ETV Bharat / city

ಶೀಘ್ರದಲ್ಲೇ ಜನೌಷಧಿ ಕೇಂದ್ರದಲ್ಲಿ ಆಯುರ್ವೇದಿಕ್ ಔಷಧ: ಕೇಂದ್ರ ಸಚಿವ ಸದಾನಂದಗೌಡ

author img

By

Published : Nov 6, 2020, 6:47 PM IST

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಕೇಂದ್ರದ ಮೂಲಕ ಜನರಿಗೆ ಶೇ. 10ರಿಂದ ಶೇ. 90ರವರೆಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

aryuveda-medicines-selling-in-jan-aushadhi-center
ಪ್ರಧಾನಮಂತ್ರಿ ಜನೌಷಧಿ ಕೇಂದ್ರ

ಬೆಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ಕೊಡಲ್ಲ. ಆದರೆ ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿಯನ್ನು ಬೆಂಗಳೂರಿನಲ್ಲಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ವರ್ಚುವಲ್ ಮೂಲಕ ಉದ್ಘಾಟಿಸಿದ ನಂತರ ಮಾತನಾಡಿ, ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ಕೊಡುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ ಮಾಡಿದೆ. ಜನೌಷಧಿ ಮೂಲಕ ಜನರಿಗೆ ಶೇ. 10ರಿಂದ ಶೇ. 90ರವರೆಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತದೆ ಎಂದು ತಿಳಿಸಿದರು.

ಜನೆರಿಕ್ ಮೆಡಿಸಿನ್ ಆ್ಯಪ್ ನಮ್ಮಲ್ಲಿದ್ದು, ನಿಮ್ಮ ಸಮೀಪದಲ್ಲಿ ಎಲ್ಲಿ ಜನೆರಿಕ್ ಔಷಧ ಮಳಿಗೆ ಇದೆ ಎಂದು ತಿಳಿಸುತ್ತದೆ. ಜೊತೆಗೆ ನಿಮಗೆ ಬೇಕಿರುವ ಔಷಧದ ಹೆಸರನ್ನು ಹಾಕಿದರೆ ಆ ಔಷಧದ ಫಾರ್ಮೂಲಾ ಹೊಂದಿರುವ ಇತರೆ ಬ್ರಾಂಡ್​ನ ಯಾವ ಔಷಧ ಮಳಿಗೆಯಲ್ಲಿದೆ ಎಂಬುದನ್ನು ಆ್ಯಪ್ ತೋರಿಸುತ್ತದೆ. ಹೀಗಾಗಿ ರಾಜ್ಯದ ವಿವಿಧೆಡೆ ಶೀಘ್ರದಲ್ಲಿ 1000 ಜನೆರಿಕ್ ಔಷಧ ಮಳಿಗೆಗಳನ್ನು ತೆರೆಯುವ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿ ಉದ್ಘಾಟನಾ ಕಾರ್ಯಕ್ರಮ

ಸಾಮಾನ್ಯ ಕಾಯಿಲೆಯಾದ ಬಿಪಿ, ಶುಗರ್ ಇದ್ದರೆ ಬ್ರಾಂಡೆಡ್ ಔಷಧಕ್ಕೆ ಸುಮಾರು 2 ಸಾವಿರದಿಂದ ಎರಡೂವರೆ ಸಾವಿರ ರೂಪಾಯಿ ಕೊಡಬೇಕು. ಆದರೆ ಜನೌಷಧಿ ಕೇಂದ್ರಗಳ ಮೂಲಕ ಕೇವಲ 400 ರೂಪಾಯಿಯಿಂದ 500 ರೂಪಾಯಿಗಳಷ್ಟು ಖರ್ಚಾಗುತ್ತಿದೆ ಎಂದು ತಿಳಿಸಿದರು.

ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ, ಮೆಡಿಕಲ್ ಶಾಪ್​ಗಳಲ್ಲಿ ಜನೌಷಧಿಗಳನ್ನೇ ಬರೆಯುವ ಬಗ್ಗೆ ಸೂಚನೆ ನೀಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರ ಜೊತೆಗೂ ಚರ್ಚಿಸಲಾಗಿದೆ. ಒಮ್ಮೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಚಾಲನೆ ಸಿಕ್ಕರೆ ನಿಧಾನವಾಗಿ ಜನರಲ್ಲಿ ಪ್ರಚಾರ ಸಿಗುತ್ತದೆ ಎಂದರು.

ಜನೌಷಧಿ ಬಗ್ಗೆ ಪ್ರಶಂಸೆಯ ಪತ್ರ

ತಂದೆಯ ಔಷಧಕ್ಕಾಗಿ ಪ್ರತಿ ತಿಂಗಳಿಗೆ 3 ಸಾವಿರ ಖರ್ಚಾಗುತ್ತಿತ್ತು. ಆದರೆ ಜನೌಷಧಿ ಮಳಿಗೆಯಲ್ಲಿ ಕೇವಲ 210 ರೂಪಾಯಿಗಳು ಖರ್ಚಾಗುತ್ತಿದೆ ಎಂದು ನಾಗರಿಕರೊಬ್ಬರು ಬರೆದ ಪತ್ರವನ್ನು ಸಚಿವ ಸದಾನಂದಗೌಡ ಓದಿ ಹೇಳಿದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಸಹಕಾರ ಇಲಾಖೆಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಸಹಕಾರ ಇಲಾಖೆ ಮೂಲಕ ನಾವು ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನೌಷಧಿ ಸೇರಿದಂತೆ ಹಲವು ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವಂತಹ ಕಾರ್ಯಕ್ರಮಕ್ಕೆ ಸಹಕಾರವನ್ನು ನಮ್ಮ ಸಹಕಾರ ಇಲಾಖೆ ನೀಡುತ್ತಿದೆ. ಸಹಕಾರ ಇಲಾಖೆ ನಾಡಿನ ಮೂಲೆ ಮೂಲೆಗಳಲ್ಲಿ ಜನಸಂಪರ್ಕವನ್ನು ಹೊಂದಿರುವುದೇ ಇದಕ್ಕೆ ಕಾರಣ. ಸಹಕಾರಿಗಳು ಯೋಜನೆಗಳ ಅನುಷ್ಠಾನಕ್ಕೆ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.

ಬೆಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ಕೊಡಲ್ಲ. ಆದರೆ ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿಯನ್ನು ಬೆಂಗಳೂರಿನಲ್ಲಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ವರ್ಚುವಲ್ ಮೂಲಕ ಉದ್ಘಾಟಿಸಿದ ನಂತರ ಮಾತನಾಡಿ, ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ಕೊಡುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ ಮಾಡಿದೆ. ಜನೌಷಧಿ ಮೂಲಕ ಜನರಿಗೆ ಶೇ. 10ರಿಂದ ಶೇ. 90ರವರೆಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತದೆ ಎಂದು ತಿಳಿಸಿದರು.

ಜನೆರಿಕ್ ಮೆಡಿಸಿನ್ ಆ್ಯಪ್ ನಮ್ಮಲ್ಲಿದ್ದು, ನಿಮ್ಮ ಸಮೀಪದಲ್ಲಿ ಎಲ್ಲಿ ಜನೆರಿಕ್ ಔಷಧ ಮಳಿಗೆ ಇದೆ ಎಂದು ತಿಳಿಸುತ್ತದೆ. ಜೊತೆಗೆ ನಿಮಗೆ ಬೇಕಿರುವ ಔಷಧದ ಹೆಸರನ್ನು ಹಾಕಿದರೆ ಆ ಔಷಧದ ಫಾರ್ಮೂಲಾ ಹೊಂದಿರುವ ಇತರೆ ಬ್ರಾಂಡ್​ನ ಯಾವ ಔಷಧ ಮಳಿಗೆಯಲ್ಲಿದೆ ಎಂಬುದನ್ನು ಆ್ಯಪ್ ತೋರಿಸುತ್ತದೆ. ಹೀಗಾಗಿ ರಾಜ್ಯದ ವಿವಿಧೆಡೆ ಶೀಘ್ರದಲ್ಲಿ 1000 ಜನೆರಿಕ್ ಔಷಧ ಮಳಿಗೆಗಳನ್ನು ತೆರೆಯುವ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿ ಉದ್ಘಾಟನಾ ಕಾರ್ಯಕ್ರಮ

ಸಾಮಾನ್ಯ ಕಾಯಿಲೆಯಾದ ಬಿಪಿ, ಶುಗರ್ ಇದ್ದರೆ ಬ್ರಾಂಡೆಡ್ ಔಷಧಕ್ಕೆ ಸುಮಾರು 2 ಸಾವಿರದಿಂದ ಎರಡೂವರೆ ಸಾವಿರ ರೂಪಾಯಿ ಕೊಡಬೇಕು. ಆದರೆ ಜನೌಷಧಿ ಕೇಂದ್ರಗಳ ಮೂಲಕ ಕೇವಲ 400 ರೂಪಾಯಿಯಿಂದ 500 ರೂಪಾಯಿಗಳಷ್ಟು ಖರ್ಚಾಗುತ್ತಿದೆ ಎಂದು ತಿಳಿಸಿದರು.

ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ, ಮೆಡಿಕಲ್ ಶಾಪ್​ಗಳಲ್ಲಿ ಜನೌಷಧಿಗಳನ್ನೇ ಬರೆಯುವ ಬಗ್ಗೆ ಸೂಚನೆ ನೀಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರ ಜೊತೆಗೂ ಚರ್ಚಿಸಲಾಗಿದೆ. ಒಮ್ಮೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಚಾಲನೆ ಸಿಕ್ಕರೆ ನಿಧಾನವಾಗಿ ಜನರಲ್ಲಿ ಪ್ರಚಾರ ಸಿಗುತ್ತದೆ ಎಂದರು.

ಜನೌಷಧಿ ಬಗ್ಗೆ ಪ್ರಶಂಸೆಯ ಪತ್ರ

ತಂದೆಯ ಔಷಧಕ್ಕಾಗಿ ಪ್ರತಿ ತಿಂಗಳಿಗೆ 3 ಸಾವಿರ ಖರ್ಚಾಗುತ್ತಿತ್ತು. ಆದರೆ ಜನೌಷಧಿ ಮಳಿಗೆಯಲ್ಲಿ ಕೇವಲ 210 ರೂಪಾಯಿಗಳು ಖರ್ಚಾಗುತ್ತಿದೆ ಎಂದು ನಾಗರಿಕರೊಬ್ಬರು ಬರೆದ ಪತ್ರವನ್ನು ಸಚಿವ ಸದಾನಂದಗೌಡ ಓದಿ ಹೇಳಿದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಸಹಕಾರ ಇಲಾಖೆಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಸಹಕಾರ ಇಲಾಖೆ ಮೂಲಕ ನಾವು ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನೌಷಧಿ ಸೇರಿದಂತೆ ಹಲವು ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವಂತಹ ಕಾರ್ಯಕ್ರಮಕ್ಕೆ ಸಹಕಾರವನ್ನು ನಮ್ಮ ಸಹಕಾರ ಇಲಾಖೆ ನೀಡುತ್ತಿದೆ. ಸಹಕಾರ ಇಲಾಖೆ ನಾಡಿನ ಮೂಲೆ ಮೂಲೆಗಳಲ್ಲಿ ಜನಸಂಪರ್ಕವನ್ನು ಹೊಂದಿರುವುದೇ ಇದಕ್ಕೆ ಕಾರಣ. ಸಹಕಾರಿಗಳು ಯೋಜನೆಗಳ ಅನುಷ್ಠಾನಕ್ಕೆ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.