ETV Bharat / city

ಶೋಕಿ ಜೀವನಕ್ಕೆ ಬೈಕ್‌ ಕಳ್ಳತನ: ಆರೋಪಿಗಳು ಅರೆಸ್ಟ್

author img

By

Published : Aug 28, 2020, 6:43 PM IST

ಸುಲಭವಾಗಿ ದುಡ್ಡು ಮಾಡುವುದು ಹಾಗೂ ಶೋಕಿ ಜೀವನಕ್ಕಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

bike thieves were arrested in bangalore
ದ್ವಿಚಕ್ರ ವಾಹನ ಕಳ್ಳರ ಬಂಧನ

ಬೆಂಗಳೂರು: ಲಾಕ್​ಡೌನ್ ಹಾಗೂ ಇತರೆ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತರ ವಿಭಾಗದ ಆರ್​ಎಂಸಿ ಯಾರ್ಡ್ ಪೊಲೀಸರು ಯಶಸ್ವಿಯಾಗಿದ್ದಾರೆ.

ವೆಂಕಟೇಶ್ ಅಲಿಯಾಸ್ ವೆಂಕಿ, ಕಾರ್ತಿಕ್ ಅಲಿಯಾಸ್ ಕಾರ್ತಿ ಬಂಧಿತರು. ಜಯಪ್ರಕಾಶ್ ಎಂಬುವವರು ಆರ್​ಎಂಸಿ ಯಾರ್ಡ್ ಲಾರಿ ಸ್ಟಾಂಡ್ ಬಳಿ ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದರು. ಆದರೆ ವಾಹನ ಕಳ್ಳತನವಾದ ಕಾರಣ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಸುಳಿವು ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಸುಲಭವಾಗಿ ದುಡ್ಡು ಮಾಡುವುದಕ್ಕೆ ಹಾಗೂ ಶೋಕಿ ಜೀವನಕ್ಕೆ ಅಡ್ಡ ದಾರಿ ಹಿಡಿದು‌ ರಸ್ತೆ ಬದಿ, ಮನೆ ಮುಂದೆ ನಿಲ್ಲಿಸಿರುವ ವಾಹನಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ವಿಚಾರ ಗೊತ್ತಾಗಿದೆ.

ಸದ್ಯ ಆರೋಪಿಗಳಿಂದ 1.8ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ಲಾಕ್​ಡೌನ್ ಹಾಗೂ ಇತರೆ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತರ ವಿಭಾಗದ ಆರ್​ಎಂಸಿ ಯಾರ್ಡ್ ಪೊಲೀಸರು ಯಶಸ್ವಿಯಾಗಿದ್ದಾರೆ.

ವೆಂಕಟೇಶ್ ಅಲಿಯಾಸ್ ವೆಂಕಿ, ಕಾರ್ತಿಕ್ ಅಲಿಯಾಸ್ ಕಾರ್ತಿ ಬಂಧಿತರು. ಜಯಪ್ರಕಾಶ್ ಎಂಬುವವರು ಆರ್​ಎಂಸಿ ಯಾರ್ಡ್ ಲಾರಿ ಸ್ಟಾಂಡ್ ಬಳಿ ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದರು. ಆದರೆ ವಾಹನ ಕಳ್ಳತನವಾದ ಕಾರಣ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಸುಳಿವು ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಸುಲಭವಾಗಿ ದುಡ್ಡು ಮಾಡುವುದಕ್ಕೆ ಹಾಗೂ ಶೋಕಿ ಜೀವನಕ್ಕೆ ಅಡ್ಡ ದಾರಿ ಹಿಡಿದು‌ ರಸ್ತೆ ಬದಿ, ಮನೆ ಮುಂದೆ ನಿಲ್ಲಿಸಿರುವ ವಾಹನಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ವಿಚಾರ ಗೊತ್ತಾಗಿದೆ.

ಸದ್ಯ ಆರೋಪಿಗಳಿಂದ 1.8ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.