ETV Bharat / city

ಸೆಪ್ಟಂಬರ್ 8ಕ್ಕೆ ಬೆಂಗಳೂರಿನಲ್ಲಿ 'ಬಂಟರಾತಿಥ್ಯ' ಕಾರ್ಯಕ್ರಮ

author img

By

Published : Sep 6, 2019, 7:46 PM IST

ಬಂಟರ ಹೊಟೇಲ್ ಮಾಲೀಕರ ಸಂಘವು ಸೆಪ್ಟಂಬರ್ 8 ರಂದು ಬೆಂಗಳೂರಿನಲ್ಲಿ 'ಬಂಟರಾತಿಥ್ಯ' ಕಾರ್ಯಕ್ರಮವನ್ನು ಆಯೋಜಿಸಿದೆ.

ಬಂಟರ ಹೋಟಲ್ ಮಾಲೀಕರ ಸಂಘದಿಂದ ಸುದ್ಧಿಗೋಷ್ಟಿ

ಬೆಂಗಳೂರು: ಬಂಟರ ಹೊಟೇಲ್ ಮಾಲೀಕರ ಸಂಘವು ಸೆಪ್ಟಂಬರ್ 8 ರಂದು ನಗರದ ಬಂಟರ ಸಂಘದ ಭವನದಲ್ಲಿ 'ಬಂಟರಾತಿಥ್ಯ' ಬಂಟ್ಸ್​ ಹೊಟೇಲ್​ ಉದ್ದಿಮೆದಾರರ ಪ್ರಥಮ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿದೆ.

ಬಂಟರ ಹೋಟಲ್ ಮಾಲೀಕರ ಸಂಘದಿಂದ ಸುದ್ದಿಗೋಷ್ಟಿ

ಇಂದು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷರು ನಗರದ ಪ್ರೆಸ್​ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ರು.

ಈ ವೇಳೆ ಮಾತನಾಡಿದ ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಮಧುಕರ್ ಶೆಟ್ಟಿ, ಬಂಟರಾತಿಥ್ಯ ಅನ್ನೋದು ವಿಶಿಷ್ಟ ಕಾರ್ಯಕ್ರಮವಾಗಿದೆ. ಇಲ್ಲಿ ಹೊಟೇಲ್ ಉದ್ಯಮದ ಬಗ್ಗೆ ಯುವ ಉದ್ಯಮಿಗಳಿಗೆ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಸೆ.8 ರಂದು ಬೆಂಗಳೂರಿನ ಬಂಟರ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಹೊಟೇಲ್ ಉದ್ಯಮಗಳ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ಅಲ್ಲದೇ, 'ಕುರುಕ್ಷೇತ್ರಕ್ಕೊಂದು ಆಯೋಗ' ಅನ್ನೋ ಯಕ್ಷ ಪ್ರಯೋಗ ಕಾರ್ಯಕ್ರಮ, 'ಎಲ್ಲಾ ಸಮಾ ಅತ್ತು' ಎಂಬ ಕುಂದಾಪುರ ಕನ್ನಡ ಹಾಸ್ಯ ನಾಟಕವೂ ನಡೆಯಲಿದೆ. ಇನ್ನು ಸಂತೋಷ್ ಕುಮಾರ್ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ ಬಂಟರಾತಿಥ್ಯ ಕಾರ್ಯಕ್ರಮದ ಬಗ್ಗೆ ಈ ವೇಳೆ ಮಾಹಿತಿ ನೀಡಿದ್ರು.

ಸಂಜೆ 5 ಗಂಟೆಗೆ ಬಂಟರಾತಿಥ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ನಿರ್ಮಲಾನಂದ ಸ್ವಾಮೀಜಿಯವರ ನೇತೃತ್ವದ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಚಿವರಾದ ಡಾ. ಸಿ. ಅಶ್ವಥ್​ನಾರಾಯಣ, ವಿ. ಸೋಮಣ್ಣ, ಸಿ.ಟಿ. ರವಿ, ಎಂಆರ್​ಜೆ ಗ್ರೂಪ್‍ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ ಮಧುಕರ್ ಶೆಟ್ಟಿ ತಿಳಿಸಿದರು.

ಬೆಂಗಳೂರು: ಬಂಟರ ಹೊಟೇಲ್ ಮಾಲೀಕರ ಸಂಘವು ಸೆಪ್ಟಂಬರ್ 8 ರಂದು ನಗರದ ಬಂಟರ ಸಂಘದ ಭವನದಲ್ಲಿ 'ಬಂಟರಾತಿಥ್ಯ' ಬಂಟ್ಸ್​ ಹೊಟೇಲ್​ ಉದ್ದಿಮೆದಾರರ ಪ್ರಥಮ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿದೆ.

ಬಂಟರ ಹೋಟಲ್ ಮಾಲೀಕರ ಸಂಘದಿಂದ ಸುದ್ದಿಗೋಷ್ಟಿ

ಇಂದು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷರು ನಗರದ ಪ್ರೆಸ್​ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ರು.

ಈ ವೇಳೆ ಮಾತನಾಡಿದ ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಮಧುಕರ್ ಶೆಟ್ಟಿ, ಬಂಟರಾತಿಥ್ಯ ಅನ್ನೋದು ವಿಶಿಷ್ಟ ಕಾರ್ಯಕ್ರಮವಾಗಿದೆ. ಇಲ್ಲಿ ಹೊಟೇಲ್ ಉದ್ಯಮದ ಬಗ್ಗೆ ಯುವ ಉದ್ಯಮಿಗಳಿಗೆ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಸೆ.8 ರಂದು ಬೆಂಗಳೂರಿನ ಬಂಟರ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಹೊಟೇಲ್ ಉದ್ಯಮಗಳ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ಅಲ್ಲದೇ, 'ಕುರುಕ್ಷೇತ್ರಕ್ಕೊಂದು ಆಯೋಗ' ಅನ್ನೋ ಯಕ್ಷ ಪ್ರಯೋಗ ಕಾರ್ಯಕ್ರಮ, 'ಎಲ್ಲಾ ಸಮಾ ಅತ್ತು' ಎಂಬ ಕುಂದಾಪುರ ಕನ್ನಡ ಹಾಸ್ಯ ನಾಟಕವೂ ನಡೆಯಲಿದೆ. ಇನ್ನು ಸಂತೋಷ್ ಕುಮಾರ್ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ ಬಂಟರಾತಿಥ್ಯ ಕಾರ್ಯಕ್ರಮದ ಬಗ್ಗೆ ಈ ವೇಳೆ ಮಾಹಿತಿ ನೀಡಿದ್ರು.

ಸಂಜೆ 5 ಗಂಟೆಗೆ ಬಂಟರಾತಿಥ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ನಿರ್ಮಲಾನಂದ ಸ್ವಾಮೀಜಿಯವರ ನೇತೃತ್ವದ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಚಿವರಾದ ಡಾ. ಸಿ. ಅಶ್ವಥ್​ನಾರಾಯಣ, ವಿ. ಸೋಮಣ್ಣ, ಸಿ.ಟಿ. ರವಿ, ಎಂಆರ್​ಜೆ ಗ್ರೂಪ್‍ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ ಮಧುಕರ್ ಶೆಟ್ಟಿ ತಿಳಿಸಿದರು.

Intro:ಬಂಟರ ಹೊಟೆಲ್ ಮಾಲಿಕರ ಸಂಘದ " ವಿಶಿಷ್ಟ ಕಾರ್ಯಕ್ರಮ "ಬಂಟರಾತಿಥ್ಯ" ಹಾಗೂ ಹೊಟೆಲ್ ಉದ್ಯಮದ ಬಗ್ಗೆ ಮಾರ್ಗದರ್ಶನ


ಬಂಟರ ಹೊಟೇಲ್ ಮಾಲೀಕರ ಸಂಘವು ಸೆಪ್ಟಂಬರ್ 8 2019ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಬಂಟರಾತಿಥ್ಯ ಎಂಬ ಬಂಟರ ಹೊಟೇಲಿಗರ ಪ್ರಥಮ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದೆ.ಇನ್ನು ಈ ವಿಷಯವಾಗಿ ಇಂದಿ ಬಂಟರ ಹೋಟಲ್ ಮಾಲೀಕರ ಸಂಘವು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದಬಗ್ಗೆಮಾಹಿತಿನೀಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಮಧುಕರ್ ಶೆಟ್ಟಿ, ಬಂಟರಾತಿಥ್ಯ ಅನ್ನೋದು ವಿಶಿಷ್ಟಕಾರ್ಯಕ್ರಮವಾಗಿದೆ.
ಇಲ್ಲಿ ಹೊಟೇಲ್ ಉದ್ಯಮದಬಗ್ಗೆಯುವಉದ್ಯಮಿಗಳಿಗೆ
ಮಾರ್ಗದರ್ಶನವನ್ನುನೀಡಲಾಗುತ್ತದೆ. ಸೆ.8ರಂದು ಬೆಂಗಳೂರಿನ ಬಂಟರ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿಸಂಸದರಾದ ಕೆ ಜಯ ಪ್ರಕಾಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಯುವ ಉದ್ಯಮಿಗಳಿಗೆ ಹೊಟೇಲ್ ಉದ್ಯಮಗಳ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. Body:ಹಾಗೇ ಕುರುಕ್ಷೇತ್ರಕ್ಕೊಂದು ಆಯೋಗ ಅನ್ನೋ ಯಕ್ಷ ಪ್ರಯೋಗ ಕಾರ್ಯಕ್ರಮ ಹಾಗೂ ಎಲ್ಲಾ ಸಮಾ ಅತ್ತು ಅನ್ನೋ ಕುಂದಾಪ್ರ ಕನ್ನಡ ನಗೆ ನಾಟಕವೂ ನಡೆಯಲಿದೆ. ಅಲ್ಲದೆ ಸಂತೋಷ್ ಕುಮಾರ್ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಬಂಟರಾತಿಥ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ರು. ನಂತರ ಸಂಜೆ 5 ಗಂಟೆಗೆ ಬಂಟರಾತಿಥ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು
ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ .ಅಲ್ಲದೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಗುವುದು. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಸಚಿವರಾದ ಡಾ. ಸಿ. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಸಿ.ಟಿ. ರವಿ, ಎಂಆರ್‍ಜಿ ಗ್ರೂಪ್‍ನ ಚೇರ್‍ಮೆನ್ ಕೆ. ಪ್ರಕಾಶ್ ಶೆಟ್ಟಿ ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗರ ಬಂಟರ ಹೋಟೆಲ್ ಮಾಲೀಕರ ಸಂಘದ ಮಧುಕರ್ ಶೆಟ್ಟಿ ತಿಳಿಸಿದ್ರು.

ಸತೀಶ ಎಂಬಿ

( ವಿಸ್ಯುವಲ್ಸ್ ಮೊಜೊದಲ್ಲಿ ಕೊಡಲಾಗಿದೆ)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.