ETV Bharat / city

ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್​​ನ 13 ಮುಖಂಡರ ವಿರುದ್ದ ಎಸಿಬಿಗೆ ದೂರು

author img

By

Published : Oct 19, 2021, 12:57 AM IST

Updated : Oct 19, 2021, 1:20 AM IST

ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಎಂಬುವವರು ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ನೀಡಿದ್ದಾರೆ.

case-filed-against-13-congress-leaders-including-rahul-gandi
ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್​​ನ 13 ಮುಖಂಡರ ವಿರುದ್ದ ದೂರು ಎಸಿಬಿಗೆ ದೂರು

ಬೆಂಗಳೂರು: ಕಾಂಗ್ರೆಸ್ ಮುಖಂಡ ಉಗ್ರಪ್ಪ ಹಾಗೂ ಸಲೀಂ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಮಿಷನ್ ದಂಧೆ ನಡೆಸುತ್ತಿದ್ದು, ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಂಭಾಷಣೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಇಬ್ಬರು ಸಾಮಾಜಿಕ ಕಾರ್ಯಕರ್ತರು ಪ್ರತ್ಯೇಕವಾಗಿ ದೂರು ನೀಡಿದ್ದಾರೆ.

ಹೆಲ್ಪಿಂಗ್ ಸಿಟಿಜನ್ ಆ್ಯಂಡ್ ಪೀಪಲ್ಸ್​ ಕೋರ್ಟ್ ಎನ್‍ಜಿಒ ಸಂಸ್ಥಾಪಕ ಅಲಂ ಪಾಷ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಎಸಿಬಿಗೆ ದೂರು ನೀಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಅಲಂಪಾಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಮಾಧ್ಯಮ ಕಾರ್ಯದರ್ಶಿ ಎಂ.ಎ. ಸಲೀಂ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.

ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ಸತ್ಯಕ್ಕೆ ಹತ್ತಿರವಾಗಿದ್ದು, ಜಲಸಂಪನ್ಮೂಲ ಇಲಾಖೆ ಸಚಿವರಾಗಿದ್ದಾಗ ಶಿವಕುಮಾರ್ ಭ್ರಷ್ಟಾಚಾರವೆಸಗಿದ್ದಾರೆ. ಡಿಕೆಶಿ 8 ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ. ಭ್ರಷ್ಟಾಚಾರದ ಮೂಲಕ 2023ರ ಚುನಾವಣೆಗಾಗಿ ಕೋಟ್ಯಂತರ ರೂಪಾಯಿ ಸಂಪಾದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣವಾಗಿ ಗೊತ್ತಿದೆ. ಅಕ್ರಮದ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ದೂರಿನಲ್ಲಿ ಅಲಂ ಪಾಷ ಆರೋಪಿಸಿದ್ದಾರೆ.

ಡಿಕೆಶಿ ಬೇನಾಮಿ ಆಸ್ತಿ: ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ನೀಡಿದ್ದಾರೆ.

ಡಿಕೆಶಿ ನಡೆಸಿರುವ ಅಕ್ರಮವು ಉಗ್ರಪ್ಪ ಮತ್ತು ಸಲೀಂ ಸಂಭಾಷಣೆಯಿಂದ ತಿಳಿದು ಬಂದಿದೆ. ಡಿ.ಕೆ ಶಿವಕುಮಾರ್ 12 ಪರ್ಸೆಂಟ್​​ ಕಮಿಷನ್ ಪಡೆಯುತ್ತಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ. ಸೋಲಾರ್ ಪ್ಲಾಂಟ್‍ಗಳಲ್ಲಿ ಅಕ್ರಮ ಹಣ ಸಂಪಾದಿಸಿದ್ದಾರೆ. ಹೆಂಚಿನ ಫ್ಯಾಕ್ಟರಿ ಬೇನಾಮಿ ಹೆಸರಿನಲ್ಲಿದೆ. ಕೃಷ್ಣಮೂರ್ತಿಯ ಹೆಸರಿನಲ್ಲಿ 100 ಕೋಟಿ ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ರವಿಕುಮಾರ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 20 ತಿಂಗಳ ಬಳಿಕ 1-5ನೇ ತರಗತಿಗೆ ಗ್ರೀನ್​ ಸಿಗ್ನಲ್​: ಅರ್ಧ ದಿನವಷ್ಟೇ ಶಾಲೆ, ಬಿಸಿಯೂಟ ಇಲ್ಲ

ಬೆಂಗಳೂರು: ಕಾಂಗ್ರೆಸ್ ಮುಖಂಡ ಉಗ್ರಪ್ಪ ಹಾಗೂ ಸಲೀಂ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಮಿಷನ್ ದಂಧೆ ನಡೆಸುತ್ತಿದ್ದು, ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಸಂಭಾಷಣೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಇಬ್ಬರು ಸಾಮಾಜಿಕ ಕಾರ್ಯಕರ್ತರು ಪ್ರತ್ಯೇಕವಾಗಿ ದೂರು ನೀಡಿದ್ದಾರೆ.

ಹೆಲ್ಪಿಂಗ್ ಸಿಟಿಜನ್ ಆ್ಯಂಡ್ ಪೀಪಲ್ಸ್​ ಕೋರ್ಟ್ ಎನ್‍ಜಿಒ ಸಂಸ್ಥಾಪಕ ಅಲಂ ಪಾಷ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಎಸಿಬಿಗೆ ದೂರು ನೀಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಅಲಂಪಾಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಮಾಧ್ಯಮ ಕಾರ್ಯದರ್ಶಿ ಎಂ.ಎ. ಸಲೀಂ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ 13 ಮಂದಿ ವಿರುದ್ಧ ದೂರು ನೀಡಿದ್ದಾರೆ.

ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ಸತ್ಯಕ್ಕೆ ಹತ್ತಿರವಾಗಿದ್ದು, ಜಲಸಂಪನ್ಮೂಲ ಇಲಾಖೆ ಸಚಿವರಾಗಿದ್ದಾಗ ಶಿವಕುಮಾರ್ ಭ್ರಷ್ಟಾಚಾರವೆಸಗಿದ್ದಾರೆ. ಡಿಕೆಶಿ 8 ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ. ಭ್ರಷ್ಟಾಚಾರದ ಮೂಲಕ 2023ರ ಚುನಾವಣೆಗಾಗಿ ಕೋಟ್ಯಂತರ ರೂಪಾಯಿ ಸಂಪಾದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣವಾಗಿ ಗೊತ್ತಿದೆ. ಅಕ್ರಮದ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ದೂರಿನಲ್ಲಿ ಅಲಂ ಪಾಷ ಆರೋಪಿಸಿದ್ದಾರೆ.

ಡಿಕೆಶಿ ಬೇನಾಮಿ ಆಸ್ತಿ: ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕೆಂಚನಹಳ್ಳಿ ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ನೀಡಿದ್ದಾರೆ.

ಡಿಕೆಶಿ ನಡೆಸಿರುವ ಅಕ್ರಮವು ಉಗ್ರಪ್ಪ ಮತ್ತು ಸಲೀಂ ಸಂಭಾಷಣೆಯಿಂದ ತಿಳಿದು ಬಂದಿದೆ. ಡಿ.ಕೆ ಶಿವಕುಮಾರ್ 12 ಪರ್ಸೆಂಟ್​​ ಕಮಿಷನ್ ಪಡೆಯುತ್ತಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ. ಸೋಲಾರ್ ಪ್ಲಾಂಟ್‍ಗಳಲ್ಲಿ ಅಕ್ರಮ ಹಣ ಸಂಪಾದಿಸಿದ್ದಾರೆ. ಹೆಂಚಿನ ಫ್ಯಾಕ್ಟರಿ ಬೇನಾಮಿ ಹೆಸರಿನಲ್ಲಿದೆ. ಕೃಷ್ಣಮೂರ್ತಿಯ ಹೆಸರಿನಲ್ಲಿ 100 ಕೋಟಿ ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ರವಿಕುಮಾರ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 20 ತಿಂಗಳ ಬಳಿಕ 1-5ನೇ ತರಗತಿಗೆ ಗ್ರೀನ್​ ಸಿಗ್ನಲ್​: ಅರ್ಧ ದಿನವಷ್ಟೇ ಶಾಲೆ, ಬಿಸಿಯೂಟ ಇಲ್ಲ

Last Updated : Oct 19, 2021, 1:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.