ETV Bharat / city

ಜಾತಿ ಗಣತಿ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ಚಿಂತನೆ?

author img

By

Published : Oct 1, 2019, 11:17 PM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ‌ಗಣತಿ) ಸಮೀಕ್ಷಾ ವರದಿಯನ್ನು‌ ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

caste-census-report

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ‌ಗಣತಿ) ಸಮೀಕ್ಷಾ ವರದಿಯನ್ನು‌ ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾತಿ ಗಣತಿ ವರದಿ ಬಿಡುಗಡೆ ಮಾಡದಿರಲು ಸರ್ಕಾರ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಆಯೋಗದಿಂದ ಗಣತಿ ನಡೆಸಲಾಗಿತ್ತು. ₹190 ಕೋಟಿ ವೆಚ್ಚದಲ್ಲಿ ನಡೆದಿದ್ದ ಆರ್ಥಿಕ ಹಾಗೂ ಶೈಕ್ಷಣಿಕ ಅಂಶಗಳುಳ್ಳ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.

ವರದಿಯಲ್ಲಿನ ಅಂಶಗಳು ಬಿಡುಗಡೆಗೂ ಮುನ್ನವೇ ಬಹಿರಂಗ ಆಗಿದ್ದವು. ಜಾತಿ ಗಣತಿ ಸಮರ್ಪಕವಾಗಿ ನಡೆದಿಲ್ಲ. ರಾಜಕೀಯ ದುರುದ್ದೇಶದಿಂದ ವರದಿ ತಯಾರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಂದು ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿಯಿಂದಲೂ ಈ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಈಗ ಅಧಿಕೃತವಾಗಿ ವರದಿ ತಿರಸ್ಕರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಅಧಿಕೃತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ‌ಗಣತಿ) ಸಮೀಕ್ಷಾ ವರದಿಯನ್ನು‌ ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾತಿ ಗಣತಿ ವರದಿ ಬಿಡುಗಡೆ ಮಾಡದಿರಲು ಸರ್ಕಾರ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಆಯೋಗದಿಂದ ಗಣತಿ ನಡೆಸಲಾಗಿತ್ತು. ₹190 ಕೋಟಿ ವೆಚ್ಚದಲ್ಲಿ ನಡೆದಿದ್ದ ಆರ್ಥಿಕ ಹಾಗೂ ಶೈಕ್ಷಣಿಕ ಅಂಶಗಳುಳ್ಳ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.

ವರದಿಯಲ್ಲಿನ ಅಂಶಗಳು ಬಿಡುಗಡೆಗೂ ಮುನ್ನವೇ ಬಹಿರಂಗ ಆಗಿದ್ದವು. ಜಾತಿ ಗಣತಿ ಸಮರ್ಪಕವಾಗಿ ನಡೆದಿಲ್ಲ. ರಾಜಕೀಯ ದುರುದ್ದೇಶದಿಂದ ವರದಿ ತಯಾರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಂದು ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿಯಿಂದಲೂ ಈ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಈಗ ಅಧಿಕೃತವಾಗಿ ವರದಿ ತಿರಸ್ಕರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಅಧಿಕೃತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

Intro:KN_BNG_05_CM_CENSUS_REPORTER_SCRIPT_9021933

ಜಾತಿ ಗಣತಿ ವರದಿ ತಿರಸ್ಕರಿಸಲು ಸಿಎಂ ಯಡಿಯೂರಪ್ಪ ಚಿಂತನೆ?

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗು ಶೈಕ್ಷಣಿಕ (ಜಾತಿ‌ಗಣತಿ) ಸಮೀಕ್ಷಾ ವರದಿಯನ್ನು‌ ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.

ಜಾತಿ ಗಣತಿ ವರದಿ ಬಿಡುಗಡೆ ಮಾಡದಿರಲು ಸರ್ಕಾರ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಆಯೋಗದಿಂದ ಗಣತಿ ನಡೆಸಲಾಗಿತ್ತು 190 ಕೋಟಿ ರೂ ವೆಚ್ಚದಲ್ಲಿ ನಡೆದಿದ್ದ ಆರ್ಥಿಕ ಹಾಗು ಶೈಕ್ಷಣಿಕ ಅಂಶಗಳುಳ್ಳ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.

ವರದಿಯಲ್ಲಿನ ಅಂಶಗಳು ಬಿಡುಗಡೆಗೂ ಮುನ್ನವೇ ಬಹಿರಂಗ ಆಗಿತ್ತು ಜಾತಿ ಗಣತಿ ವರದಿ ಸಮರ್ಪಕವಾಗಿ ನಡೆದಿಲ್ಲ ರಾಜಕೀಯ ದುರುದ್ದೇಶದಿಂದ ಜಾತಿ ಗಣತಿ ವರದಿ ತಯಾರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು
ಅಂದು ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿಯಿಂದಲೂ ಈ ಬಗ್ಗೆ ವಿರೋಧ ಇತ್ತು ಈಗ ಅಧಿಕೃತವಾಗಿ ಜಾತಿ ಗಣತಿ ವರದಿ ತಿರಸ್ಕರಿಸಲು ಸರ್ಕಾರದ ಚಿಂತನೆ ನಡೆಸಿದ್ದು ಈ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿದ ಬಳಿಕ ಅಧಿಕೃತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.