ETV Bharat / city

ಸಿಡಿ ಪ್ರಕರಣ.. ಮಗಳ ಹೇಳಿಕೆ ರದ್ದು ಕೋರಿ ಸಂತ್ರಸ್ತೆಯ ತಂದೆಯಿಂದ ಹೈಕೋರ್ಟ್​ಗೆ ಮೊರೆ

author img

By

Published : Mar 31, 2021, 7:55 PM IST

ಮಗಳನ್ನು ಕೆಲ ಕಾಲ ನಮ್ಮ ಸುಪರ್ದಿಗೆ ಒಪ್ಪಿಸಬೇಕು ಅಥವಾ ನ್ಯಾಯಾಲಯವೇ ಸೂಕ್ತವೆನ್ನಿಸುವ ಜಾಗದಲ್ಲಿ ಆಕೆಯನ್ನು ಇರಿಸಲು ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ..

cd-ladys-father-appealed-to-high-court-for-cancellation-of-her-statement
ಸಿಡಿ ಪ್ರಕರಣ : ಮಗಳ ಹೇಳಿಕೆ ರದ್ದು ಕೋರಿ ಯುವತಿ ತಂದೆಯಿಂದ ಹೈಕೋರ್ಟ್​​ಗೆ ಅರ್ಜಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ತಂದೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮಗಳು ಮ್ಯಾಜಿಸ್ಟ್ರೇಟ್ ಎದುರು ನೀಡಿರುವ ಹೇಳಿಕೆ ರದ್ದುಪಡಿಸುವಂತೆ ಕೋರಿದ್ದಾರೆ.

ಈ ಕುರಿತು ಯುವತಿಯ ತಂದೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ತಮ್ಮ ಮಗಳು ಮಾರ್ಚ್ 30ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ದಾಖಲಿಸಿದ್ದಾಳೆ. ಈ ಹೇಳಿಕೆ ರದ್ದುಪಡಿಸಬೇಕು ಎಂದು 21 ಪುಟಗಳ ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಯುವತಿಯನ್ನು ವಿಚಾರಣಾ ಕೇಂದ್ರಕ್ಕೆ‌ ಕರೆತಂದ ಎಸ್ಐಟಿ: ಧ್ವನಿ ಮಾದರಿ ಪಡೆದು ಮಹಜರು ಸಾಧ್ಯತೆ

ತಮ್ಮ ಮಗಳು ರಾಜಕೀಯ ವ್ಯಕ್ತಿಗಳ ಪ್ರಭಾವ ಹಾಗೂ ಒತ್ತಡಕ್ಕೆ ಸಿಲುಕಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ, ಹೇಳಿಕೆ ಪರಿಗಣಿಸಿದರೆ ಆಕೆಯ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಆಕೆಯನ್ನು ಒತ್ತಡಕ್ಕೆ ಸಿಲುಕಿಸಿ ಹೇಳಿಕೆ ಕೊಡಿಸುವ ಮೂಲಕ ತಮ್ಮ ಕುಟುಂಬದ ಗೌರವಕ್ಕೂ ಹಾನಿಯಾಗಿದೆ. ಸಂವಿಧಾನದ ವಿಧಿ 21ರಡಿ ಲಭ್ಯವಿರುವ ಗೌರವಯುತವಾಗಿ ಜೀವಿಸುವ ಹಕ್ಕನ್ನೂ ಉಲ್ಲಂಘಿಸಲಾಗಿದೆ.

ಆದ್ದರಿಂದ ಮಗಳನ್ನು ಕೆಲ ಕಾಲ ನಮ್ಮ ಸುಪರ್ದಿಗೆ ಒಪ್ಪಿಸಬೇಕು ಅಥವಾ ನ್ಯಾಯಾಲಯವೇ ಸೂಕ್ತವೆನ್ನಿಸುವ ಜಾಗದಲ್ಲಿ ಆಕೆಯನ್ನು ಇರಿಸಲು ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ತಂದೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮಗಳು ಮ್ಯಾಜಿಸ್ಟ್ರೇಟ್ ಎದುರು ನೀಡಿರುವ ಹೇಳಿಕೆ ರದ್ದುಪಡಿಸುವಂತೆ ಕೋರಿದ್ದಾರೆ.

ಈ ಕುರಿತು ಯುವತಿಯ ತಂದೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ತಮ್ಮ ಮಗಳು ಮಾರ್ಚ್ 30ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ದಾಖಲಿಸಿದ್ದಾಳೆ. ಈ ಹೇಳಿಕೆ ರದ್ದುಪಡಿಸಬೇಕು ಎಂದು 21 ಪುಟಗಳ ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಯುವತಿಯನ್ನು ವಿಚಾರಣಾ ಕೇಂದ್ರಕ್ಕೆ‌ ಕರೆತಂದ ಎಸ್ಐಟಿ: ಧ್ವನಿ ಮಾದರಿ ಪಡೆದು ಮಹಜರು ಸಾಧ್ಯತೆ

ತಮ್ಮ ಮಗಳು ರಾಜಕೀಯ ವ್ಯಕ್ತಿಗಳ ಪ್ರಭಾವ ಹಾಗೂ ಒತ್ತಡಕ್ಕೆ ಸಿಲುಕಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ, ಹೇಳಿಕೆ ಪರಿಗಣಿಸಿದರೆ ಆಕೆಯ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಆಕೆಯನ್ನು ಒತ್ತಡಕ್ಕೆ ಸಿಲುಕಿಸಿ ಹೇಳಿಕೆ ಕೊಡಿಸುವ ಮೂಲಕ ತಮ್ಮ ಕುಟುಂಬದ ಗೌರವಕ್ಕೂ ಹಾನಿಯಾಗಿದೆ. ಸಂವಿಧಾನದ ವಿಧಿ 21ರಡಿ ಲಭ್ಯವಿರುವ ಗೌರವಯುತವಾಗಿ ಜೀವಿಸುವ ಹಕ್ಕನ್ನೂ ಉಲ್ಲಂಘಿಸಲಾಗಿದೆ.

ಆದ್ದರಿಂದ ಮಗಳನ್ನು ಕೆಲ ಕಾಲ ನಮ್ಮ ಸುಪರ್ದಿಗೆ ಒಪ್ಪಿಸಬೇಕು ಅಥವಾ ನ್ಯಾಯಾಲಯವೇ ಸೂಕ್ತವೆನ್ನಿಸುವ ಜಾಗದಲ್ಲಿ ಆಕೆಯನ್ನು ಇರಿಸಲು ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.