ETV Bharat / city

ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಕೀಲ ಸಿ ಎಂ ಪೂಣಚ್ಚ ಹೆಸರು ಶಿಫಾರಸು

author img

By

Published : Feb 2, 2022, 4:47 PM IST

ಇದೀಗ ಮತ್ತೊಮ್ಮೆ ಪೂಣಚ್ಚ ಅವರ ಹೆಸರನ್ನು ಪರಿಗಣಿಸುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ಪ್ರಸ್ತುತ ರಾಜ್ಯ ಹೈಕೋರ್ಟ್​ನಲ್ಲಿ ಮಂಜೂರಾಗಿರುವ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ 45 ನ್ಯಾಯಮೂರ್ತಿಗಳಷ್ಟೇ ಕಾರ್ಯ ನಿರ್ವಹಿಸುತ್ತಿದ್ದಾರೆ..

Advocate CM Poonacha
ವಕೀಲ ಚೆಪ್ಪುಡಿರ ಮೊನ್ನಪ್ಪ ಪೂಣಚ್ಚ

ಬೆಂಗಳೂರು : ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಕೊಡಗು ಮೂಲದ ವಕೀಲ ಚೆಪ್ಪುಡಿರ ಮೊನ್ನಪ್ಪ ಪೂಣಚ್ಚ ಅವರ ಹೆಸರು ಪರಿಗಣಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ಮತ್ತೊಮ್ಮೆ ಶಿಫಾರಸು ಮಾಡಿದೆ.

ಮಂಗಳವಾರದಂದು ( ಫೆಬ್ರವರಿ 1) ನಡೆದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಸಭೆಯ ವೇಳೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಿ ಎಂ ಪೂಣಚ್ಚ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ 2021ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿತ್ತು. ಶಿಫಾರಸು ಪರಿಗಣಿಸದ ಕೇಂದ್ರ ಸರ್ಕಾರ, ಕಡತವನ್ನು ಕೊಲಿಜಿಯಂಗೆ ಹಿಂದಿರುಗಿಸಿತ್ತು.

ಇದನ್ನೂ ಓದಿ: ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ಇದೀಗ ಮತ್ತೊಮ್ಮೆ ಪೂಣಚ್ಚ ಅವರ ಹೆಸರನ್ನು ಪರಿಗಣಿಸುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ಪ್ರಸ್ತುತ ರಾಜ್ಯ ಹೈಕೋರ್ಟ್​ನಲ್ಲಿ ಮಂಜೂರಾಗಿರುವ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ 45 ನ್ಯಾಯಮೂರ್ತಿಗಳಷ್ಟೇ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು : ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ಬೆಂಗಳೂರು : ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಕೊಡಗು ಮೂಲದ ವಕೀಲ ಚೆಪ್ಪುಡಿರ ಮೊನ್ನಪ್ಪ ಪೂಣಚ್ಚ ಅವರ ಹೆಸರು ಪರಿಗಣಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ಮತ್ತೊಮ್ಮೆ ಶಿಫಾರಸು ಮಾಡಿದೆ.

ಮಂಗಳವಾರದಂದು ( ಫೆಬ್ರವರಿ 1) ನಡೆದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಸಭೆಯ ವೇಳೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಿ ಎಂ ಪೂಣಚ್ಚ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ 2021ರ ಅಕ್ಟೋಬರ್​ನಲ್ಲಿ ಮೊದಲ ಬಾರಿಗೆ ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿತ್ತು. ಶಿಫಾರಸು ಪರಿಗಣಿಸದ ಕೇಂದ್ರ ಸರ್ಕಾರ, ಕಡತವನ್ನು ಕೊಲಿಜಿಯಂಗೆ ಹಿಂದಿರುಗಿಸಿತ್ತು.

ಇದನ್ನೂ ಓದಿ: ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ಇದೀಗ ಮತ್ತೊಮ್ಮೆ ಪೂಣಚ್ಚ ಅವರ ಹೆಸರನ್ನು ಪರಿಗಣಿಸುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. ಪ್ರಸ್ತುತ ರಾಜ್ಯ ಹೈಕೋರ್ಟ್​ನಲ್ಲಿ ಮಂಜೂರಾಗಿರುವ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ 45 ನ್ಯಾಯಮೂರ್ತಿಗಳಷ್ಟೇ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು : ಬಿಎಸ್‌ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.