ETV Bharat / city

ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಖದೀಮರು

author img

By

Published : Dec 3, 2020, 8:22 AM IST

ನಕಲಿ ಫೇಸ್‌ಬುಕ್‌ ಖಾತೆಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

Santosh
Santosh

ಬೆಂಗಳೂರು: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿ
ದೂರು ಪ್ರತಿ

ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ. ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.

ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿ
ದೂರು ಪ್ರತಿ

ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ. ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.

ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.