ETV Bharat / city

ಪ್ರವೀಣ್ ಕುಟುಂಬಕ್ಕೆ ನೆರವು ನೀಡಲು ಬಿಜೆಪಿ ಹೆಸರಲ್ಲಿ ಹಣ ಸಂಗ್ರಹ ಮಾಡುತ್ತಿಲ್ಲ, ಎಚ್ಚರ ವಹಿಸಿ: ನಿರ್ಮಲ್ ಕುಮಾರ್ ಸುರಾನಾ - BJP is not collecting money

ಪಕ್ಷದ ಹೆಸರಿನಲ್ಲಿ ಖಾಸಗಿಯಾಗಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಪರಿಹಾರ ನೀಡಲು ಹಣ ಸಂಗ್ರಹ ಮಾಡುತ್ತಿದ್ದಾರೆ. ಇದು ಪಕ್ಷದ ನಿರ್ಧಾರ ಅಲ್ಲ, ಪಕ್ಷದಿಂದ ಮಾಡಲಾಗುತ್ತಿಲ್ಲ ಎಂದು ನಿರ್ಮಲ್ ಕುಮಾರ್ ಸುರಾನಾ ಸ್ಪಷ್ಟನೆ ನೀಡಿದ್ದಾರೆ.

Nirmal Kumar Surana
ನಿರ್ಮಲ್ ಕುಮಾರ್ ಸುರಾನಾ
author img

By

Published : Jul 29, 2022, 8:22 PM IST

ಬೆಂಗಳೂರು : ಬಿಜೆಪಿ ಯುವ ಮೋಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಪರಿಹಾರ ನೀಡಲು ಪಕ್ಷದಿಂದ ಹಣ ಸಂಗ್ರಹ ಮಾಡುತ್ತಿಲ್ಲ. ಪಕ್ಷದ ಹೆಸರಿನಲ್ಲಿ ಖಾಸಗಿಯಾಗಿ ಕೆಲವರು ಧನ ಸಂಗ್ರಹ ಮಾಡುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಜನತೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರು ಇವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ ಹಾಗೂ ಮುಂದೆಯೂ ಸರ್ಕಾರ ಮತ್ತು ಪಕ್ಷ ಜೊತೆಗಿರಲಿದೆ.

ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಹಣ ಸಂಗ್ರಹ ಮಾಡಬಾರದು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ : ಸಿಎಂ ನೋಡಲು ಡೀಸೆಂಟ್ ಆಗಿ ಕಾಣುತ್ತಾರೆ; ಅವರ ನಿರ್ಣಯಗಳು ತುಂಬಾ ಸ್ಟ್ರಾಂಗ್ ಎಂದ ಕೆ ಸುಧಾಕರ್

ಬೆಂಗಳೂರು : ಬಿಜೆಪಿ ಯುವ ಮೋಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಪರಿಹಾರ ನೀಡಲು ಪಕ್ಷದಿಂದ ಹಣ ಸಂಗ್ರಹ ಮಾಡುತ್ತಿಲ್ಲ. ಪಕ್ಷದ ಹೆಸರಿನಲ್ಲಿ ಖಾಸಗಿಯಾಗಿ ಕೆಲವರು ಧನ ಸಂಗ್ರಹ ಮಾಡುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಜನತೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರು ಇವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ ಹಾಗೂ ಮುಂದೆಯೂ ಸರ್ಕಾರ ಮತ್ತು ಪಕ್ಷ ಜೊತೆಗಿರಲಿದೆ.

ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಹಣ ಸಂಗ್ರಹ ಮಾಡಬಾರದು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ : ಸಿಎಂ ನೋಡಲು ಡೀಸೆಂಟ್ ಆಗಿ ಕಾಣುತ್ತಾರೆ; ಅವರ ನಿರ್ಣಯಗಳು ತುಂಬಾ ಸ್ಟ್ರಾಂಗ್ ಎಂದ ಕೆ ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.