ETV Bharat / city

ಶೋ ರೂಂ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ: ಬೆಂಗಳೂರಲ್ಲಿ ಆರೋಪಿ ಅರೆಸ್ಟ್​

ವಿನಾಯಕ ಮೋಟಾರ್ಸ್ ಶೋ ರೂಂ ಮಾಲೀಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

author img

By

Published : Jul 1, 2021, 6:28 PM IST

ಆರೋಪಿ ಅರೆಸ್ಟ್​
Arrest

ಬೆಂಗಳೂರು: ಸರಿಯಾದ ಸಮಯಕ್ಕೆ ಬುಕ್‌ ಮಾಡಿದ್ದ ಬೈಕ್ ಕೊಟ್ಟಿಲ್ಲವೆಂದು ಅಕ್ರೋಶ ವ್ಯಕ್ತಪಡಿಸಿ ಶೋ ರೂಂ ಮಾಲೀಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಎಂಎಂ ರೋಡ್ ಬಳಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಚಂದನ್ ಸಿಂಗ್ (29)ಅನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಘಟನೆ ಸಂಬಂಧ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಘಟನೆ ಹಿನ್ನೆಲೆ: ಚಂದನ್ ಸಿಂಗ್ ವಿನಾಯಕ ಮೋಟಾರ್ಸ್ ಶೋ ರೂಂ ಮಾಲೀಕನಾಗಿದ್ದು, ಕೆಲ‌ ದಿನಗಳ ಹಿಂದೆ ಆರೋಪಿಗಳು ಬೈಕ್ ಖರೀದಿಸಲು ಶೋ ರೂಮ್​ಗೆ ಬಂದಿದ್ದರು. ಮುಂಗಡವಾಗಿ 20 ಸಾವಿರ ರೂ. ನೀಡಿದ್ದರು. ಲಾಕ್​ಡೌನ್ ಹಿನ್ನೆಲೆಯಲ್ಲಿ ಶೋ ರೂಂ ಬಂದ್ ಆಗಿತ್ತು‌‌‌. ಸಕಾಲಕ್ಕೆ ಬೈಕ್ ಕೊಟ್ಟಿಲ್ಲ ಎಂದು ಕೋಪಗೊಂಡ ಆರೋಪಿಗಳು ನಿನ್ನೆ ಮಧ್ಯಾಹ್ನ ಶೋ ರೂಂ ಬಳಿ ಬಂದಿದ್ದಾರೆ. ಈ ವೇಳೆ ಬೈಕ್ ಖರೀದಿ ವಿಚಾರದಲ್ಲಿ ಚಂದನ್ ಸಿಂಗ್ ಹಾಗೂ ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಅಕ್ರೋಶಗೊಂಡ ಆರೋಪಿಗಳು ಚಂದನ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.

ಚಂದನ್ ಸಿಂಗ್ ಈ ಹಿಂದೆ ಗಾಂಜಾ‌ ಕೇಸ್​ನಲ್ಲಿ ಭಾಗಿಯಾಗಿದ್ದರಿಂದ ಪೊಲೀಸರು ಜೈಲಿಗಟ್ಟಿದ್ದರು‌. ಕೆಲ ತಿಂಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಓರ್ವ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಬೆಂಗಳೂರು: ಸರಿಯಾದ ಸಮಯಕ್ಕೆ ಬುಕ್‌ ಮಾಡಿದ್ದ ಬೈಕ್ ಕೊಟ್ಟಿಲ್ಲವೆಂದು ಅಕ್ರೋಶ ವ್ಯಕ್ತಪಡಿಸಿ ಶೋ ರೂಂ ಮಾಲೀಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಎಂಎಂ ರೋಡ್ ಬಳಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಚಂದನ್ ಸಿಂಗ್ (29)ಅನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಘಟನೆ ಸಂಬಂಧ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಘಟನೆ ಹಿನ್ನೆಲೆ: ಚಂದನ್ ಸಿಂಗ್ ವಿನಾಯಕ ಮೋಟಾರ್ಸ್ ಶೋ ರೂಂ ಮಾಲೀಕನಾಗಿದ್ದು, ಕೆಲ‌ ದಿನಗಳ ಹಿಂದೆ ಆರೋಪಿಗಳು ಬೈಕ್ ಖರೀದಿಸಲು ಶೋ ರೂಮ್​ಗೆ ಬಂದಿದ್ದರು. ಮುಂಗಡವಾಗಿ 20 ಸಾವಿರ ರೂ. ನೀಡಿದ್ದರು. ಲಾಕ್​ಡೌನ್ ಹಿನ್ನೆಲೆಯಲ್ಲಿ ಶೋ ರೂಂ ಬಂದ್ ಆಗಿತ್ತು‌‌‌. ಸಕಾಲಕ್ಕೆ ಬೈಕ್ ಕೊಟ್ಟಿಲ್ಲ ಎಂದು ಕೋಪಗೊಂಡ ಆರೋಪಿಗಳು ನಿನ್ನೆ ಮಧ್ಯಾಹ್ನ ಶೋ ರೂಂ ಬಳಿ ಬಂದಿದ್ದಾರೆ. ಈ ವೇಳೆ ಬೈಕ್ ಖರೀದಿ ವಿಚಾರದಲ್ಲಿ ಚಂದನ್ ಸಿಂಗ್ ಹಾಗೂ ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಅಕ್ರೋಶಗೊಂಡ ಆರೋಪಿಗಳು ಚಂದನ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.

ಚಂದನ್ ಸಿಂಗ್ ಈ ಹಿಂದೆ ಗಾಂಜಾ‌ ಕೇಸ್​ನಲ್ಲಿ ಭಾಗಿಯಾಗಿದ್ದರಿಂದ ಪೊಲೀಸರು ಜೈಲಿಗಟ್ಟಿದ್ದರು‌. ಕೆಲ ತಿಂಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಓರ್ವ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.