ETV Bharat / city

ಚೀಟಿಂಗ್​​ ಕೇಸ್​​ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಕೊರೊನಾ:​ 11 ಪೊಲೀಸರು ಕ್ವಾರಂಟೈನ್​​​ - Corona Positive for 4 accused

ವಂಚನೆ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಮಾರತ್​​ಹಳ್ಳಿ ಪೊಲೀಸರಿಗೆ ಇದೀಗ ಕೊರೊನಾ ಆತಂಕ ಶುರುವಾಗಿದೆ.

Corona Positive
ಕೊರೊನಾ
author img

By

Published : Jun 19, 2020, 5:32 PM IST

ಬೆಂಗಳೂರು: ವಂಚನೆ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ‌ ಓರ್ವನಿಗೆ ಕೊರೊನಾ ಪಾಸಿಟಿವ್​ ಬಂದ ಪರಿಣಾಮ ಮಾರತ್​ಹಳ್ಳಿ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್​ ಡೌನ್​​ ಮಾಡಲಾಗಿದೆ.

ಘಟನೆಯ ಹಿನ್ನೆಲೆ: ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ‌ ಉದ್ಯಮಿಯಿಂದ‌ ಎರಡು ಕೋಟಿ ರೂಪಾಯಿ ಪಡೆದಿದ್ದ 4 ಆರೋಪಿಗಳು ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಇವರಿಂದ ಮೋಸ ಹೋದ ಉದ್ಯಮಿ‌‌ ಈ ಸಂಬಂಧ ಮಾರತ್​ಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿಗಳು ತಮಿಳುನಾಡಿನಲ್ಲಿ ಪತ್ತೆಯಾಗುತ್ತಿದ್ದಂತೆ ಅಲ್ಲಿಗೆ ಹೋಗಿ ಬಂಧಿಸಿ ನಗರಕ್ಕೆ ಕರೆ ತಂದಿದ್ದರು.

11 ಪೊಲೀಸರಿಗೆ ಕ್ವಾರಂಟೈನ್: ಇದೀಗ ನಾಲ್ವರು ಆರೋಪಿಗಳ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಓರ್ವನಿಗೆ ಕೊರೊನಾ‌ ಸೋಂಕು ಇರುವುದು ದೃಢವಾಗಿದೆ. ಪರಿಣಾಮ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಪೊಲೀಸರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಆರೋಪಿಗಳಿಂದ ಪೊಲೀಸರ ಮೇಲೆ ಆರೋಪ: ತಮಿಳುನಾಡಿನಿಂದ ನಗರಕ್ಕೆ ಕರೆ ತರುವಾಗ ಅರೆಸ್ಟ್​ ಮಾಡಿರುವುದನ್ನು ಹೇಳಬಾರದೆಂದರೆ 35 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಡಿಮ್ಯಾಂಡ್ ಮಾಡಿರುವುದಾಗಿ ಆರೋಪಿಗಳು ನಗರ‌ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಆರೋಪ ಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅನುಚೇತ್​​ಗೆ ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು: ವಂಚನೆ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ‌ ಓರ್ವನಿಗೆ ಕೊರೊನಾ ಪಾಸಿಟಿವ್​ ಬಂದ ಪರಿಣಾಮ ಮಾರತ್​ಹಳ್ಳಿ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್​ ಡೌನ್​​ ಮಾಡಲಾಗಿದೆ.

ಘಟನೆಯ ಹಿನ್ನೆಲೆ: ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ‌ ಉದ್ಯಮಿಯಿಂದ‌ ಎರಡು ಕೋಟಿ ರೂಪಾಯಿ ಪಡೆದಿದ್ದ 4 ಆರೋಪಿಗಳು ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಇವರಿಂದ ಮೋಸ ಹೋದ ಉದ್ಯಮಿ‌‌ ಈ ಸಂಬಂಧ ಮಾರತ್​ಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿಗಳು ತಮಿಳುನಾಡಿನಲ್ಲಿ ಪತ್ತೆಯಾಗುತ್ತಿದ್ದಂತೆ ಅಲ್ಲಿಗೆ ಹೋಗಿ ಬಂಧಿಸಿ ನಗರಕ್ಕೆ ಕರೆ ತಂದಿದ್ದರು.

11 ಪೊಲೀಸರಿಗೆ ಕ್ವಾರಂಟೈನ್: ಇದೀಗ ನಾಲ್ವರು ಆರೋಪಿಗಳ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಓರ್ವನಿಗೆ ಕೊರೊನಾ‌ ಸೋಂಕು ಇರುವುದು ದೃಢವಾಗಿದೆ. ಪರಿಣಾಮ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಪೊಲೀಸರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಆರೋಪಿಗಳಿಂದ ಪೊಲೀಸರ ಮೇಲೆ ಆರೋಪ: ತಮಿಳುನಾಡಿನಿಂದ ನಗರಕ್ಕೆ ಕರೆ ತರುವಾಗ ಅರೆಸ್ಟ್​ ಮಾಡಿರುವುದನ್ನು ಹೇಳಬಾರದೆಂದರೆ 35 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಡಿಮ್ಯಾಂಡ್ ಮಾಡಿರುವುದಾಗಿ ಆರೋಪಿಗಳು ನಗರ‌ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಆರೋಪ ಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅನುಚೇತ್​​ಗೆ ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.