ETV Bharat / city

ಕಪಾಳಮೋಕ್ಷ ಮಾಡಿದ್ದಕ್ಕೆ ಕೊಲೆ ಮಾಡ್ತೀನಿ ಅಂತಿದ್ದವನ ಕೊಂದು ಗ್ಯಾಂಗ್​ ಎಸ್ಕೇಪ್ - latest crime news

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

murder
ಕೊಲೆ
author img

By

Published : May 31, 2020, 9:56 AM IST

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವನನ್ನು ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

20 ವರ್ಷದ ಅಸ್ಕರ್​ ಕೊಲೆಯಾದ ಯುವಕ. ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ತಬ್ರೇಜ್​ ಹಾಗೂ ಸಮೀರ್​ ಎಂಬುವವರ ಗ್ಯಾಂಗ್​ ಈತನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆ.

ಅಸ್ಕರ್ ಕೊಲೆಯಾದ ಸ್ಥಳ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಅಸ್ಕರ್​​ನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.

ಕೊಲೆಯಾದ ಅಸ್ಕರ್ ಹಾಗೂ ಆರೋಪಿ ತಬ್ರೇಜ್ ನಡುವೆ ಮೂರು ದಿನದ ಹಿಂದೆ ಗಲಾಟೆ ನಡೆದಿದ್ದು, ಈ ವೇಳೆ ತಬ್ರೇಜ್ ಕೊಲೆಯಾದ ಅಸ್ಕರ್​​ಗೆ ಕಪಾಳಕ್ಕೆ ಹೊಡೆದಿದ್ದನಂತೆ. ಇದೇ ಕಾರಣಕ್ಕೆ ತಬ್ರೇಜ್​ನನ್ನು ಕೊಲೆ ಮಾಡುವುದಾಗಿ ಅಸ್ಕರ್​ ಕೆಲವರ ಬಳಿ ಹೇಳಿಕೊಂಡಿದ್ದಾನೆ. ಇದೇ ಕಾರಣಕ್ಕೆ ಭೀತಿಗೊಂಡ ತಬ್ರೇಜ್​ ತನ್ನ ಗ್ಯಾಂಗ್​ನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವನನ್ನು ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಚುಚ್ಚಿ ಕೊಂದ ಘಟನೆ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

20 ವರ್ಷದ ಅಸ್ಕರ್​ ಕೊಲೆಯಾದ ಯುವಕ. ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ತಬ್ರೇಜ್​ ಹಾಗೂ ಸಮೀರ್​ ಎಂಬುವವರ ಗ್ಯಾಂಗ್​ ಈತನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆ.

ಅಸ್ಕರ್ ಕೊಲೆಯಾದ ಸ್ಥಳ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಅಸ್ಕರ್​​ನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.

ಕೊಲೆಯಾದ ಅಸ್ಕರ್ ಹಾಗೂ ಆರೋಪಿ ತಬ್ರೇಜ್ ನಡುವೆ ಮೂರು ದಿನದ ಹಿಂದೆ ಗಲಾಟೆ ನಡೆದಿದ್ದು, ಈ ವೇಳೆ ತಬ್ರೇಜ್ ಕೊಲೆಯಾದ ಅಸ್ಕರ್​​ಗೆ ಕಪಾಳಕ್ಕೆ ಹೊಡೆದಿದ್ದನಂತೆ. ಇದೇ ಕಾರಣಕ್ಕೆ ತಬ್ರೇಜ್​ನನ್ನು ಕೊಲೆ ಮಾಡುವುದಾಗಿ ಅಸ್ಕರ್​ ಕೆಲವರ ಬಳಿ ಹೇಳಿಕೊಂಡಿದ್ದಾನೆ. ಇದೇ ಕಾರಣಕ್ಕೆ ಭೀತಿಗೊಂಡ ತಬ್ರೇಜ್​ ತನ್ನ ಗ್ಯಾಂಗ್​ನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.