ಬೆಂಗಳೂರು: ನಗರದ ಬೆಳ್ಳಂದೂರಿನ ಕರಿಯಮ್ಮನಗರದಲ್ಲಿ ರಾಜಕಾಲುವೆಗೆ ಮಲ್ಲಿಕಾ ಎಂಬ ಹೆಸರಿನ ಮಗು ಬಿದ್ದಿದ್ದು, ರಾಜಕಾಲುವೆಯಲ್ಲಿ ನೂರು ಮೀಟರ್ಗೂ ಹೆಚ್ಚು ದೂರ ಕೊಚ್ಚಿ ಹೋಗಿರುವ ಶಂಕೆ ಇದೆ.
ನೀರಿನ ಮೇಲ್ಭಾಗದಲ್ಲಿ ಕಸ, ಹುಲ್ಲು ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ರಾಜಕಾಲುವೆಯಲ್ಲಿ ನೀರು ವೇಗವಾಗಿ ಹರಿಯುತ್ತಿದ್ದು, ಸರ್ಜಾಪುರ ಮತ್ತು ಮಹದೇವಪುರ ಅಗ್ನಿಶಾಮಕ ದಳ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
25 ಜನರ ಅಗ್ನಿಶಾಮಕ ದಳ ತಂಡದವರಿಂದ ಬೋಟ್ ಮೂಲಕ ಮಗುವಿನ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಮಾರತಹಳ್ಳಿ ಪೊಲೀಸರು ಆಗಮಿಸಿದ್ದಾರೆ. ಪೊಲೀಸರು ಅಗ್ನಿಶಾಮಕ ತಂಡಕ್ಕೆ ಅಗತ್ಯ ನೆರವು ನೀಡಿದ್ದಾರೆ.