ETV Bharat / city

ತಜ್ಞರು ವರದಿ ನೀಡಿದ್ದರೂ ಕೇಂದ್ರ, ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಲಿಲ್ಲ: ಸಿದ್ದರಾಮಯ್ಯ ಆಕ್ರೋಶ

author img

By

Published : Apr 23, 2021, 4:02 PM IST

ಜನ ವಿರೋಧಿ ಸ್ವಭಾವದ ಬಿಜೆಪಿ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆ ಪ್ರದರ್ಶಿಸಲಿದೆ ಎಂದು ಹೇಳಿದ್ದರು. ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು.

Siddaramaiah
Siddaramaiah

ಬೆಂಗಳೂರು: ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪ ಪಡೆಯುತ್ತಿರುವ ಈ ಸಂದರ್ಭದಲ್ಲಿ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರಲ್ಲಿ ಕೋರಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಭ್ರಷ್ಟ, ಬೇಜವಾಬ್ದಾರಿ, ಅದಕ್ಷ ಮತ್ತು ಜನವಿರೋಧಿ ಸ್ವಭಾವದ ಬಿಜೆಪಿ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು.

ಎಚ್ಚರಿಕೆ ಮರೆತು ಗೆದ್ದೆವು ಎಂದು ಬೀಗಿದರು

ಸರ್ಕಾರಗಳು ಈ ವರದಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು. ಆ ಸಂದರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೇ ಬಂದರು.

ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು. ಸಮರ್ಪಕವಾಗಿ ಟೆಸ್ಟ್‌ಗಳನ್ನು ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‌ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೇ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿವರಿಸಿದ್ದಾರೆ.

ತಜ್ಞರು ವರದಿ ನೀಡಿದ್ದರೂ ಎಚ್ಚೆತ್ತುಕೊಳ್ಳಲಿಲ್ಲ

ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಲ್ಯಾಬ್​​​ಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್​​​​ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧ ಇತ್ಯಾದಿಯಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರೆ. ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು.

ಈ ಸಿದ್ಧತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿಜೆಪಿ ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ. ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೇ ಅನ್ಯ ದಾರಿ ಇಲ್ಲ ಎಂದು ಕಿಡಿ ಕಾರಿದ್ದಾರೆ.

ತುಘಲಕ್‍ಶಾಹಿ ಆಡಳಿತ

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿಜೆಪಿ ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಾಶರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ಶಾಹಿ ಆಡಳಿತವನ್ನೇ ಬಿಜೆಪಿ ಸರ್ಕಾರ ಈಗಲೂ ಮಾಡುತ್ತಿದೆ.

ಏಕಾಏಕಿ ಕರ್ಫ್ಯೂ ಜಾರಿ

ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜ್​ ಮಾಡಿ ಓಡಿಸುವುದು, ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು ಮತ್ತು ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಕಷ್ಟದ ಸಮಯದಲ್ಲಿ ಅಕ್ಕಿ ಇಳಿಕೆ, ರಸಗೊಬ್ಬರ ಏರಿಕೆ

ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆ ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ. ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ.

ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೇ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ ಎಂದಿದ್ದಾರೆ.

ಬೆಂಗಳೂರು: ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪ ಪಡೆಯುತ್ತಿರುವ ಈ ಸಂದರ್ಭದಲ್ಲಿ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರಲ್ಲಿ ಕೋರಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಭ್ರಷ್ಟ, ಬೇಜವಾಬ್ದಾರಿ, ಅದಕ್ಷ ಮತ್ತು ಜನವಿರೋಧಿ ಸ್ವಭಾವದ ಬಿಜೆಪಿ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು.

ಎಚ್ಚರಿಕೆ ಮರೆತು ಗೆದ್ದೆವು ಎಂದು ಬೀಗಿದರು

ಸರ್ಕಾರಗಳು ಈ ವರದಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು. ಆ ಸಂದರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೇ ಬಂದರು.

ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು. ಸಮರ್ಪಕವಾಗಿ ಟೆಸ್ಟ್‌ಗಳನ್ನು ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‌ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೇ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿವರಿಸಿದ್ದಾರೆ.

ತಜ್ಞರು ವರದಿ ನೀಡಿದ್ದರೂ ಎಚ್ಚೆತ್ತುಕೊಳ್ಳಲಿಲ್ಲ

ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಲ್ಯಾಬ್​​​ಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್​​​​ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧ ಇತ್ಯಾದಿಯಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರೆ. ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು.

ಈ ಸಿದ್ಧತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿಜೆಪಿ ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ. ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೇ ಅನ್ಯ ದಾರಿ ಇಲ್ಲ ಎಂದು ಕಿಡಿ ಕಾರಿದ್ದಾರೆ.

ತುಘಲಕ್‍ಶಾಹಿ ಆಡಳಿತ

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿಜೆಪಿ ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಾಶರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ಶಾಹಿ ಆಡಳಿತವನ್ನೇ ಬಿಜೆಪಿ ಸರ್ಕಾರ ಈಗಲೂ ಮಾಡುತ್ತಿದೆ.

ಏಕಾಏಕಿ ಕರ್ಫ್ಯೂ ಜಾರಿ

ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜ್​ ಮಾಡಿ ಓಡಿಸುವುದು, ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು ಮತ್ತು ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಕಷ್ಟದ ಸಮಯದಲ್ಲಿ ಅಕ್ಕಿ ಇಳಿಕೆ, ರಸಗೊಬ್ಬರ ಏರಿಕೆ

ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆ ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ. ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ.

ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೇ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.