ETV Bharat / city

ಬ್ಯಾಂಕ್ ಖಾಸಗೀಕರಣಕ್ಕೆ ವಿರೋಧ: ಇಂದು ಮತ್ತೆ ನಾಳೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ

author img

By

Published : Mar 15, 2021, 9:51 AM IST

ಕೇಂದ್ರ ಸರ್ಕಾರ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಬ್ಯಾಂಕ್​ಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆ ಇಂದು ಮತ್ತೆ ನಾಳೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

bank employees strike
bank employees strike

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಾರ್ವಜನಿಕ ವಲಯದ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಬ್ಯಾಂಕ್ ನೌಕರರ 9 ಸಂಘಟನೆಗಳ ಒಕ್ಕೂಟ (ಯುಎಫ್​ಬಿಯು) ಬೆಂಗಳೂರು ಘಟಕದಿಂದ ಮಾರ್ಚ್ 15 ರಿಂದ ಎರಡು ದಿನಗಳ ಮುಷ್ಕರ ನಡೆಸುವುದಾಗಿ ತಿಳಿಸಿದೆ. ಈ ಹಿನ್ನೆಲೆ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬ್ಯಾಂಕ್ ನೌಕರರು ಯೋಜನೆ ರೂಪಿಸಿಕೊಂಡಿದ್ದು, ಬ್ಯಾಂಕ್ ಬಂದ್ ಬಿಸಿ ಸಾರ್ವಜನಿಕರಿಗೆ ತಟ್ಟಲಿದೆ.

ಮಾ. 13 ಎರಡನೇ ಶನಿವಾರದ ಹಿನ್ನೆಲೆ ಬ್ಯಾಂಕ್ ರಜೆ ಇತ್ತು, 14 ಭಾನುವಾರ ವಾಗಿತ್ತು, ಹಾಗೇಯೇ 15-16 ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ ನಡೆಸಲು ತೀರ್ಮಾನಿಸಿದ್ದರಿಂದ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಾರ್ವಜನಿಕ ವಲಯದ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಬ್ಯಾಂಕ್ ನೌಕರರ 9 ಸಂಘಟನೆಗಳ ಒಕ್ಕೂಟ (ಯುಎಫ್​ಬಿಯು) ಬೆಂಗಳೂರು ಘಟಕದಿಂದ ಮಾರ್ಚ್ 15 ರಿಂದ ಎರಡು ದಿನಗಳ ಮುಷ್ಕರ ನಡೆಸುವುದಾಗಿ ತಿಳಿಸಿದೆ. ಈ ಹಿನ್ನೆಲೆ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬ್ಯಾಂಕ್ ನೌಕರರು ಯೋಜನೆ ರೂಪಿಸಿಕೊಂಡಿದ್ದು, ಬ್ಯಾಂಕ್ ಬಂದ್ ಬಿಸಿ ಸಾರ್ವಜನಿಕರಿಗೆ ತಟ್ಟಲಿದೆ.

ಮಾ. 13 ಎರಡನೇ ಶನಿವಾರದ ಹಿನ್ನೆಲೆ ಬ್ಯಾಂಕ್ ರಜೆ ಇತ್ತು, 14 ಭಾನುವಾರ ವಾಗಿತ್ತು, ಹಾಗೇಯೇ 15-16 ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ ನಡೆಸಲು ತೀರ್ಮಾನಿಸಿದ್ದರಿಂದ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.