ಬೆಂಗಳೂರು: ಗಾಂಜಾ ತಂದು ಸರ್ಕಾರಿ ಬಸ್ಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಬಿಎಂಟಿಸಿ ನೌಕರರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತರು. ಆರೋಪಿಗಳಿಂದ 9.8 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ.
ಬಿಎಂಟಿಸಿಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಸರ್ಕಾರಿ ಬಸ್ಗಳಲ್ಲಿ ಸಾರಿಗೆ ನೌಕರರಿಗೆ ಮುಕ್ತ ಓಡಾಟಕ್ಕೆ ಅವಕಾಶ ನೀಡಿರುವುದನ್ನು ದುರ್ಬಳಕೆ ಮಾಡಿ ಕೃತ್ಯ ಎಸಗಿದ್ದಾರೆ.
![Marijuana selling case](https://etvbharatimages.akamaized.net/etvbharat/prod-images/12756871_zxnftgreh.jpg)
ನಗರದ ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನು ಅಕ್ರಮಕ್ಕೆ ಅಡ್ಡ ಮಾಡಿಕೊಂಡಿದ್ದ ಗಾಂಜಾ ಪೆಡ್ಲರ್ಗಳು ಕಳೆದ ಮೂರು ವರ್ಷಗಳಿಂದ ದಂಧೆಯಲ್ಲಿ ಭಾಗಿಯಾಗಿದ್ದರು. ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಕೆ.ಜಿ. ಗೆ 40-50 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ: ಬೆಂಗಳೂರು ಹೊರವಲಯಗಳಲ್ಲಿ ಹೆಚ್ಚು ಕೋವಿಡ್ ಕೇಸ್ ಪತ್ತೆ: ಪಾಲಿಕೆ ಯೋಜನೆ ಏನು?
ಆರೋಪಿಗಳ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಲಾಗಿದೆ.