ETV Bharat / city

ಬೆಂಗಳೂರಿನಲ್ಲಿ ಫೆ. 26ರಿಂದ 12ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ: ಸಿಎಂ - ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‌ನಲ್ಲಿರುವ ಪಿವಿಆರ್‌

ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ 12ನೇ ಆವೃತ್ತಿ ಫೆ. 26ರಿಂದ ಮಾರ್ಚ್ 4ರವರೆಗೆ ನಗರದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

KN_BNG_02_CM_FILM_FEST_SCRIPT_9021933
ಬೆಂಗಳೂರಿನಲ್ಲಿ ಫೆ.26 ರಿಂದ 12ನೇ ಅಂತರರಾಷ್ಟ್ರೀಯ ಸಿನಿಮೋತ್ಸವ: ಒರಾಯನ್ ಮಾಲ್‌ನಲ್ಲಿ ಅನಾವರಣ
author img

By

Published : Jan 9, 2020, 1:48 PM IST

ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ 12ನೇ ಆವೃತ್ತಿ ಫೆ. 26ರಿಂದ ಮಾರ್ಚ್ 4ರವರೆಗೆ ನಗರದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿ.ಎಸ್​.ಯಡಿಯೂರಪ್ಪ, ಮುಖ್ಯಮಂತ್ರಿ
ಗೃಹ ಕಚೇರಿ ಕೃಷ್ಣಾದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅನಾವರಣಗೊಳಿಸಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿನಿಮೋತ್ಸವ ನಡೆಸುತ್ತಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೈಜೋಡಿಸಿದೆ. ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸಿನಿಮೋತ್ಸವ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‌ನಲ್ಲಿರುವ ಪಿವಿಆರ್‌ನಲ್ಲಿ 11 ಪರದೆಗಳಲ್ಲಿ ನಿನಿಮಾ ಪ್ರದರ್ಶನವಾಗಲಿದೆ ಎಂದರು. ಉದ್ಘಾಟನಾ ಸಮಾರಂಭ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರತಿನಿಧಿಗಳು, ಗಣ್ಯರು, ನಿರ್ದೇಶಕರ ಉಪಸ್ಥಿತಿಯಲ್ಲಿ ಫೆ. 26ರಂದು ಬುಧವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದೆ. ಮಾರ್ಚ್ 4ರಂದು ಮುಕ್ತಾಯ ಸಮಾರಂಭ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ನಡೆಯಲಿದೆ. ಏಳು ದಿನಗಳ ಕಾಲ ಸಿನಿಮೋತ್ಸವ ನಡೆಯಲಿದೆ. ವಿಶ್ವ ಸಿನಿಮಾ, ಚಿತ್ರ ಭಾರತಿ, ಭಾರತೀಯ ಚಿತ್ರಗಳ ಸ್ಪರ್ಧೆ ವಿಭಾಗ, ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟ ಪ್ರಶಸ್ತಿ ಪಡೆದ ಚಿತ್ರಗಳು, ಏಷಿಯನ್ ಸಿನಿಮಾ, ನೆಟ್‌ಪ್ಯಾಕ್, ಆತ್ಮಚರಿತ್ರೆ ಆಧರಿತ ಚಿತ್ರಗಳು, ಉಪ ಭಾಷಾ ಚಿತ್ರಗಳು, ನಟ, ಕಲಾವಿದ, ತಂತ್ರಜ್ಞರು, ಸಿಂಹಾವಲೋಕನ, ವಿಶೇಷ ವಸ್ತು ಆಧಾರಿತ ಚಿತ್ರಗಳು, ಕಣ್ಮರೆಯಾದ ನಟ, ನಿರ್ದೇಶಕ ಸ್ಮರಣೆ, ಸಾಕ್ಷ್ಯಚಿತ್ರಗಳು ಇಲ್ಲಿ ಚಿತ್ರಲೋಕದ ವೈವಿಧ್ಯವನ್ನು ತೆರೆದಿಡಲಿದೆ ಎಂದರು.
ಸಿನಿಮಾದ ಬೆಳವಣಿಗೆ ಕುರಿತಂತೆ ಸಂವಾದ, ಉಪನ್ಯಾಸ, ಚಲನಚಿತ್ರ ತಯಾರಿಕೆ, ಚಲನಚಿತ್ರ ಕಲೆ ರಸಗ್ರಹಣ ಶಿಬಿರ, ವಿಚಾರ ಸಂಕಿರಣ, ಕಾರ್ಯಾಗಾರ, ಮಾಸ್ಟರ್ ಕ್ಲಾಸ್ ವಿಭಾಗದಲ್ಲಿ ಸಿನಿಮಾ ತಜ್ಞರಿಂದ ಉಪನ್ಯಾಸ ಸಿನಿಮಾಸಕ್ತರಿಗೆ, ಸಿನಿಮಾ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿವೆ. ವಿಶ್ವದ 50 ದೇಶಗಳಿಂದ ಸುಮಾರು 200 ಸಮಕಾಲೀನ ಚಲನಚಿತ್ರಗಳು ಸಿನಿಮೋತ್ಸವದಲ್ಲಿ ಪ್ರೇಕ್ಷಕರಿಗೆ ಲಭ್ಯವಾಗಲಿವೆ. ಪ್ರತಿನಿಧಿ ಶುಲ್ಕ ರೂ. 800 ಇರಲಿದೆ. ಸಿನಿಮಾ ವಿದ್ಯಾರ್ಥಿಗಳಿಗೆ ಹಾಗೂ ಚಲನಚಿತ್ರರಂಗದವರಿಗೆ ರೂ. 400 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಬೆಂಗಳೂರು ನಗರಕ್ಕೆ ವಿಶ್ವ ಸಿನಿಮಾವನ್ನು ಪರಿಚಯಿಸುವುದು ಚಲನಚಿತ್ರೋತ್ಸವದ ಮುಖ್ಯ ಉದ್ದೇಶ. ಹೀಗಾಗಿ ಇದನ್ನು 'ಬೆಂಗಳೂರಿನಲ್ಲಿ ಜಗತ್ತು' ಎಂದು ಬಣ್ಣಿಸಲಾಗುತ್ತದೆ. ಕನ್ನಡ ಸಿನಿಮಾ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ರಾಷ್ಟ್ರಗಳಿಗೆ ಪರಿಚಯಿಸುವ ಕೆಲಸವು ಈ ಮೂಲಕ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ 12ನೇ ಆವೃತ್ತಿ ಫೆ. 26ರಿಂದ ಮಾರ್ಚ್ 4ರವರೆಗೆ ನಗರದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿ.ಎಸ್​.ಯಡಿಯೂರಪ್ಪ, ಮುಖ್ಯಮಂತ್ರಿ
ಗೃಹ ಕಚೇರಿ ಕೃಷ್ಣಾದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅನಾವರಣಗೊಳಿಸಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿನಿಮೋತ್ಸವ ನಡೆಸುತ್ತಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೈಜೋಡಿಸಿದೆ. ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸಿನಿಮೋತ್ಸವ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‌ನಲ್ಲಿರುವ ಪಿವಿಆರ್‌ನಲ್ಲಿ 11 ಪರದೆಗಳಲ್ಲಿ ನಿನಿಮಾ ಪ್ರದರ್ಶನವಾಗಲಿದೆ ಎಂದರು. ಉದ್ಘಾಟನಾ ಸಮಾರಂಭ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರತಿನಿಧಿಗಳು, ಗಣ್ಯರು, ನಿರ್ದೇಶಕರ ಉಪಸ್ಥಿತಿಯಲ್ಲಿ ಫೆ. 26ರಂದು ಬುಧವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದೆ. ಮಾರ್ಚ್ 4ರಂದು ಮುಕ್ತಾಯ ಸಮಾರಂಭ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ನಡೆಯಲಿದೆ. ಏಳು ದಿನಗಳ ಕಾಲ ಸಿನಿಮೋತ್ಸವ ನಡೆಯಲಿದೆ. ವಿಶ್ವ ಸಿನಿಮಾ, ಚಿತ್ರ ಭಾರತಿ, ಭಾರತೀಯ ಚಿತ್ರಗಳ ಸ್ಪರ್ಧೆ ವಿಭಾಗ, ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟ ಪ್ರಶಸ್ತಿ ಪಡೆದ ಚಿತ್ರಗಳು, ಏಷಿಯನ್ ಸಿನಿಮಾ, ನೆಟ್‌ಪ್ಯಾಕ್, ಆತ್ಮಚರಿತ್ರೆ ಆಧರಿತ ಚಿತ್ರಗಳು, ಉಪ ಭಾಷಾ ಚಿತ್ರಗಳು, ನಟ, ಕಲಾವಿದ, ತಂತ್ರಜ್ಞರು, ಸಿಂಹಾವಲೋಕನ, ವಿಶೇಷ ವಸ್ತು ಆಧಾರಿತ ಚಿತ್ರಗಳು, ಕಣ್ಮರೆಯಾದ ನಟ, ನಿರ್ದೇಶಕ ಸ್ಮರಣೆ, ಸಾಕ್ಷ್ಯಚಿತ್ರಗಳು ಇಲ್ಲಿ ಚಿತ್ರಲೋಕದ ವೈವಿಧ್ಯವನ್ನು ತೆರೆದಿಡಲಿದೆ ಎಂದರು.
ಸಿನಿಮಾದ ಬೆಳವಣಿಗೆ ಕುರಿತಂತೆ ಸಂವಾದ, ಉಪನ್ಯಾಸ, ಚಲನಚಿತ್ರ ತಯಾರಿಕೆ, ಚಲನಚಿತ್ರ ಕಲೆ ರಸಗ್ರಹಣ ಶಿಬಿರ, ವಿಚಾರ ಸಂಕಿರಣ, ಕಾರ್ಯಾಗಾರ, ಮಾಸ್ಟರ್ ಕ್ಲಾಸ್ ವಿಭಾಗದಲ್ಲಿ ಸಿನಿಮಾ ತಜ್ಞರಿಂದ ಉಪನ್ಯಾಸ ಸಿನಿಮಾಸಕ್ತರಿಗೆ, ಸಿನಿಮಾ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿವೆ. ವಿಶ್ವದ 50 ದೇಶಗಳಿಂದ ಸುಮಾರು 200 ಸಮಕಾಲೀನ ಚಲನಚಿತ್ರಗಳು ಸಿನಿಮೋತ್ಸವದಲ್ಲಿ ಪ್ರೇಕ್ಷಕರಿಗೆ ಲಭ್ಯವಾಗಲಿವೆ. ಪ್ರತಿನಿಧಿ ಶುಲ್ಕ ರೂ. 800 ಇರಲಿದೆ. ಸಿನಿಮಾ ವಿದ್ಯಾರ್ಥಿಗಳಿಗೆ ಹಾಗೂ ಚಲನಚಿತ್ರರಂಗದವರಿಗೆ ರೂ. 400 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಬೆಂಗಳೂರು ನಗರಕ್ಕೆ ವಿಶ್ವ ಸಿನಿಮಾವನ್ನು ಪರಿಚಯಿಸುವುದು ಚಲನಚಿತ್ರೋತ್ಸವದ ಮುಖ್ಯ ಉದ್ದೇಶ. ಹೀಗಾಗಿ ಇದನ್ನು 'ಬೆಂಗಳೂರಿನಲ್ಲಿ ಜಗತ್ತು' ಎಂದು ಬಣ್ಣಿಸಲಾಗುತ್ತದೆ. ಕನ್ನಡ ಸಿನಿಮಾ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ರಾಷ್ಟ್ರಗಳಿಗೆ ಪರಿಚಯಿಸುವ ಕೆಲಸವು ಈ ಮೂಲಕ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
Intro:


ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವದ12 ನೇ ಆವೃತ್ತಿ ಫೆ. 26 ರಿಂದ ಮಾರ್ಚ್ 4 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ 12 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅನಾವರಣಗೊಳಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸುತ್ತಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕೈಜೋಡಿಸಿದೆ. ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸಿನಿಮೋತ್ಸವ
ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‌ನಲ್ಲಿರುವ ಪಿವಿಆರ್‌ನಲ್ಲಿ 11 ಪರದೆಗಳಲ್ಲಿ ಅನಾವರಣಗೊಳ್ಳಲಿದೆ ಎಂದರು.

ಉದ್ಘಾಟನಾ ಸಮಾರಂಭ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರತಿನಿಧಿಗಳು, ಗಣ್ಯರ
ನಿರ್ದೇಶಕರ ಉಪಸ್ಥಿತಿಯಲ್ಲಿ ಫೆ.26 ರಂದು ಬುಧವಾರ ಸಂಜೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಮಾರ್ಚ್ 4 ರಂದು ಮುಕ್ತಾಯ ಸಮಾರಂಭ ಪ್ರಶಸ್ತಿ ಪ್ರದಾನ ಸಮಾರಂಭ ದೊಂದಿಗೆ ನಡೆಯಲಿದೆ.ಸಮಾರೋಪ ಸಮಾರಂಭದ ಸ್ಥಳ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.

ಏಳು ದಿನಗಳ ಸಿನಿಮೋತ್ಸವದಲ್ಲಿ ಒಟ್ಟು ಹದಿನಾಲ್ಕು ವಿಭಾಗಗಳಿದ್ದು, ಚಲನಚಿತ್ರೋದ್ಯಮದ
ಎಲ್ಲ ವಿಭಾಗಗಳನ್ನು ಪ್ರತಿನಿಧಿಸಿದ. ವಿಶ್ವ ಸಿನಿಮಾ, ಚಿತ್ರ ಭಾರತಿ ಭಾರತೀಯ ಚಿತ್ರಗಳ ಸ್ಪರ್ಧೆ
ವಿಭಾಗ, ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಚಲನಚಿತ್ರ ವಿಮರ್ಶಕರ ಅಂತರರಾಷ್ಟ್ರೀಯ ಒಕ್ಕೂಟ
ಪ್ರಶಸ್ತಿ ಪಡೆದ ಚಿತ್ರಗಳು, ಏಷಿಯನ್ ಸಿನಿಮಾ, ನೆಟ್‌ಪ್ಯಾಕ್, ಆತ್ಮಚರಿತ್ರೆ ಆಧರಿತ ಚಿತ್ರಗಳು,ಉಪ ಭಾಷಾ ಚಿತ್ರಗಳು, ನಟ, ಕಲಾವಿದ, ತಂತ್ರಜ್ಞರು ಸಿಂಹಾವಲೋಕನ, ವಿಶೇಷ ವಸ್ತು ಆಧಾರಿತ ಚಿತ್ರಗಳು, ಕಣ್ಮರೆಯಾದ ನಟ, ನಿರ್ದೇಶಕ ಸ್ಮರಣೆ, ಸಾಕ್ಷ್ಯಚಿತ್ರಗಳು ಇಲ್ಲಿ ಚಿತ್ರಲೋಕದ
ವೈವಿಧ್ಯವನ್ನು ತೆರೆದಿಡಲಿದೆ ಎಂದರು.


ಸಿನಿಮಾದ ಬೆಳವಣಿಗೆ ಕುರಿತಂತೆ ಸಂವಾದ, ಉಪನ್ಯಾಸ, ಚಲನಚಿತ್ರ ತಯಾರಿಕೆ, ಚಲನಚಿತ್ರ ಕಲೆ ರಸಗ್ರಹಣ ಶಿಬಿರ, ವಿಚಾರಸಂಕಿರಣ, ಕಾರ್ಯಾಗಾರ, ಮಾಸ್ಟರ್ ಕ್ಲಾಸ್ ವಿಭಾಗದಲ್ಲಿ ಸಿನಿಮಾ ತಜ್ಞರಿಂದ ಉಪನ್ಯಾಸ.. ಇವೆಲ್ಲಾ ಸಿನಿವಾಸ ಕರಿಗೆ, ಸಿನಿಮಾ ವಿದ್ಯಾರ್ಥಿಗಳಿಗೆ
ಉಪಯುಕ್ತವಾಗಲಿವೆ.ವಿಶ್ವದ 50 ದೇಶಗಳಿಂದ ಸುಮಾರು 200 ಸಮಕಾಲೀನ ಚಲನಚಿತ್ರಗಳು ಸಿನಿಮೋತ್ಸವದಲ್ಲಿ
ಪ್ರೇಕ್ಷಕರಿಗೆ ಲಭ್ಯವಾಗಲಿದೆ. ಪ್ರತಿನಿಧಿ ಶುಲ್ಕ ರೂ.800 ಇರಲಿದೆ. ಸಿನಿಮಾ ವಿದ್ಯಾರ್ಥಿಗಳಿಗೆ ಹಾಗೂ
ಚಲನಚಿತ್ರರಂಗದವರಿಗೆ ರೂ. 400 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.

ಬೆಂಗಳೂರು ನಗರಕ್ಕೆ ವಿಶ್ವ ಸಿನಿಮಾವನ್ನು ಪರಿಚಯಿಸುವುದು ಚಲನಚಿತ್ರೋತ್ಸವ ಮುಖ್ಯ ಉದ್ದೇಶ. ಹೀಗಾಗಿ ಇದನ್ನು 'ಬೆಂಗಳೂರಿನಲ್ಲಿ ಜಗತ್ತು' ಎಂದು ಬಣ್ಣಿಸಲಾಗುತ್ತದೆ. ಕನ್ನಡ
ಸಿನಿಮಾ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ರಾಷ್ಟ್ರಗಳಿಗೆ ಪರಿಚಯಿಸುವ ಕೆಲಸವು ಈ
ಮೂಲಕ ನಡೆಯುತ್ತಿದೆ ಎಂದರು.Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.