ETV Bharat / city

ಕೇಂದ್ರದಿಂದ ಬಂಪರ್ ಕೊಡುಗೆ: ರಾಜ್ಯಕ್ಕೆ 275 ಪಶು ಸಂಜೀವಿನಿ ಸಂಚಾರಿ ಪಶು ಚಿಕಿತ್ಸಾ ವಾಹನ

author img

By

Published : Oct 6, 2021, 5:05 PM IST

ಕರ್ನಾಟಕ ಅನುಷ್ಠಾನಕ್ಕೆ ತಂದ ವಿನೂತನ ಯೋಜನೆ ಪಶು ಸಂಜೀವಿನಿ ಪರಿಕಲ್ಪನೆಯನ್ನು ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ವಿಸ್ತರಣೆ ಮಾಡುತ್ತಿರುವುದರ ಬಗ್ಗೆ ಸ್ವತಃ ಕೇಂದ್ರ ಪಶುಸಂಗೋಪನೆ ಸಚಿವರು ಕರೆ ಮೂಲಕ ತಿಳಿಸಿದ್ದಾರೆ. ಇದು ಕರ್ನಾಟಕಕ್ಕೆ ಹಾಗೂ ಪಶುಸಂಗೋಪನೆ ಇಲಾಖೆಗೆ ಅತ್ಯಂತ ಸಂತೋಷದ ಸಂಗತಿ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

Minister Prabhu Chauhan
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೇಂದ್ರ ಪಶುಸಂಗೋಪನೆ ಇಲಾಖೆಯೊಂದಿಗೆ ಸಂವಹನ ನಡೆಸಿದ ಪರಿಣಾಮ ರಾಜ್ಯಕ್ಕೆ 275 ಪಶು ಸಂಜೀವಿನಿ ಸಂಚಾರಿ ಪಶು ಚಿಕಿತ್ಸಾ ವಾಹನ ರಾಜ್ಯಕ್ಕೆ ದೊರೆತಿವೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಪಶು ಸಂಜೀವಿನಿ ಯಶಸ್ವಿಯಾಗಿದ್ದು, ಎಲ್ಲ ತಾಲೂಕುಗಳಿಂದ ಹೆಚ್ಚು ಬೇಡಿಕೆ ಬರುತ್ತಿತ್ತು. ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾ ವಾಹನ ತೆರಳಿ ಚಿಕಿತ್ಸೆ ನೀಡುತ್ತಿರುವುದರಿಂದ ರೈತರಿಗೆ ಈ ಯೋಜನೆ ಹೆಚ್ಚು ಉಪಯೋಗವಾಗಿದೆ.

ಅಲ್ಲದೇ, ಎಲ್ಲ ತಾಲೂಕುಗಳಿಗೂ ಇದನ್ನು ವಿಸ್ತರಣೆ ಮಾಡಬೇಕು ಎಂದು ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಪಶು ಸಂಗೋಪನೆ ಇಲಾಖೆಯ ಕೇಂದ್ರ ಸಚಿವರೊಂದಿಗೆ ನಿರಂತರವಾಗಿ ಚರ್ಚೆ ನಡೆಸಿದ ಪರಿಣಾಮ ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿ ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನಗಳು ದೊರೆತಿವೆ ಎಂದರು.

ಕೇಂದ್ರದಿಂದ 44 ಕೋಟಿ ರೂ. ಅನುದಾನ:

ವಾಹನ ಒದಗಿಸಲು ಕೇಂದ್ರದಿಂದ ಒಟ್ಟು ರೂ.44 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪ್ರತಿ ಪಶು ಚಿಕಿತ್ಸಾ ವಾಹನಕ್ಕೆ ರೂ.16 ಲಕ್ಷ ವೆಚ್ಚವಾಗಲಿದೆ. ವಾರ್ಷಿಕವಾಗಿ ವಾಹನ ನಿರ್ವಹಣೆ ಪಿಪಿಪಿ ಮಾದರಿಯಲ್ಲಿ ನಡೆಯಲಿದೆ. ಪ್ರತಿ ವರ್ಷ ವಾಹನ ಹಾಗೂ ಸಿಬ್ಬಂದಿಯ ನಿರ್ವಹಣೆಗೆ ಹೆಚ್ಚುವರಿಯಾಗಿ 50 ಕೋಟಿ ರೂ. ಅನುದಾನವನ್ನು ಕೇಂದ್ರ ಹಾಗೂ ರಾಜ್ಯದ ಪಾಲುದಾರಿಕೆಯಲ್ಲಿ ನೀಡಲಾಗಿದೆ. ರಾಜ್ಯದ ಪಾಲು ಶೇ. 40 ಹಾಗೂ ಕೇಂದ್ರದ ಪಾಲು ಶೇ. 60 ಇರಲಿದೆ.

ವಾಹನದಲ್ಲಿ ಒಬ್ಬರು ಪಶು ವೈದ್ಯರು, ಪಶು ವೈದ್ಯಕೀಯ ಸಹಾಯಕ ಹಾಗೂ ನುರಿತ ಚಾಲಕ /ಪರಿಚಾರಕ ಇರಲಿದ್ದಾರೆ. ಪಶು ಕಲ್ಯಾಣ ಸಹಾಯವಾಣಿ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಸ್ಥಾಪನೆಯಾಗಿದ್ದು, ಅತ್ಯಂತ ಯಶಸ್ವಿಯಾಗಿ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪಶು ಸಂಗೋಪನೆ ಇಲಾಖೆ ಕಾರ್ಯ ಪ್ರವೃತ್ತವಾಗಿದೆ. ಇದರಿಂದಾಗಿ ಪಶು ಸಂಜೀವಿನಿ ರಾಜ್ಯಾದ್ಯಂತ ಅತ್ಯಂತ ಕ್ರ‍ಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಯೋಜನಾ ಮಾದರಿ ದೇಶಕ್ಕೆ ವಿಸ್ತರಣೆ:

ದೆಹಲಿ ಪ್ರವಾಸದ ಸಮಯದಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದಾಗ ಕರ್ನಾಟಕದಲ್ಲಿ ಕೈಗೊಂಡ ನೂತನ ಪ್ರಯೋಗ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಕುರಿತು ಚರ್ಚೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂದಿನ ಕೇಂದ್ರ ಪಶು ಸಂಗೋಪನಾ ಇಲಾಖೆ ಸಚಿವರಾಗಿದ್ದ ಗಿರಿರಾಜ್ ಸಿಂಗ್ ರಾಜ್ಯದ ಈ ಯೋಜನೆಯನ್ನು ಶ್ಲಾಘನೆ ಮಾಡಿದ್ದರು.

ಅಲ್ಲದೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿ ದೇಶದ ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ಇದನ್ನು ದೇಶಾದ್ಯಂತ ವಿಸ್ತರಣೆ ಮಾಡಲು ಚರ್ಚೆ ನಡೆಸುವುದಾಗಿ ತಿಳಿಸಿದ್ದರು. ಸದ್ಯ ದೇಶದ 14 ರಾಜ್ಯಗಳಿಗೆ ಕೇಂದ್ರದಿಂದ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನ ನೀಡಲಾಗಿದೆ. ರಾಜ್ಯದ ಯೋಜನಾ ಮಾದರಿ ದೇಶಕ್ಕೆ ವಿಸ್ತರಣೆಯಾಗುತ್ತಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ಅನುಷ್ಠಾನಕ್ಕೆ ತಂದ ವಿನೂತನ ಯೋಜನೆ ಪಶು ಸಂಜೀವಿನಿ ಪರಿಕಲ್ಪನೆಯನ್ನು ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ವಿಸ್ತರಣೆ ಮಾಡುತ್ತಿರುವುದರ ಬಗ್ಗೆ ಸ್ವತಃ ಕೇಂದ್ರ ಪಶುಸಂಗೋಪನೆ ಸಚಿವರು ಕರೆ ಮೂಲಕ ತಿಳಿಸಿದ್ದಾರೆ. ಇದು ಕರ್ನಾಟಕಕ್ಕೆ ಹಾಗೂ ಪಶುಸಂಗೋಪನೆ ಇಲಾಖೆಗೆ ಅತ್ಯಂತ ಸಂತೋಷದ ಸಂಗತಿ ಎಂದರು.

ರಾಜ್ಯಕ್ಕೆ 50 ಲಕ್ಷ ಡೋಸ್:

ಸದ್ಯ ರಾಜ್ಯದಲ್ಲಿ ಕಾಲುಬಾಯಿ ರೋಗ ನಿಯಂತ್ರಣದಲ್ಲಿ ಪಶು ಸಂಗೋಪನೆ ಇಲಾಖೆ ತೊಡಗಿದೆ. ಕೇಂದ್ರದಿಂದ ರಾಜ್ಯದಲ್ಲಿ 50 ಲಕ್ಷ ಡೋಸ್ ದೊರೆತಿದ್ದು, ರಾಜ್ಯದಲ್ಲಿ ಕಾಲುಬಾಯಿ ರೋಗ ಕಂಡುಬಂದ ಪ್ರದೇಶದಲ್ಲಿ ಆದ್ಯತೆಯ ಮೇಲೆ ಲಸಿಕೆ ವಿತರಣೆ ತುರ್ತಾಗಿ ಮಾಡಲಾಗುವುದು. ರೋಗೋದ್ರೇಕ ಕಂಡು ಬಂದ ಜಿಲ್ಲೆಗಳಲ್ಲಿ ರಿಂಗ್ ವ್ಯಾಕ್ಸಿನ್​​ಗೆ ಹೆಚ್ಚು ಆದ್ಯತೆ ನೀಡಿ ಕಾಲುಬಾಯಿ ರೋಗವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುತ್ತೇವೆ ಎಂದರು.

ಶೀಘ್ರದಲ್ಲೇ ಲೋಕಾರ್ಪಣೆ:

ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಅತೀ ಶೀಘ್ರದಲ್ಲೇ ಸಮಯ ನಿಗದಿ ಪಡಿಸಿ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನವನ್ನು ಲೋಕಾರ್ಪಣೆ ಮಾಡಲಾಗುವುದು. ಟಾಟಾ ಕಂಪನಿ ಜತೆ ಮಾತುಕತೆ ನಡೆಸಲಾಗಿದ್ದು, ಆದಷ್ಟು ಬೇಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನ ಕಾರ್ಯ ನಿರ್ವಹಿಸಲಿವೆ. ಕರ್ನಾಟಕದಲ್ಲಿ 1962 ನಂಬರ್ ಗೆ ಕರೆ ಮಾಡಿದರೆ, ಪಶು ಸಂಜೀವಿನಿ ವಾಹನ ರೈತರ ಮನೆಗೆ ತೆರಳಲಿದೆ ಎಂದು ತಿಳಿಸಿದರು.

ರೈತರ ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಪಶುಸಂಗೋಪನೆ ಸಚಿವ ಪರಷೋತ್ತಮ್ ರೂಪಾಲ್, ಸಚಿವ ಸಂಜೀವ್ ಕುಮಾರ್ ಮಾಲ್ಯನ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಇದೇ ವೇಳೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ:

ರೈತರ ಪಶುಗಳಿಗೆ ಸಮಸ್ಯೆಯಾದರೆ ಸ್ಪಂದಿಸಲು ವಾರ್ ರೂಮ ಮಾಡಲಾಗಿದ್ದು, ಇದುವರೆಗೂ 25,000 ಕರೆಗಳು ಬಂದಿವೆ. ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ತೆರೆಯಲು 20 ಜಿಲ್ಲೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಶೀಘ್ರವೇ ಗೋಶಾಲೆ ಆರಂಭಕ್ಕೆ ಭೂಮಿ ಪೂಜೆ ಮಾಡಲಾಗುವುದು ಎಂದು ತಿಳಿಸಿದರು.

ಗೋಹತ್ಯೆ ಕಾಯ್ದೆ ಜಾರಿಗೆ ಬಂದ ನಂತರ 400.ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಬಕ್ರೀದ್ ಸಂದರ್ಭದಲ್ಲಿ 9,000 ಸಾವಿರ ಪಶುಗಳ ರಕ್ಷಣೆ ಮಾಡಲಾಗಿದೆ. ಕಾಲು ಬಾಯಿ ರೋಗಕ್ಕೆ 50 ಲಕ್ಷ ಡೋಸ್ ಲಸಿಕೆ ಬಂದಿದೆ. ಕಾಲುಬಾಯಿ ರೋಗದಿಂದ 58 ಜಾನುವಾರುಗಳು ಸಾವೀಗೀಡಾಗಿವೆ. 4,400 ಕಾನುವಾರುಗಳಿಗೆ ಕಾಲು ಬಾಯಿ ರೋಗ ಬಂದಿತ್ತು. ತಕ್ಷಣ ಲಸಿಕೆ ಹಾಕಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಿದ್ದರಾಮಯ್ಯ, ಹೆಚ್​​ಡಿಕೆ ಹೇಳಿಕೆಗೆ ಖಂಡನೆ:

ಆರ್​​ಎಸ್​​ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗಿರುತ್ತಿತ್ತು. ಆರ್​​ಎಸ್​​ಎಸ್ ಇರುವುದರಿಂದಲೇ ಭಾರತ ಉಳಿದಿದೆ. ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಮಾಜಿ ಮುಖ್ಯಮಂತ್ರಿಗಳಾಗಿದ್ದಾರೆ. ಅವರು ಈ ರೀತಿಯ ಹೇಳಿಕೆ ಸರಿಯಲ್ಲ ಎಂದರು.

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೇಂದ್ರ ಪಶುಸಂಗೋಪನೆ ಇಲಾಖೆಯೊಂದಿಗೆ ಸಂವಹನ ನಡೆಸಿದ ಪರಿಣಾಮ ರಾಜ್ಯಕ್ಕೆ 275 ಪಶು ಸಂಜೀವಿನಿ ಸಂಚಾರಿ ಪಶು ಚಿಕಿತ್ಸಾ ವಾಹನ ರಾಜ್ಯಕ್ಕೆ ದೊರೆತಿವೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಪಶು ಸಂಜೀವಿನಿ ಯಶಸ್ವಿಯಾಗಿದ್ದು, ಎಲ್ಲ ತಾಲೂಕುಗಳಿಂದ ಹೆಚ್ಚು ಬೇಡಿಕೆ ಬರುತ್ತಿತ್ತು. ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾ ವಾಹನ ತೆರಳಿ ಚಿಕಿತ್ಸೆ ನೀಡುತ್ತಿರುವುದರಿಂದ ರೈತರಿಗೆ ಈ ಯೋಜನೆ ಹೆಚ್ಚು ಉಪಯೋಗವಾಗಿದೆ.

ಅಲ್ಲದೇ, ಎಲ್ಲ ತಾಲೂಕುಗಳಿಗೂ ಇದನ್ನು ವಿಸ್ತರಣೆ ಮಾಡಬೇಕು ಎಂದು ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಪಶು ಸಂಗೋಪನೆ ಇಲಾಖೆಯ ಕೇಂದ್ರ ಸಚಿವರೊಂದಿಗೆ ನಿರಂತರವಾಗಿ ಚರ್ಚೆ ನಡೆಸಿದ ಪರಿಣಾಮ ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿ ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನಗಳು ದೊರೆತಿವೆ ಎಂದರು.

ಕೇಂದ್ರದಿಂದ 44 ಕೋಟಿ ರೂ. ಅನುದಾನ:

ವಾಹನ ಒದಗಿಸಲು ಕೇಂದ್ರದಿಂದ ಒಟ್ಟು ರೂ.44 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪ್ರತಿ ಪಶು ಚಿಕಿತ್ಸಾ ವಾಹನಕ್ಕೆ ರೂ.16 ಲಕ್ಷ ವೆಚ್ಚವಾಗಲಿದೆ. ವಾರ್ಷಿಕವಾಗಿ ವಾಹನ ನಿರ್ವಹಣೆ ಪಿಪಿಪಿ ಮಾದರಿಯಲ್ಲಿ ನಡೆಯಲಿದೆ. ಪ್ರತಿ ವರ್ಷ ವಾಹನ ಹಾಗೂ ಸಿಬ್ಬಂದಿಯ ನಿರ್ವಹಣೆಗೆ ಹೆಚ್ಚುವರಿಯಾಗಿ 50 ಕೋಟಿ ರೂ. ಅನುದಾನವನ್ನು ಕೇಂದ್ರ ಹಾಗೂ ರಾಜ್ಯದ ಪಾಲುದಾರಿಕೆಯಲ್ಲಿ ನೀಡಲಾಗಿದೆ. ರಾಜ್ಯದ ಪಾಲು ಶೇ. 40 ಹಾಗೂ ಕೇಂದ್ರದ ಪಾಲು ಶೇ. 60 ಇರಲಿದೆ.

ವಾಹನದಲ್ಲಿ ಒಬ್ಬರು ಪಶು ವೈದ್ಯರು, ಪಶು ವೈದ್ಯಕೀಯ ಸಹಾಯಕ ಹಾಗೂ ನುರಿತ ಚಾಲಕ /ಪರಿಚಾರಕ ಇರಲಿದ್ದಾರೆ. ಪಶು ಕಲ್ಯಾಣ ಸಹಾಯವಾಣಿ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಸ್ಥಾಪನೆಯಾಗಿದ್ದು, ಅತ್ಯಂತ ಯಶಸ್ವಿಯಾಗಿ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪಶು ಸಂಗೋಪನೆ ಇಲಾಖೆ ಕಾರ್ಯ ಪ್ರವೃತ್ತವಾಗಿದೆ. ಇದರಿಂದಾಗಿ ಪಶು ಸಂಜೀವಿನಿ ರಾಜ್ಯಾದ್ಯಂತ ಅತ್ಯಂತ ಕ್ರ‍ಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಯೋಜನಾ ಮಾದರಿ ದೇಶಕ್ಕೆ ವಿಸ್ತರಣೆ:

ದೆಹಲಿ ಪ್ರವಾಸದ ಸಮಯದಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದಾಗ ಕರ್ನಾಟಕದಲ್ಲಿ ಕೈಗೊಂಡ ನೂತನ ಪ್ರಯೋಗ ರೈತರ ಮನೆ ಬಾಗಿಲಿಗೆ ಪಶು ಸಂಜೀವಿನಿ ಕುರಿತು ಚರ್ಚೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂದಿನ ಕೇಂದ್ರ ಪಶು ಸಂಗೋಪನಾ ಇಲಾಖೆ ಸಚಿವರಾಗಿದ್ದ ಗಿರಿರಾಜ್ ಸಿಂಗ್ ರಾಜ್ಯದ ಈ ಯೋಜನೆಯನ್ನು ಶ್ಲಾಘನೆ ಮಾಡಿದ್ದರು.

ಅಲ್ಲದೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿ ದೇಶದ ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ಇದನ್ನು ದೇಶಾದ್ಯಂತ ವಿಸ್ತರಣೆ ಮಾಡಲು ಚರ್ಚೆ ನಡೆಸುವುದಾಗಿ ತಿಳಿಸಿದ್ದರು. ಸದ್ಯ ದೇಶದ 14 ರಾಜ್ಯಗಳಿಗೆ ಕೇಂದ್ರದಿಂದ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನ ನೀಡಲಾಗಿದೆ. ರಾಜ್ಯದ ಯೋಜನಾ ಮಾದರಿ ದೇಶಕ್ಕೆ ವಿಸ್ತರಣೆಯಾಗುತ್ತಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ಅನುಷ್ಠಾನಕ್ಕೆ ತಂದ ವಿನೂತನ ಯೋಜನೆ ಪಶು ಸಂಜೀವಿನಿ ಪರಿಕಲ್ಪನೆಯನ್ನು ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ವಿಸ್ತರಣೆ ಮಾಡುತ್ತಿರುವುದರ ಬಗ್ಗೆ ಸ್ವತಃ ಕೇಂದ್ರ ಪಶುಸಂಗೋಪನೆ ಸಚಿವರು ಕರೆ ಮೂಲಕ ತಿಳಿಸಿದ್ದಾರೆ. ಇದು ಕರ್ನಾಟಕಕ್ಕೆ ಹಾಗೂ ಪಶುಸಂಗೋಪನೆ ಇಲಾಖೆಗೆ ಅತ್ಯಂತ ಸಂತೋಷದ ಸಂಗತಿ ಎಂದರು.

ರಾಜ್ಯಕ್ಕೆ 50 ಲಕ್ಷ ಡೋಸ್:

ಸದ್ಯ ರಾಜ್ಯದಲ್ಲಿ ಕಾಲುಬಾಯಿ ರೋಗ ನಿಯಂತ್ರಣದಲ್ಲಿ ಪಶು ಸಂಗೋಪನೆ ಇಲಾಖೆ ತೊಡಗಿದೆ. ಕೇಂದ್ರದಿಂದ ರಾಜ್ಯದಲ್ಲಿ 50 ಲಕ್ಷ ಡೋಸ್ ದೊರೆತಿದ್ದು, ರಾಜ್ಯದಲ್ಲಿ ಕಾಲುಬಾಯಿ ರೋಗ ಕಂಡುಬಂದ ಪ್ರದೇಶದಲ್ಲಿ ಆದ್ಯತೆಯ ಮೇಲೆ ಲಸಿಕೆ ವಿತರಣೆ ತುರ್ತಾಗಿ ಮಾಡಲಾಗುವುದು. ರೋಗೋದ್ರೇಕ ಕಂಡು ಬಂದ ಜಿಲ್ಲೆಗಳಲ್ಲಿ ರಿಂಗ್ ವ್ಯಾಕ್ಸಿನ್​​ಗೆ ಹೆಚ್ಚು ಆದ್ಯತೆ ನೀಡಿ ಕಾಲುಬಾಯಿ ರೋಗವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುತ್ತೇವೆ ಎಂದರು.

ಶೀಘ್ರದಲ್ಲೇ ಲೋಕಾರ್ಪಣೆ:

ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಅತೀ ಶೀಘ್ರದಲ್ಲೇ ಸಮಯ ನಿಗದಿ ಪಡಿಸಿ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನವನ್ನು ಲೋಕಾರ್ಪಣೆ ಮಾಡಲಾಗುವುದು. ಟಾಟಾ ಕಂಪನಿ ಜತೆ ಮಾತುಕತೆ ನಡೆಸಲಾಗಿದ್ದು, ಆದಷ್ಟು ಬೇಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚಾರಿ ಪಶು ಶಸ್ತ್ರ ಚಿಕಿತ್ಸಾ ವಾಹನ ಕಾರ್ಯ ನಿರ್ವಹಿಸಲಿವೆ. ಕರ್ನಾಟಕದಲ್ಲಿ 1962 ನಂಬರ್ ಗೆ ಕರೆ ಮಾಡಿದರೆ, ಪಶು ಸಂಜೀವಿನಿ ವಾಹನ ರೈತರ ಮನೆಗೆ ತೆರಳಲಿದೆ ಎಂದು ತಿಳಿಸಿದರು.

ರೈತರ ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಪಶುಸಂಗೋಪನೆ ಸಚಿವ ಪರಷೋತ್ತಮ್ ರೂಪಾಲ್, ಸಚಿವ ಸಂಜೀವ್ ಕುಮಾರ್ ಮಾಲ್ಯನ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಇದೇ ವೇಳೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ:

ರೈತರ ಪಶುಗಳಿಗೆ ಸಮಸ್ಯೆಯಾದರೆ ಸ್ಪಂದಿಸಲು ವಾರ್ ರೂಮ ಮಾಡಲಾಗಿದ್ದು, ಇದುವರೆಗೂ 25,000 ಕರೆಗಳು ಬಂದಿವೆ. ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ತೆರೆಯಲು 20 ಜಿಲ್ಲೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಶೀಘ್ರವೇ ಗೋಶಾಲೆ ಆರಂಭಕ್ಕೆ ಭೂಮಿ ಪೂಜೆ ಮಾಡಲಾಗುವುದು ಎಂದು ತಿಳಿಸಿದರು.

ಗೋಹತ್ಯೆ ಕಾಯ್ದೆ ಜಾರಿಗೆ ಬಂದ ನಂತರ 400.ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಬಕ್ರೀದ್ ಸಂದರ್ಭದಲ್ಲಿ 9,000 ಸಾವಿರ ಪಶುಗಳ ರಕ್ಷಣೆ ಮಾಡಲಾಗಿದೆ. ಕಾಲು ಬಾಯಿ ರೋಗಕ್ಕೆ 50 ಲಕ್ಷ ಡೋಸ್ ಲಸಿಕೆ ಬಂದಿದೆ. ಕಾಲುಬಾಯಿ ರೋಗದಿಂದ 58 ಜಾನುವಾರುಗಳು ಸಾವೀಗೀಡಾಗಿವೆ. 4,400 ಕಾನುವಾರುಗಳಿಗೆ ಕಾಲು ಬಾಯಿ ರೋಗ ಬಂದಿತ್ತು. ತಕ್ಷಣ ಲಸಿಕೆ ಹಾಕಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಿದ್ದರಾಮಯ್ಯ, ಹೆಚ್​​ಡಿಕೆ ಹೇಳಿಕೆಗೆ ಖಂಡನೆ:

ಆರ್​​ಎಸ್​​ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗಿರುತ್ತಿತ್ತು. ಆರ್​​ಎಸ್​​ಎಸ್ ಇರುವುದರಿಂದಲೇ ಭಾರತ ಉಳಿದಿದೆ. ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಮಾಜಿ ಮುಖ್ಯಮಂತ್ರಿಗಳಾಗಿದ್ದಾರೆ. ಅವರು ಈ ರೀತಿಯ ಹೇಳಿಕೆ ಸರಿಯಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.