ETV Bharat / city

ಮತದಾರರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ: ಬಿಜೆಪಿಗೆ ಹೆಚ್​​ಡಿಕೆ ಟಾಂಗ್​​ - ಮತದಾರರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಪಕ್ಷಗಳು ಪ್ರಚಾರ ಮಾಡಲು ಸಾಧ್ಯವಾಗದಂತಹ, ನಾಯಕರು ಮಾತನಾಡಲು ಭಯಬೀಳುವಂತ ಸ್ಥಿತಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ನಿರ್ಮಾಣ ಆಗಿತ್ತು. ಆದರೂ ಜನರು ಪ್ರತಿಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಮತದಾರರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
author img

By

Published : Oct 24, 2019, 7:44 PM IST

ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಮತದಾರರನ್ನು ಯಾವಾಗಲೂ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಪ್ರಚಾರ ಮಾಡಲು ಸಾಧ್ಯವಾಗದಂತಹ, ನಾಯಕರು ಮಾತನಾಡಲು ಭಯಬೀಳುವಂತ ಸ್ಥಿತಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ನಿರ್ಮಾಣ ಆಗಿತ್ತು. ಆದರೂ ಜನರು ಪ್ರತಿಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿದೆ. ಮತದಾರರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಬರ, ನೆರೆ ಇತ್ತು. ಇಂತಹ ವಾಸ್ತವ ಸಮಸ್ಯೆಗಳ ಬಗ್ಗೆ ಗಮನಹರಿಸದೆ ಕೇವಲ 370 ವಿಧಿ ಕುರಿತು ಪ್ರಧಾನಿ ಪ್ರಚಾರ ನಡೆಸಿದರು. ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ ಕುರಿತು ಮತಗಟ್ಟೆ ಸಮೀಕ್ಷೆಗಳೆಲ್ಲಾ ಸುಳ್ಳಾಗಿವೆ. ಎರಡು ರಾಜ್ಯದಲ್ಲಿ ಗೆಲ್ಲಬೇಕೆಂಬ ಛಲದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಗೆ ಚುನಾವಣೆ ನಡೆಸಿದ್ದಾರೆ ಗೊತ್ತಿದೆ. ಆಪರೇಷನ್ ಕಮಲ ಮಾಡಿದ್ದಾರೆ. ಹೆದರಿಸಿ ಇತರೆ ಪಕ್ಷದ ಮುಖಂಡರನ್ನು ಸೆಳೆದಿದ್ದಾರೆ. ಅದಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದರು. ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದ ಉಪ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂದರು.

ಕೇಂದ್ರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ನಡೆದಿದೆ. ಸ್ವತಂತ್ರ ಸಂಸ್ಥೆಗಳು ಮುಕ್ತವಾಗಿ ಕೆಲಸ ಮಾಡದ ಅಘೋಷಿತ ತುರ್ತು ಇದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ವಿಪಕ್ಷಗಳೇ ಇರಬಾರದೆಂಬ ಬಿಜೆಪಿಯ ತೀರ್ಮಾನ ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಮತದಾರ ನೀಡಿದ್ದಾನೆ. ಇದನ್ನು ಬಿಜೆಪಿ ಮುಖಂಡರು ಅರಿತುಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಮತದಾರರನ್ನು ಯಾವಾಗಲೂ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಪ್ರಚಾರ ಮಾಡಲು ಸಾಧ್ಯವಾಗದಂತಹ, ನಾಯಕರು ಮಾತನಾಡಲು ಭಯಬೀಳುವಂತ ಸ್ಥಿತಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ನಿರ್ಮಾಣ ಆಗಿತ್ತು. ಆದರೂ ಜನರು ಪ್ರತಿಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿದೆ. ಮತದಾರರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಬರ, ನೆರೆ ಇತ್ತು. ಇಂತಹ ವಾಸ್ತವ ಸಮಸ್ಯೆಗಳ ಬಗ್ಗೆ ಗಮನಹರಿಸದೆ ಕೇವಲ 370 ವಿಧಿ ಕುರಿತು ಪ್ರಧಾನಿ ಪ್ರಚಾರ ನಡೆಸಿದರು. ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ ಕುರಿತು ಮತಗಟ್ಟೆ ಸಮೀಕ್ಷೆಗಳೆಲ್ಲಾ ಸುಳ್ಳಾಗಿವೆ. ಎರಡು ರಾಜ್ಯದಲ್ಲಿ ಗೆಲ್ಲಬೇಕೆಂಬ ಛಲದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಗೆ ಚುನಾವಣೆ ನಡೆಸಿದ್ದಾರೆ ಗೊತ್ತಿದೆ. ಆಪರೇಷನ್ ಕಮಲ ಮಾಡಿದ್ದಾರೆ. ಹೆದರಿಸಿ ಇತರೆ ಪಕ್ಷದ ಮುಖಂಡರನ್ನು ಸೆಳೆದಿದ್ದಾರೆ. ಅದಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದರು. ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದ ಉಪ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂದರು.

ಕೇಂದ್ರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ನಡೆದಿದೆ. ಸ್ವತಂತ್ರ ಸಂಸ್ಥೆಗಳು ಮುಕ್ತವಾಗಿ ಕೆಲಸ ಮಾಡದ ಅಘೋಷಿತ ತುರ್ತು ಇದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ವಿಪಕ್ಷಗಳೇ ಇರಬಾರದೆಂಬ ಬಿಜೆಪಿಯ ತೀರ್ಮಾನ ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಮತದಾರ ನೀಡಿದ್ದಾನೆ. ಇದನ್ನು ಬಿಜೆಪಿ ಮುಖಂಡರು ಅರಿತುಕೊಳ್ಳಬೇಕು ಎಂದು ಹೇಳಿದರು.

Intro:ಬೆಂಗಳೂರು : ಮಹಾರಾಷ್ಟ್ರ ಹಾಗೂ ಹರಿಯಾಣ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆ. ಮತದಾರರನ್ನು ಯಾವಾಗಲೂ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಪ್ರಚಾರ ಮಾಡಲು ಸಾಧ್ಯವಾಗದಂತಹ, ನಾಯಕರು ಮಾತನಾಡಲು ಭಯ ಬೀಳುವಂತ ಸ್ಥಿತಿ ನಿರ್ಮಾಣ ಮಾಡಿದ್ದವು. ಆದರೂ ಜನರು ಪ್ರತಿಪಕ್ಷಗಳಿಗೆ ಮನ್ನಣೆ ನೀಡಿದ್ದಾರೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿದೆ. ಮತದಾರರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಬರ, ನೆರೆ ಇತ್ತು. ಇಂತಹ ವಾಸ್ತವ ಸಮಸ್ಯೆಗಳ ಬಗ್ಗೆ ಗಮನಹರಿಸದೇ, ಕೇವಲ 370 ವಿಧಿ ಕುರಿತು ಪ್ರಧಾನಿ ಪ್ರಚಾರ ನಡೆಸಿದರು. ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ ಕುರಿತು ಮತಗಟ್ಟೆ ಸಮೀಕ್ಷೆಗಳೆಲ್ಲಾ ಸುಳ್ಳಾಗಿದೆ. ಎರಡು ರಾಜ್ಯದಲ್ಲಿ ಗೆಲ್ಲಬೇಕೆಂಬ ಛಲದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹೇಗೆ ಚುನಾವಣೆ ನಡೆಸಿದ್ದಾರೆ ಗೊತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಹೆದರಿಸಿ ಅನ್ಯ ಇತರೆ ಪಕ್ಷದ ಮುಖಂಡರನ್ನು ಸೆಳೆದಿದ್ದಾರೆ. ಅದಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದರು.
ಕೇಂದ್ರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ನಡೆದಿದೆ. ದೇಶದಲ್ಲಿ ವಿಪಕ್ಷಗಳೇ ಇರಬಾರದೆಂಬ ತೀರ್ಮಾನ ಮುಂದಿನ ದಿನಗಳು ಅಷ್ಟು ಸುಲಭವಾಗಿಲ್ಲ. ಇದನ್ನು ಬಿಜೆಪಿ ಮುಖಂಡರು ಅರಿತುಕೊಳ್ಳಬೇಕು ಎಂದು ಹೇಳಿದರು.
ಸ್ವತಂತ್ರ ಸಂಸ್ಥೆಗಳು ಮುಕ್ತ ವಾಗಿ ಕೆಲಸ ಮಾಡದ ಅನ್ ಡಿಕ್ಲೇರ್ಡ್ ಎಮರ್ಜೆನ್ಸಿ ಇದೆ. ಕೆಲವು ಮಾಧ್ಯಮ ಗಳು ನಿರ್ಬಯವಾಗಿ ಸುದ್ದಿ ಪ್ರಸಾರ ಮಾಡುತ್ತಿದ್ದೆ. ವಿರೋಧ ಪಕ್ಷಗಳು ಇಲ್ಲದ ಸ್ಥಿತಿ ನಿರ್ಮಾಣ ಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರಕ್ಕೆ , ಅದು ಸಾಧ್ಯವಿಲ್ಲ ಎಂಬ ಸಂದೇಶವನ್ನು ಮತದಾರ ನೀಡಿದ್ದಾನೆ
ದೇಶದ ಆರ್ಥಿಕ ವ್ಯವಸ್ಥೆ ದಾರಿ ತಪ್ಪಿದೆ. ದ್ವೇಷ ದ ರಾಜಕೀಯ ಮುಂದುವರಿದಿದ್ದು, ಇದರ ವಿರುದ್ದ ಎಚ್ಚರಿಸುವ ಪ್ರಯತ್ನವನ್ನು ಮತದಾರರು ಮಾಡಿದ್ದಾರೆ ಎಂದು ಇಂದಿರಾಗಾಂಧಿ ಅವರ ಎಮರ್ಜೆನ್ಸಿ ಅವಧಿಯನ್ನು ಉಲ್ಲೇಕಿಸಿದರು.
ಈ ಎರಡೂ ಚುನಾವಣಾ ಫಲಿತಾಂಶಗಳು ರಾಜ್ಯದ ಉಪ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು. ಗುಜರಾತ್ ನಲ್ಲೂ ಮತದಾರರು ಎಚ್ಚರಿಕೆ ನೀಡಿದ್ದಾರೆ. ಉಪ ಚುನಾವಣೆಗಳು ಬಿಜೆಪಿ ಪಾಲಿಗೆ ಸುಲಭವಲ್ಲ. ಕೊರ್ಟ್ ನ ಆದೇಶ ಏನಾಗುತ್ತೆ ನೋಡಬೇಕು ಎಂದ ಅವರು, ಮರ್ಸಿಲೆಸ್, ಕಾನೂನು ಬಾಹಿರ ಪ್ರಕರಣಗಳ ವರದಿ ನೋಡಿದೆ. ದೇಶದ ಕಾನೂನು ವ್ಯವಸ್ಥೆ ಬ್ರಿಟೀಷ್ ಕಾಲಕ್ಕಿಂತಲ್ಲೂ ಕೆಳ ಮಟ್ಟದಲ್ಲಿದೆ ಎಂಬ ವರದಿ ನೋಡಿರುವೆ. ಜೆ ಪಿ ಕಾಲದ ಹೋರಾಟ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.