ETV Bharat / city

ಬಸವನಪುರ ಕೆರೆ ಒತ್ತುವರಿ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

author img

By

Published : Dec 17, 2020, 2:37 AM IST

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಬಸವನಪುರ ಕೆರೆ ಪ್ರದೇಶದ ಒತ್ತುವರಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಪಿಐಎಲ್‌ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಜ. 21ಕ್ಕೆ ಮುಂದೂಡಿದೆ.

Basavanapura lake issue; Karnataka High Court Notice to State Government
ಬಸವನಪುರ ಕೆರೆ ಒತ್ತುವರಿ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ನಗರದ ಕೆ.ಆರ್.ಪುರ ಹೋಬಳಿಯ ಬಸವನಪುರ ಕೆರೆ ಪ್ರದೇಶದ ಒತ್ತುವರಿಯನ್ನು ತೆರವು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಬಸವನಪುರ ಗ್ರಾಮದ ನಿವಾಸಿ ಎ. ವೇಲು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜ. 21ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಕೆ.ಆರ್.ಪುರ ಹೋಬಳಿಯ ಬಸವನಪುರ ಕೆರೆ ಜಾಗವನ್ನು ದಿ ಎಸ್‌ಇಎ ಗ್ರೂಪ್ ಆಫ್ ಕಾಲೇಜ್ ಎಜುಕೇಷನಲ್ ಇನ್ಸ್‌ಟಿಟ್ಯೂಟ್ ಒತ್ತುವರಿ ಮಾಡಿದೆ. ಬೆಂಗಳೂರು ನಗರ ಪೂರ್ವ ತಾಲೂಕು ತಹಶೀಲ್ದಾರ್, ಕೆರೆ ಪ್ರದೇಶವಾದ 14 ಎಕರೆ 7 ಗುಂಟೆಯನ್ನು ಸರ್ವೇ ನಡೆಸಿದ್ದಾರೆ. ನಂತರ ಒತ್ತುವರಿ ಮಾಡಲಾಗಿರುವ 29 ಗುಂಟೆ ಜಾಗವನ್ನು ತೆರವುಗೊಳಿಸುವಂತೆ 2011ರ ನ.26ರಂದು ಕಾಲೇಜಿಗೆ ನಿರ್ದೇಶಿಸಿದ್ದಾರೆ. ಆದರೆ, ಕಾಲೇಜು ಈವರೆಗೂ ಒತ್ತುವರಿ ತೆರವುಗೊಳಿಸಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ: ಹೈಕೋರ್ಟ್ ಮಹತ್ವದ ತೀರ್ಪು

ಅರ್ಜಿದಾರರ ಕೋರಿಕೆ ಮೇರೆಗೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಕೋರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರು, ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ, ಪೂರ್ವ ತಾಲೂಕು ತಹಶೀಲ್ದಾರ್, ಬಿಬಿಎಂಪಿ ಆಯುಕ್ತರಿಗೆ ಅರ್ಜಿದಾರರು ಹಲವು ಬಾರಿ ದೂರು ನೀಡಿದ್ದಾರೆ. ಆದರೆ, ಯಾರೊಬ್ಬರೂ ಕೆರೆ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಕೆರೆ ಪ್ರದೇಶದಲ್ಲಿ ಆಗಿರುವ ಒತ್ತುವರಿ ಮತ್ತು ಅಕ್ರಮ ಕಟ್ಟಡಗಳ ನಿರ್ಮಾಣವನ್ನು ತೆರೆವುಗೊಳಿಸಬೇಕು. ಕೆರೆಗೆ ಒಳಚರಂಡಿ ನೀರು ಬಿಡಲಾಗುತ್ತಿದ್ದು, ಕಟ್ಟಡ ತ್ಯಾಜ್ಯ ಮತ್ತು ಕಸವನ್ನು ಸುರಿಯಲಾಗುತ್ತಿದೆ. ಇದನ್ನು ತಡೆಯಲು ಬಿಬಿಎಂಪಿ ಹಾಗೂ ಕೆಎಸ್‌ಪಿಸಿಬಿಗೆ ನಿರ್ದೇಶಿಸಬೇಕು. ಮುಂದೆ ಕೆರೆ ಪ್ರದೇಶ ಒತ್ತುವರಿಯಾಗದಂತೆ ಸಂರಕ್ಷಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಕೆರೆ ಪ್ರದೇಶ ಒತ್ತುವರಿಯಾಗದಂತೆ ಮತ್ತು ಒಳಚರಂಡಿ ನೀರು ಸೇರದಂತೆ ಮೇಲ್ವಿಚಾರಣೆ ವಹಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸಲು ಸರ್ಕಾರಕ್ಕೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು : ನಗರದ ಕೆ.ಆರ್.ಪುರ ಹೋಬಳಿಯ ಬಸವನಪುರ ಕೆರೆ ಪ್ರದೇಶದ ಒತ್ತುವರಿಯನ್ನು ತೆರವು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಬಸವನಪುರ ಗ್ರಾಮದ ನಿವಾಸಿ ಎ. ವೇಲು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜ. 21ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಕೆ.ಆರ್.ಪುರ ಹೋಬಳಿಯ ಬಸವನಪುರ ಕೆರೆ ಜಾಗವನ್ನು ದಿ ಎಸ್‌ಇಎ ಗ್ರೂಪ್ ಆಫ್ ಕಾಲೇಜ್ ಎಜುಕೇಷನಲ್ ಇನ್ಸ್‌ಟಿಟ್ಯೂಟ್ ಒತ್ತುವರಿ ಮಾಡಿದೆ. ಬೆಂಗಳೂರು ನಗರ ಪೂರ್ವ ತಾಲೂಕು ತಹಶೀಲ್ದಾರ್, ಕೆರೆ ಪ್ರದೇಶವಾದ 14 ಎಕರೆ 7 ಗುಂಟೆಯನ್ನು ಸರ್ವೇ ನಡೆಸಿದ್ದಾರೆ. ನಂತರ ಒತ್ತುವರಿ ಮಾಡಲಾಗಿರುವ 29 ಗುಂಟೆ ಜಾಗವನ್ನು ತೆರವುಗೊಳಿಸುವಂತೆ 2011ರ ನ.26ರಂದು ಕಾಲೇಜಿಗೆ ನಿರ್ದೇಶಿಸಿದ್ದಾರೆ. ಆದರೆ, ಕಾಲೇಜು ಈವರೆಗೂ ಒತ್ತುವರಿ ತೆರವುಗೊಳಿಸಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ: ಹೈಕೋರ್ಟ್ ಮಹತ್ವದ ತೀರ್ಪು

ಅರ್ಜಿದಾರರ ಕೋರಿಕೆ ಮೇರೆಗೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಕೋರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರು, ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ, ಪೂರ್ವ ತಾಲೂಕು ತಹಶೀಲ್ದಾರ್, ಬಿಬಿಎಂಪಿ ಆಯುಕ್ತರಿಗೆ ಅರ್ಜಿದಾರರು ಹಲವು ಬಾರಿ ದೂರು ನೀಡಿದ್ದಾರೆ. ಆದರೆ, ಯಾರೊಬ್ಬರೂ ಕೆರೆ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಕೆರೆ ಪ್ರದೇಶದಲ್ಲಿ ಆಗಿರುವ ಒತ್ತುವರಿ ಮತ್ತು ಅಕ್ರಮ ಕಟ್ಟಡಗಳ ನಿರ್ಮಾಣವನ್ನು ತೆರೆವುಗೊಳಿಸಬೇಕು. ಕೆರೆಗೆ ಒಳಚರಂಡಿ ನೀರು ಬಿಡಲಾಗುತ್ತಿದ್ದು, ಕಟ್ಟಡ ತ್ಯಾಜ್ಯ ಮತ್ತು ಕಸವನ್ನು ಸುರಿಯಲಾಗುತ್ತಿದೆ. ಇದನ್ನು ತಡೆಯಲು ಬಿಬಿಎಂಪಿ ಹಾಗೂ ಕೆಎಸ್‌ಪಿಸಿಬಿಗೆ ನಿರ್ದೇಶಿಸಬೇಕು. ಮುಂದೆ ಕೆರೆ ಪ್ರದೇಶ ಒತ್ತುವರಿಯಾಗದಂತೆ ಸಂರಕ್ಷಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಕೆರೆ ಪ್ರದೇಶ ಒತ್ತುವರಿಯಾಗದಂತೆ ಮತ್ತು ಒಳಚರಂಡಿ ನೀರು ಸೇರದಂತೆ ಮೇಲ್ವಿಚಾರಣೆ ವಹಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸಲು ಸರ್ಕಾರಕ್ಕೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.