ETV Bharat / city

ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ವಿರೋಧ -

ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಗೋಪಾಲಯ್ಯ ಅವರನ್ನು ಬಿಜೆಪಿ ಸೇರಿಸಿಕೊಳ್ಳದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್​ವೈ ನಿವಾಸಕ್ಕೆ ತೆರಳಿ ಮನವಿ ಕೂಡ ಸಲ್ಲಿಸಿದ್ದಾರೆ.

ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರಿಂದ‌ ವಿರೋಧ: ಬಿಎಸ್​ವೈಗೆ ಮನವಿ ಸಲ್ಲಿಕೆ
author img

By

Published : Jul 11, 2019, 10:48 AM IST

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್​ನ ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಗೋಪಾಲಯ್ಯ ಅವರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ವಿರೋಧ

ಮಾಜಿ ಉಪಮೇಯರ್ ಹರೀಶ್ ನೇತೃತ್ವದಲ್ಲಿ, ಮಹಾಲಕ್ಷಿ ಲೇಔಟ್​ನ ಬಿಜೆಪಿ ಕಾರ್ಯಕರ್ತರ ನಿಯೋಗ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ್ರು. ಮನವಿ ಸ್ವೀಕರಿಸಿದ ಬಿಎಸ್​ವೈ, ಈಗಲೇ ಯಾವುದೇ ಆತುರದ ನಿರ್ಧಾರ ಬೇಡ. ನಂತರ ಚರ್ಚೆ ಮಾಡೋಣ ಎಂದು ತಿಳಿಹೇಳಿ ಕಳುಹಿಸಿದ್ದಾರೆ.

ಈಗಾಗಲೇ ಕೆ.ಆರ್.ಪುರಂ ಕಾರ್ಯಕರ್ತರು ಭೈರತಿ ಬಸವರಾಜ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಮಹಾಲಕ್ಷ್ಮಿ ಲೇಔಟ್ ಸರದಿಯಾಗಿದೆ. ಅಲ್ಲದೇ, ರಾಜರಾಜೇಶ್ವರಿ ನಗರ, ಶಿವಾಜಿನಗರ, ಬಿಟಿಎಂ ಲೇಔಟ್​ನಲ್ಲಿಯೂ ಕೂಡ ಅಸಮಧಾನ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್​ನ ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಗೋಪಾಲಯ್ಯ ಅವರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಜೆಡಿಎಸ್​ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ವಿರೋಧ

ಮಾಜಿ ಉಪಮೇಯರ್ ಹರೀಶ್ ನೇತೃತ್ವದಲ್ಲಿ, ಮಹಾಲಕ್ಷಿ ಲೇಔಟ್​ನ ಬಿಜೆಪಿ ಕಾರ್ಯಕರ್ತರ ನಿಯೋಗ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ್ರು. ಮನವಿ ಸ್ವೀಕರಿಸಿದ ಬಿಎಸ್​ವೈ, ಈಗಲೇ ಯಾವುದೇ ಆತುರದ ನಿರ್ಧಾರ ಬೇಡ. ನಂತರ ಚರ್ಚೆ ಮಾಡೋಣ ಎಂದು ತಿಳಿಹೇಳಿ ಕಳುಹಿಸಿದ್ದಾರೆ.

ಈಗಾಗಲೇ ಕೆ.ಆರ್.ಪುರಂ ಕಾರ್ಯಕರ್ತರು ಭೈರತಿ ಬಸವರಾಜ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಮಹಾಲಕ್ಷ್ಮಿ ಲೇಔಟ್ ಸರದಿಯಾಗಿದೆ. ಅಲ್ಲದೇ, ರಾಜರಾಜೇಶ್ವರಿ ನಗರ, ಶಿವಾಜಿನಗರ, ಬಿಟಿಎಂ ಲೇಔಟ್​ನಲ್ಲಿಯೂ ಕೂಡ ಅಸಮಧಾನ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ.

Intro:



ಬೆಂಗಳೂರು: ಬಿಜೆಪಿ ಸೇರಲು ಮುಂದಾಗಿರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರಿಂದ ಅಸಮಧಾನ ವ್ಯಕ್ತವಾಗುತ್ತಿರುವುದು ಬಹುರಂಗಗೊಂಡಿದೆ, ಕೆ.ಆರ್.ಪುರಂ ಬಳಿಕ ಇದೀಗ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.

ಮಾಜಿ ಉಪಮೇಯರ್ ಹರೀಶ್ ನೇತೃತ್ವದಲ್ಲಿ ಮಹಾಲಕ್ಷಿ ಲೇಔಟ್ ಬಿಜೆಪಿ ಕಾರ್ಯಕರ್ತರ ನಿಯೋಗ ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿತು.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಗೋಪಾಲಯ್ಯ ಅವರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಮನವಿ ಮಾಡಿತು.

ಮಹಾಲಕ್ಷ್ಮಿ ಬಡಾವಣೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿ ಸಮಾಧಾನ ಪಡಿಸಿದ ಯಡಿಯೂರಪ್ಪ ಈಗಲೇ ಯಾವುದೇ ಆತುರದ ನಿರ್ಧಾರ ಬೇಡ.ನಂತರ ಚರ್ಚೆ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿ‌ಹೇಳಿದ ಕಳುಹಿಸಿದರು.

ಈಗಾಗಲೇ ಕೆ.ಆರ್.ಪುರಂ ಕಾರ್ಯಕರ್ತರು ಭೈರತಿ ಬಸವರಾಜ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದು ಇದೀಗ ಮಹಾಲಕ್ಷ್ಮಿ ಲೇಔಟ್ ಸರದಿಯಾಗಿದೆ, ರಾಜರಾಜೇಶ್ವರು ನಗರ, ಶಿವಾಜಿನಗರ,ಬಿ.ಟಿಎಂ ಲೇಔಟ್ ನಲ್ಲಿಯೂ ಕೂಡ ಅಸಮಧಾನ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ.
Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.