29ರಂದು ನಿಧನ ಹೊಂದಿದ್ದರು. ಅಗಲಿದ ಗಣ್ಯರ ಗೌರವಾರ್ಥವಾಗಿ ಇಂದು ಒಂದು ದಿನ ದೇಶದಾದ್ಯಂತ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.
![state mourning](https://etvbharatimages.akamaized.net/etvbharat/prod-images/kn-bng-05-kuwaitshekhtribute-mourning-script-7201951_03102020233445_0310f_1601748285_236.jpg)
ಇಂದು ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ.