ETV Bharat / city

ರಸ್ತೆ ಗುಂಡಿಗೆ ಶಿಕ್ಷಕಿ ಬಲಿ : ಎಎಪಿಯಿಂದ ಪ್ರತಿಭಟನೆ, ಮುಖಂಡರು ಪೊಲೀಸ್ ವಶಕ್ಕೆ

author img

By

Published : Jan 31, 2022, 2:10 PM IST

ರಸ್ತೆ ಗುಂಡಿಗೆ ಶಿಕ್ಷಕಿ ಶರ್ಮಿಳಾ ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..

Aam Aadmi Party Protest
ಎಎಪಿ ಮುಖಂಡರು ಪೊಲೀಸ್ ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಬೆಂಗಳೂರು : ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಶಿಕ್ಷಕಿ ಶರ್ಮಿಳಾ ಮೃತಪಟ್ಟಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ (ಎಎಪಿ) ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿ, ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಪಘಾತ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, 'ರಸ್ತೆಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ನಾವೆಲ್ಲ ಸುಮ್ಮನಿದ್ದರೆ, ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು, ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ ಅಪಘಾತದ ಜವಾಬ್ದಾರಿ ಹೊರಬೇಕು' ಎಂದು ಆಗ್ರಹಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಹೆಚ್‌ ಡಿ ಬಸವರಾಜು ಮಾತನಾಡಿ, 'ನಾಗರಿಕರ ಜೀವವನ್ನು ರಕ್ಷಿಸುವುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಫಲರಾಗಿದ್ದಾರೆ. ರಸ್ತೆ ದುರಸ್ತಿಗೆ ಬಿಡುಗಡೆಯಾದ ಹಣವನ್ನು ಜೇಬಿಗೆ ಇಳಿಸಿಕೊಂಡು, ವಾಹನ ಸವಾರರ ಹೆಣದ ಮೇಲೆ ಆಡಳಿತ ನಡೆಸಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ಕಾರ್ಯಕರ್ತರು, ಮುಖಂಡರು ಪೊಲೀಸ್ ವಶಕ್ಕೆ: ರಸ್ತೆ ಗುಂಡಿಗೆ ಶಿಕ್ಷಕಿ ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಹೆಚ್‌.ಡಿ.ಬಸವರಾಜು, ಮೋಹನ್‌ ದಾಸರಿ, ಜಗದೀಶ್‌ ವಿ ಸದಂ ಇನ್ನಿತರ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್‌ ಇಲಾಖೆಯ ಜಂಟಿ ಆಯುಕ್ತರು ಠಾಣೆಗೆ ಆಗಮಿಸಿ ಮುಖಂಡರು, ಕಾರ್ಯಕರ್ತರ ಜತೆಗೆ ಮಾತುಕತೆ ನಡೆಸಿದರು.

ದೂರು ದಾಖಲು : ಶಾಸಕ ಎಸ್‌.ಟಿ.ಸೋಮಶೇಖರ್‌, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಎಂಡಿಯ ವಿರುದ್ಧ ಆಮ್‌ ಆದ್ಮಿ ಪಾರ್ಟಿ ದೂರು ನೀಡಿದೆ. ನಿರ್ಲಕ್ಷ್ಯದಿಂದಾಗಿ ಜನರ ಸಾವಿಗೆ ಕಾರಣವಾದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕಿ ತಲೆ ಮೇಲೆ ಹರಿದ ಗೂಡ್ಸ್​ ವಾಹನ

ಬೆಂಗಳೂರು : ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಶಿಕ್ಷಕಿ ಶರ್ಮಿಳಾ ಮೃತಪಟ್ಟಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ (ಎಎಪಿ) ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿ, ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಪಘಾತ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, 'ರಸ್ತೆಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ನಾವೆಲ್ಲ ಸುಮ್ಮನಿದ್ದರೆ, ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು, ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ ಅಪಘಾತದ ಜವಾಬ್ದಾರಿ ಹೊರಬೇಕು' ಎಂದು ಆಗ್ರಹಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಹೆಚ್‌ ಡಿ ಬಸವರಾಜು ಮಾತನಾಡಿ, 'ನಾಗರಿಕರ ಜೀವವನ್ನು ರಕ್ಷಿಸುವುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಫಲರಾಗಿದ್ದಾರೆ. ರಸ್ತೆ ದುರಸ್ತಿಗೆ ಬಿಡುಗಡೆಯಾದ ಹಣವನ್ನು ಜೇಬಿಗೆ ಇಳಿಸಿಕೊಂಡು, ವಾಹನ ಸವಾರರ ಹೆಣದ ಮೇಲೆ ಆಡಳಿತ ನಡೆಸಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ಕಾರ್ಯಕರ್ತರು, ಮುಖಂಡರು ಪೊಲೀಸ್ ವಶಕ್ಕೆ: ರಸ್ತೆ ಗುಂಡಿಗೆ ಶಿಕ್ಷಕಿ ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಹೆಚ್‌.ಡಿ.ಬಸವರಾಜು, ಮೋಹನ್‌ ದಾಸರಿ, ಜಗದೀಶ್‌ ವಿ ಸದಂ ಇನ್ನಿತರ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್‌ ಇಲಾಖೆಯ ಜಂಟಿ ಆಯುಕ್ತರು ಠಾಣೆಗೆ ಆಗಮಿಸಿ ಮುಖಂಡರು, ಕಾರ್ಯಕರ್ತರ ಜತೆಗೆ ಮಾತುಕತೆ ನಡೆಸಿದರು.

ದೂರು ದಾಖಲು : ಶಾಸಕ ಎಸ್‌.ಟಿ.ಸೋಮಶೇಖರ್‌, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಎಂಡಿಯ ವಿರುದ್ಧ ಆಮ್‌ ಆದ್ಮಿ ಪಾರ್ಟಿ ದೂರು ನೀಡಿದೆ. ನಿರ್ಲಕ್ಷ್ಯದಿಂದಾಗಿ ಜನರ ಸಾವಿಗೆ ಕಾರಣವಾದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕಿ ತಲೆ ಮೇಲೆ ಹರಿದ ಗೂಡ್ಸ್​ ವಾಹನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.