ETV Bharat / city

ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಿದರೆ ಅಭಿವೃದ್ಧಿ ಸಾಧ್ಯ: ಮೇಯರ್ ಗಂಗಾಂಬಿಕೆ

author img

By

Published : Sep 21, 2019, 6:13 AM IST

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆ ಸದಸ್ಯರು ಮೇಯರ್ ಗಂಗಾಂಬಿಕೆ ಅವರೊಂದಿಗೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಸಭೆ ನಡೆಸಿದರು.

citizen For Bangalore member s met the mayor

ಬೆಂಗಳೂರು: ನಗರದಲ್ಲಿ ರಾರಾಜಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ 'ಸಿಟಿಜನ್ಸ್ ಫಾರ್ ಬೆಂಗಳೂರು' ಸಂಘಟನೆ ಸದಸ್ಯರು ಮೇಯರ್ ಗಂಗಾಂಬಿಕೆ ಅವರೊಂದಿಗೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಕಸದ ಸಮಸ್ಯೆಯ ಜೊತೆಗೆ ನೂರಾರು ಸಮಸ್ಯೆಗಳಿವೆ. ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಸದಸ್ಯರು ಒತ್ತಾಯಿಸಿದರು. ಬಳಿಕ ಮೇಯರ್ ಗಂಗಾಂಬಿಕೆ ಮಾತನಾಡಿ, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ನಡುವೆ ಬಾಂಧವ್ಯ ಉತ್ತಮವಾಗಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ವಾರ್ಡ್​ ಅನ್ನು ಪ್ರತಿನಿಧಿಸುವ ಸ್ಥಳೀಯ ಸದಸ್ಯರಿಗೆ ಸಂಪೂರ್ಣ ಅಧಿಕಾರ ನೀಡಬೇಕು. ಜೊತೆಗೆ ಸಾರ್ವಜನಿಕರೂ ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಿ ಸಂಪರ್ಕ ಸೇತುವೆಯಾಗಿ‌ ಕೆಲಸ ಮಾಡಬೇಕು. ಆಗ ಮಾತ್ರ ವಾರ್ಡ್​ ತ್ವರಿತವಾಗಿ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ವಾರ್ಡ್​​ಗಳ‌ ಸಮಸ್ಯೆ ನಿವಾರಣೆಗೆ ಹೈಕೋರ್ಟ್​ ನಿರ್ದೇಶನದಂತೆ ಪ್ರತಿ ವಾರ್ಡ್​ಗೊಂದು ಕಡ್ಡಾಯವಾಗಿ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರು 3-4 ಸಭೆಗಳಿಗೆ ಹಾಜರಾಗದೇ ಹೋದರೆ ಅವರನ್ನು ಬದಲಿಸಬೇಕಾಗುತ್ತದೆ. ಈ ಕುರಿತು ಆ ಪಾಲಿಕೆ ಸದಸ್ಯ ಪಾಲಿಕೆಗೆ ಪತ್ರ ಬರೆಯಬೇಕು. ಬಳಿಕ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಹೊಸ ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಶೀಘ್ರ ಸುತ್ತೋಲೆ ಹೊರಡಿಸಲಾಗಿವುದು ಎಂದರು.

'ಸಿಟಿಜನ್ಸ್ ಫಾರ್ ಬೆಂಗಳೂರು' ಸಂಘಟನೆ ಹಾಗೂ ಇತರೆ ಸಂಘಟನೆಗಳು ಈ ರೀತಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಎಂದು ಕಾಲಕಾಲಕ್ಕೆ ನೆನಪಿಸುತ್ತಿವೆ. ಇದರಿಂದ ನಮಗೆ ತುಂಬಾ ಉಪಯೋಗವಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು: ನಗರದಲ್ಲಿ ರಾರಾಜಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ 'ಸಿಟಿಜನ್ಸ್ ಫಾರ್ ಬೆಂಗಳೂರು' ಸಂಘಟನೆ ಸದಸ್ಯರು ಮೇಯರ್ ಗಂಗಾಂಬಿಕೆ ಅವರೊಂದಿಗೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಕಸದ ಸಮಸ್ಯೆಯ ಜೊತೆಗೆ ನೂರಾರು ಸಮಸ್ಯೆಗಳಿವೆ. ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಸದಸ್ಯರು ಒತ್ತಾಯಿಸಿದರು. ಬಳಿಕ ಮೇಯರ್ ಗಂಗಾಂಬಿಕೆ ಮಾತನಾಡಿ, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ನಡುವೆ ಬಾಂಧವ್ಯ ಉತ್ತಮವಾಗಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ವಾರ್ಡ್​ ಅನ್ನು ಪ್ರತಿನಿಧಿಸುವ ಸ್ಥಳೀಯ ಸದಸ್ಯರಿಗೆ ಸಂಪೂರ್ಣ ಅಧಿಕಾರ ನೀಡಬೇಕು. ಜೊತೆಗೆ ಸಾರ್ವಜನಿಕರೂ ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಿ ಸಂಪರ್ಕ ಸೇತುವೆಯಾಗಿ‌ ಕೆಲಸ ಮಾಡಬೇಕು. ಆಗ ಮಾತ್ರ ವಾರ್ಡ್​ ತ್ವರಿತವಾಗಿ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ವಾರ್ಡ್​​ಗಳ‌ ಸಮಸ್ಯೆ ನಿವಾರಣೆಗೆ ಹೈಕೋರ್ಟ್​ ನಿರ್ದೇಶನದಂತೆ ಪ್ರತಿ ವಾರ್ಡ್​ಗೊಂದು ಕಡ್ಡಾಯವಾಗಿ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರು 3-4 ಸಭೆಗಳಿಗೆ ಹಾಜರಾಗದೇ ಹೋದರೆ ಅವರನ್ನು ಬದಲಿಸಬೇಕಾಗುತ್ತದೆ. ಈ ಕುರಿತು ಆ ಪಾಲಿಕೆ ಸದಸ್ಯ ಪಾಲಿಕೆಗೆ ಪತ್ರ ಬರೆಯಬೇಕು. ಬಳಿಕ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಹೊಸ ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಶೀಘ್ರ ಸುತ್ತೋಲೆ ಹೊರಡಿಸಲಾಗಿವುದು ಎಂದರು.

'ಸಿಟಿಜನ್ಸ್ ಫಾರ್ ಬೆಂಗಳೂರು' ಸಂಘಟನೆ ಹಾಗೂ ಇತರೆ ಸಂಘಟನೆಗಳು ಈ ರೀತಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಎಂದು ಕಾಲಕಾಲಕ್ಕೆ ನೆನಪಿಸುತ್ತಿವೆ. ಇದರಿಂದ ನಮಗೆ ತುಂಬಾ ಉಪಯೋಗವಾಗುತ್ತಿದೆ ಎಂದು ಹೇಳಿದರು.

Intro:ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆ ಜೊತೆ ಮೇಯರ್ ಸಭೆ..!!

ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆಯ ಸದಸ್ಯರು ಇಂದು ಬಿಬಿಎಮ್ ಪಿ ಮೇಯರ್ ಗಂಗಾಭಿಕೆ ಜೊತೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಸಭೆನಡೆಸಲಾಯಿತು.
ಇದೇ ವೇಳೆ ಸಂಘಟನೆಯ ಸದ್ಯಸ್ಯರ ಜೊತೆ ಮಾತನಾಡಿದ ಮೇಯರ್ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ನಡುವೆ ಬಾಂಧವ್ಯ ಚನ್ನಾಗಿದ್ದರೆ ಮಾತ್ರ ನಗರ ಅಥವಾ ವಾರ್ಡ್ ಅಭಿವೃದ್ಧಿಗೊಳಿಸಲು ಸಾಧ್ಯ.
ಅಲ್ಲದೆ ಒಂದು ವಾರ್ಡ್ ಅನ್ನು ಪ್ರತಿನಿಧಿಸುವ ಸ್ಥಳೀಯ ಸದಸ್ಯರಿಗೆ ಸಂಪೂರ್ಣ ಅಧಿಕಾರ ಕೊಡಬೇಕು. ಜೊತೆಗೆ ಸ್ಥಳಿಯ ಸಾರ್ವಜನಿಕರು ಜನಪ್ರತಿನಿಧಿಗಳ ಜೊತೆ ಕೈಜೋಡಿಸಿ ಸಂಪರ್ಕ ಸೇತುವೆಯಾಗಿ‌ ಕೆಲಸ ಮಾಡಿದರೆ ಮಾತ್ರ ವಾರ್ಡ್ ಅನ್ನು‌ ತ್ವರಿತವಾಗಿ ಅಭಿವೃದ್ಧಿ ಗೊಳಿಸಬಹುದು ಎಂದು ತಿಳಿಸಿದರು.ಜೊತೆಗೆ ವಾರ್ಡ್ ಗಳ‌ ಸಮಸ್ಯೆ ನಿವಾರಣೆ ಮಾಡಲು ಹೈಕೊರ್ಟ್ ನಿರ್ದೇಶನದಂತೆ ಪ್ರತಿ ವಾರ್ಡ್ ನಲ್ಲೂ ಕಡ್ಡಾಯವಾಗಿ ಸಮಿತಿ ರಚನೆ ಮಾಡಲಾಗಿದೆ. Body:ಅಲ್ಲಿ ಇರುವ ಎಲ್ಲಾ ಸಮಸ್ಯೆಗಳನ್ನು ನಿವಾತಣೆ ಮಾಡಿಕೊಳ್ಳಬಹುದಾಗಿದೆ.
ಅಲ್ಲದೆ ವಾರ್ಡ್ ಸಮಿತಿಯಲ್ಲಿರುವ ಸದಸ್ಯರು ಮೂರ್ನಾಲ್ಕು ಸಭೆಗಳಿಗೆ ಹಾಜರಾಗದೆ ಇದ್ದ ಪಕ್ಷದಲ್ಲಿ ಅವರನ್ನು ಬದಲಿಸಬೇಕಾದ‌ ಅನಿವರ್ಯತೆ ಬಂದ್ರೆ ಆ ವಾರ್ಡ್ ಪ್ರತಿನಿಧಿಸುವ ಕಾರ್ಪೊರೇಟರ್ ಪಾಲಿಕೆಗೆ ಪತ್ರ ಬರೆಯಬೇಕು. ಬಳಿಕ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಹೊಸ ಸದಸ್ಯರನ್ನು ಆಯ್ಕೆ ಮಾಡಬೇಕು. ಈ ಬಗ್ಗೆ ಶೀಘ್ರ ಸುತ್ತೋಲೆ ಹೊರಡಿಸಲಾಗಿವುದು ಎಂದು ತಿಳಿಸಿದರು. ಇನ್ನೂ ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆ ಹಾಗೂ ಇತರೆ ಸಂಘಟನೆಗಳು ಜನಪ್ರತಿನಿಧಿಗಳಿಗೆ ಕಾಲಕಾಲಕ್ಕೆ ಈ ರೀತಿಯ ಸಮಸ್ಯೆಗಳು ಕೂಡಲೆ ಇತ್ಯರ್ಥಪಡಿಸಿ ಎಂದು ಪದೇ ಪದೆ ನೆನಪಿಸುತ್ತಾರೆ. ಇದರಿಂದ ನನಗೆ ತುಂಬಾ ಉಪಯೋಗವಾಯಿತು‌. ಉತ್ತಮ ಕೆಲಸ ಮಾಡಲು ಸಹಕಾರಿಯಾಗಿದೆ ಎಂದು ಮೇಯರ್ ಗಂಗಾಭಿಕೆ ಹೇಳಿದ್ರು.

ಸತೀಶ ಎಂಬಿConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.